ಸುದ್ದಿ

ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

61

ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ,

ಬಹುತೇಕ ಎಲ್ಲಾ ಜಲಾಶಯಗಳಲ್ಲಿ ಡೆಡ್ ಸ್ಟೋರೆಜ್ ಹಂತ ತಲುಪಿದ್ದು, ಕುಡಿಯಲು ನೀರು ಇಲ್ಲದ ಪರಿಸ್ಥಿತಿ ಎದುರಾಗಿದೆ.ಒಟ್ಟಾರೆ, ಕರ್ನಾಟಕದ ಕಾವೇರಿ ಜಲನಯನ ಪ್ರದೇಶದಲ್ಲಿ 3 ರಿಂದ 4 ಟಿಎಂಸಿ ಇರಬಹುದು, ಇದರಲ್ಲಿ ಮುಂದಿನ ಮಳೆಗಾಲದವರೆಗೂ ಕುಡಿಯುವ ನೀರಿನ ಪೂರೈಕೆಗೆ ಬಳಸಬೇಕಾಗುತ್ತದೆ. ಆದರೆ, ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ಅವೈಜ್ಞಾನಿಕ ಎಂದು ಕರ್ನಾಟಕದ ಪ್ರತಿನಿಧಿಗಳು ವಾದಿಸಿದ್ದಾರೆ.ಎರಡು ರಾಜ್ಯಗಳಲ್ಲಿ ಮಳೆ ಅಭಾವ ಎರಡು ರಾಜ್ಯಗಳಲ್ಲೂ ಮಳೆ ಅಭಾವ ಕಾಡುತ್ತಿದೆ. ಕರ್ನಾಟಕದಲ್ಲಿ ಈ ಬಾರಿ ಮುಂಗಾರುಮಳೆ ಪ್ರವೇಶ ವಿಳಂಬವಾಗಲಿದ್ದು, ಜೂನ್ 8ರ ನಂತರ ಮೊದಲ ಮಳೆ ಸಿಂಚನ ಸಾಧ್ಯತೆಯಿದೆ. ಕಳೆದ ವಾರದಿಂದ ದಕ್ಷಿಣ ಒಳನಾಡಿನಲ್ಲಿ ಸುರಿದ ಗಾಳಿ ಮಳೆಯಿಂದ ಹಾನಿ ಪ್ರಮಾಣವೇ ಅಧಿಕವಾಗಿದೆ ಎಂದು ಕರ್ನಾಟಕದ ಜಲ ಸಂಪನ್ಮೂಲ ಕಾರ್ಯದರ್ಶಿ ರಾಕೇಶ್ ಸಿಂಗ್ ವಾದಿಸಿದ್ದಾರೆ.

