ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

ಕರ್ಜೂರದ ರುಚಿ ಕಂಡವರು ತಿನ್ನೋದನ್ನು ಬಿಡೋದಿಲ್ಲ. ಈ ಕರ್ಜೂರದಲ್ಲಿ ಕಬ್ಬಿಣ, ಖನಿಜಾಂಶ, ಕ್ಯಾಲ್ಸಿಯಂ, ಅಮೈನೊ ಆ್ಯಸಿಡ್, ರಂಜಕ ಹಾಗೂ ವಿಟಮಿನ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಮಧುಮೇಹಿಗಳಿಗೆ ಇದು ಒಳ್ಳೆಯದು.

ದೇಹದಲ್ಲಿ ರಕ್ತ ಕಡಿಮೆಯಿರುವವರು ಪ್ರತಿದಿನ ಕರ್ಜೂರವನ್ನು ತಿನ್ನುವುದು ಬಹಳ ಒಳ್ಳೆಯದು. ಇದ್ರಲ್ಲಿರುವ ಕಬ್ಬಿಣಾಂಶ ರಕ್ತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.ಕರ್ಜೂರದಲ್ಲಿರುವ ವಿಟಮಿನ್ ಬಿ ಕೂದಲಿಗೆ ಒಳ್ಳೆಯದು. ನಿಯಮಿತವಾಗಿ ಕರ್ಜೂರ ಸೇವನೆ ಮಾಡುವುದ್ರಿಂದ ಕೂದಲುದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಫ್ರಕ್ಟೋಸ್, ಸುಕ್ರೋಸ್ ಮತ್ತು ಗ್ಲೂಕೋಸ್ ಸಾಕಷ್ಟಿರುತ್ತದೆ. ಹಾಗಾಗಿ ಕರ್ಜೂರ ತಿಂದ ತಕ್ಷಣ ಶಕ್ತಿ ಉತ್ಪತ್ತಿಯಾಗುತ್ತದೆ. ಎರಡರಿಂದ ನಾಲ್ಕು ಕರ್ಜೂರ ಸೇವನೆ ಮಾಡಿದ್ರೆ ದೇಹಕ್ಕೆ ಶಕ್ತಿ ಸಿಗುತ್ತದೆ.

ಕಡಿಮೆ ತೂಕವುಳ್ಳವರು ಅವಶ್ಯವಾಗಿ ಕರ್ಜೂರ ತಿನ್ನಬೇಕು. ಇದ್ರಲ್ಲಿರುವ ವಿಟಮಿನ್, ಸಕ್ಕರೆ ಅಂಶ, ಜೀವಸತ್ವಗಳು ತೂಕ ಏರಲು ಸಹಾಯ ಮಾಡುತ್ತವೆ.ಕರ್ಜೂರ ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ತಾಮ್ರವನ್ನು ಒಳಗೊಂಡಿರುವುದ್ರಿಂದ ಮೂಳೆಗಳು ಬಲ ಪಡೆಯುತ್ತವೆ.

ಮಲಬದ್ಧತೆ ಸಮಸ್ಯೆಯುಳ್ಳವರು ಅವಶ್ಯವಾಗಿ ಕರ್ಜೂರ ಸೇವನೆ ಮಾಡಬೇಕು. ರಾತ್ರಿ ನಾಲ್ಕು ಕರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಇದನ್ನು ಸೇವನೆ ಮಾಡುತ್ತ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ಒಂದೇ ಒಂದು ದಿನ ಸ್ನಾನ ಮಾಡದಿದ್ದರೂ ಕೆಟ್ಟ ವಾಸನೆ ಬರುತ್ತದೆ. ಇನ್ನು 60 ವರ್ಷಗಳು ಎಂದರೆ ಹೇಗಿರುತ್ತದೆ!? ಇಷ್ಟಕ್ಕೂ ಅಷ್ಟು ವರ್ಷಗಳ ಕಾಲ ಸ್ನಾನ ಮಾಡದೆ ಯಾರಾದರೂ ಇರುತ್ತಾರಾ…? ನಿಜವಾಗಿಯೂ ಅಂತಹವರು ಇದ್ದರೆ ಅವರ ಬಳಿ ಹೋಗಬೇಕೆಂದರೇನೇ ಸಾಹಸ ಮಾಡಬೇಕು.
ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ಸರ್ಕಾರ ಉಳಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಮುಂದಾಗಿದ್ದು, ಡಿಸಿಎಂ ಜಿ.ಪರಮೇಶ್ವರ್ ಸೇರಿದಂತೆ ಮಾಜಿ ಸಿಎಂ ಆಪ್ತರೆಲ್ಲ ರಾಜೀನಾಮೆ ನೀಡಿದ್ದಾರೆ. ಇಂದು ಬೆಳಗ್ಗೆ ಪರಮೇಶ್ವರ್ ಅವರು ಕರೆದ ಉಪಹಾರ ಕೂಟಕ್ಕೆ ಆಗಮಿಸಿದ್ದ ಎಲ್ಲ ಸಚಿವರು ತಮ್ಮ ಶಾಸಕಾಂಗ ಸಭೆಯ ನಾಯಕ ಸಿದ್ದರಾಮಯ್ಯರಿಗೆ ರಾಜೀನಾಮೆ ನೀಡಿದ್ದಾರೆ. ಜಿ.ಪರಮೇಶ್ವರ್, ಡಿ.ಕೆ.ಶಿವಕುಮಾರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೃಷ್ಣೆಬೈರೇಗೌಡರು ಸೇರಿದಂತೆ ಎಲ್ಲ 22 ಸಚಿವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ನೀಡಿದ್ದಾರೆ. ಇತ್ತ ರಾಜೀನಾಮೆ ನೀಡಿ ಹೊರ ಬಂದು ಮಾತನಾಡಿದ ಸಚಿವ ರಹೀಂಖಾನ್, ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ…
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.