ನಮಗೆ ಕುಡಿಯುವ ನೀರಿಲ್ಲ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 81.37 ಅಡಿಗಳಷ್ಟು ನೀರಿದೆ. ಒಟ್ಟಾರೆ 11 ಟಿಎಂಸಿಯಷ್ಟು ನೀರು ಹೊಂದಿದ್ದು, ನಮಗೆ ಕುಡಿಯಲು ನೀರಿಲ್ಲ, ಮಳೆ ಶುರುವಾಗಿ, ನೀರು ಬಂದರೆ ಮಾತ್ರ ಆದೇಶ ಪಾಲಿಸಲು ಸಾಧ್ಯ, ಈ ಬಗ್ಗೆ ನೂತನ ಸಂಸದೆ ಸುಮಲತಾ ಅಂಬರೀಷ್ ಅವರು ಮೋದಿ ಅವರ ಜೊತೆ ಮಾತನಾಡಬೇಕಿದೆ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದಾರೆ.ಆದೇಶದಲ್ಲಿ ಏನಿದೆ ಷರತ್ತು? ಕಾವೇರಿ ಪ್ರಾಧಿಕಾರದ ಇಂದಿನ ಸಭೆಯಲ್ಲಿ ಕಾವೇರಿ ಕಣಿವೆ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಲಭ್ಯ ನೀರಿನ ಪ್ರಮಾಣ, ಮಳೆ ಮುನ್ಸೂಚನೆ, ಬರ ಪರಿಸ್ಥಿತಿ, ಜಲ ನಿರ್ವಹಣೆ, ನೀರು ಹಂಚಿಕೆ ಸೇರಿದಂತೆ ಅನೇಕ ವಿಷಯಗಳನ್ನು ಚರ್ಚಿಸಲಾಗಿದೆ. ಜಲಾಶಯಕ್ಕೆ ಒಳ ಹರಿವು ಅಧಿಕವಾದರೆ ತಮಿಳುನಾಡಿಗೆ ನಿಗದಿಯಂತೆ ನೀರು ಹರಿಸಬೇಕು ಎಂದು ಹೇಳಲಾಗಿದೆ. ತಕ್ಷಣವೇ ನೀರು ಬಿಡುವ ಒತ್ತಡ ಹೇರಿಲ್ಲದ ಕಾರಣ, ಸದ್ಯಕ್ಕೆ ರಾಜ್ಯಕ್ಕೆ ಆತಂಕವಿಲ್ಲಒಳ ಹರಿವು ಬರದೇ ಇದ್ದಲ್ಲಿ ಏನು ಗತಿ? ಒಳ ಹರಿವು ಬರದೇ ಇದ್ದಲ್ಲಿ ನೀರು ಹರಿಸುವ ಅಗತ್ಯವಿಲ್ಲ. ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಒಟ್ಟು 14 ಟಿಎಂಸಿ ನೀರಿದ್ದು, ಬೆಂಗಳೂರಿಗೆ ಪ್ರತಿ ತಿಂಗಳಿಗೆ 4 ಟಿಎಂಸಿಯಷ್ಟು ಕುಡಿಯುವ ನೀರಿನ ಬೇಡಿಕೆ ಇದೆ. ಆದರೆ, ಈಗ ಲಭ್ಯ ನೀರಿನ ಪ್ರಮಾಣದಿಂದ ಕುಡಿಯುವ ನೀರಿನ ಪೂರೈಕೆ ಕಷ್ಟವಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

    ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…

  • KOLAR NEWS PAPER

    ಯೋಗಥಾನ್ ಕಾರ್ಯಕ್ರಮ: ಪೂರ್ವ ಸಿದ್ಧತೆ ಪರಿಶೀಲನೆ

    ಜಿಲ್ಲೆಯಲ್ಲಿ ಜನವರಿ 15 ರಂದು ಬೆಳಿಗ್ಗೆ 6.00 ಗಂಟೆಗೆ ಕೋಲಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಯೋಗಥಾನ್ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದ ಪೂರ್ವ ಸಿದ್ಧತೆಯನ್ನು ಹಾಗೂ ಯೋಗ ತಾಲೀಮು ಪರಿಶೀಲಿಸಿ ಎಲ್ಲಾ ವ್ಯವಸ್ಥೆಗಳು ಸರಿಯಾಗಿವೆಯೇ ಎಂದು ಖುದ್ದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ಇಂದು ಪರಿಶೀಲನೆ ನಡೆಸಿದರು. 15ನೇ ಜನವರಿಯಂದು ಜಿಲ್ಲಾ ಮಟ್ಟದಲ್ಲಿ ನಡೆಯುವ ಯೋಗಥಾನ್ ಕಾರ್ಯಕ್ರಮದಲ್ಲಿ ಜಿಲ್ಲೆಯ ಆಯ್ದ ಶಾಲಾ ವಿದ್ಯಾರ್ಥಿಗಳು, ದೈಹಿಕ ಶಿಕ್ಷಕರು, ಯೋಗಪಟುಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ…

  • ಸುದ್ದಿ

    ಇಲ್ಲಿದೆ ನೋಡಿ ಬಿಗ್ ಬಾಸ್ ಕನ್ನಡ ಸೀಸನ್ 7 ಕಾರ್ಯಕ್ರಮಕ್ಕೆ ಎಂಟ್ರಿ ಕೊಟ್ಟ 18 ಸ್ಪರ್ಧಿಗಳ ಪಟ್ಟಿ..!

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ.  ಬಿಗ್ ಬಾಸ್ ಮನೆ ಪ್ರವೇಶ ಮಾಡಿದ  ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,..  ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • ಸುದ್ದಿ

    ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತರೂ ಸಹ ನೀಡಬೇಕಂತೆ ಸಚಿವ ಸ್ಥಾನ..!ಏಕೆ ಗೊತ್ತಾ..?

    ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್‍ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್‍ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್‍ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್‍ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್‍ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….