ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲೇ ಅತ್ಯಂತ ವೇಗದ ಸಂಚಾರ ವ್ಯವಸ್ಥೆ ಎಂದೇ ಪರಿಚಿತವಾಗಿರುವ ವರ್ಜಿನ್ ಹೈಪರ್ಲೂಪ್ ಕಂಪನಿ ಜತೆಗೆ ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಒಪ್ಪಂದವೊಂದನ್ನು ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಟೆಕ್ ಸಮ್ಮಿಟ್ನಲ್ಲಿ ಐಟಿ-ಬಿಟಿ ಮತ್ತು ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವರ್ಜಿನ್ ಹೈಪರ್ಲೂಪ್ ಒನ್ ಜತೆ ಒಡಂಬಡಿಕೆಗೆ ಸಹಿ ಮಾಡಿದ್ದಾರೆ.
ಈ ಒಪ್ಪಂದದ ಪ್ರಕಾರ, ಬೆಂಗಳೂರು, ತುಮಕೂರು, ಹುಬ್ಬಳ್ಳಿ-ಧಾರವಾಡ ಮತ್ತು ಹೊಸೂರುಗಳಲ್ಲಿ ಈ ಯೋಜನೆಯ ಸಾಧಕ-ಬಾಧಕಗಳ ಬಗ್ಗೆ ಪರಿಶೋಧನೆ ಮಾಡುವುದಲ್ಲದೇ, ಆರ್ಥಿಕವಾಗಿಯೂ ಇದು ಪ್ರಯೋಜನಕ್ಕೆ ತರುತ್ತದೆಯೇ ಎಂಬ ಬಗ್ಗೆಯೂ ಅಧ್ಯಯನ ನಡೆಸಲಿದೆ.
ಒಂದೊಮ್ಮೆ ಈ ಯೋಜನೆ ಜಾರಿಯಾಗಲು ಅರ್ಹವೆಂದು ಕಂಡುಬಂದಲ್ಲಿ ಬೆಂಗಳೂರು ಮತ್ತು ಹುಬ್ಬಳ್ಳಿ ನಡುವಿನ ವೇಗ ಕೇವಲ ಅರ್ಧಗಂಟೆಗೆ ಇಳಿಯಲಿದೆ. ಅಂದರೆ, ವಿಮಾನ ಪ್ರಯಾಣಕ್ಕಿಂತಲೂ ಕಡಿಮೆ ಸಮಯದಲ್ಲಿ ಈ ನಗರಗಳ ನಡುವೆ ಸಂಚಾರ ಮಾಡಬಹುದಾಗಿದೆ.
ಒಪ್ಪಂದದ ನಂತರ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, “”ಬೆಂಗಳೂರು ಐಟಿ ಹಬ್ ಆಗಿದ್ದು, ದೇಶದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಇಲ್ಲಿ ಜಗತ್ತಿನ ಅತ್ಯಂತ ಪ್ರಮುಖ ಐಟಿ ಕಂಪನಿಗಳು ಕಾರ್ಯಾಚರಣೆ ನಡೆಸುತ್ತಿವೆ. ಒಂದು ವೇಳೆ ಹೈಪರ್ಲೂಪ್ನಂಥ ನವ ತಂತ್ರಜ್ಞಾನವನ್ನು ರಾಜ್ಯದಲ್ಲಿ ಅಳವಡಿಸಿದ್ದೇ ಆದರೆ, ಕರ್ನಾಟಕದ ಪ್ರಗತಿಯ ವೇಗ ಮತ್ತಷ್ಟು ಹೆಚ್ಚುತ್ತದೆ,” ಎಂದಿದ್ದಾರೆ.
ಹೈಪರ್ಲೂಪ್ ಯೋಜನೆಗಾಗಿ ಕೇವಲ ಕರ್ನಾಟಕವಷ್ಟೇ ಅಲ್ಲ, ಮಹಾರಾಷ್ಟ್ರ, ಆಂಧ್ರ ಪ್ರದೇಶ ರಾಜ್ಯಗಳೂ ವರ್ಜಿನ್ ಹೈಪರ್ಲೂಪ್ ಒನ್ ಕಂಪನಿ ಜತೆ ಒಡಂಬಡಿಕೆ ಮಾಡಿಕೊಂಡಿವೆ. ಈ ಕಂಪನಿ ಪ್ರಾಥಮಿಕವಾಗಿ ಸ್ಥಳ ಮತ್ತು ಯೋಜನೆಯ ಅಗತ್ಯತೆ ಬಗ್ಗೆ ಅಧ್ಯಯನ ನಡೆಸಲಿದೆ.
ಏನಿದು ಹೈಪರ್ಲೂಪ್?
ವಿಶೇಷವಾಗಿ ನಿರ್ಮಿಸಲಾದ ಕೊಳವೆಯೊಂದರಲ್ಲಿ ಪಾಡ್(ಪುಟ್ಟ ವಾಹನಗಳು)ಗಳು ಸಾಗುವಂತೆ ಮಾಡುವುದು. ಈ ಕೊಳವೆಯನ್ನು ನೆಲದಿಂದ ಕೊಂಚ ಮೇಲೆಯೇ ನಿರ್ಮಿಸಲಾಗಿರುತ್ತದೆ. ಅಯಸ್ಕಾಂತೀಯ ಗುಣದೊಂದಿಗೆ ಈ ಕೊಳವೆಯ ಯಾವುದೇ ಬದಿಗೂ ಪಾಡ್ ತಗುಲದಂತೆ ಮಾಡಲಾಗುತ್ತದೆ.
ಇನ್ನೂ ವಿಶೇಷವೆಂದರೆ, ಈ ಕೊಳವೆಗೆ ಹೊರಗಿನಿಂದ ಗಾಳಿ ಹೋಗದಂತೆ ನಿರ್ಮಿಸಲಾಗುತ್ತದೆ. ಅಲ್ಲದೆ, ಇದೇ ಕಾಂತೀಯ ಶಕ್ತಿಯಿಂದಲೇ ಇದನ್ನು ಚಲಿಸುವಂತೆ ಮಾಡಲಾಗುತ್ತದೆ. ಆರಂಭದಲ್ಲಿ ಗಂಟೆಗೆ 640 ಕಿ.ಮೀ. ವೇಗ ಎಂದು ಹೇಳಲಾಗಿತ್ತಾದರೂ, ಇದೀಗ ಪ್ರಯೋಗ ಯಶಸ್ವಿಯಾದ ಬಳಿಕ ಗಂಟೆಗೆ ಒಂದು ಸಾವಿರ ಕಿ.ಮೀ. ವೇಗವಾಗಿ ಹೋಗಬಹುದು ಎಂದು ಹೇಳಲಾಗುತ್ತಿದೆ.
ಎಲ್ಲೆಲ್ಲಿ ಯೋಜನೆ?
ಅಮೆರಿಕ, ಬ್ರಿಟನ್, ಕೆನಡಾ, ಯುಎಇ, ಫಿನ್ಲಂಡ್ ಮತ್ತು ಭಾರತ. ಭಾರತದಲ್ಲಿ ಬೆಂಗಳೂರು, ತುಮಕೂರು, ಹೊಸೂರು, ಹುಬ್ಬಳ್ಳಿ, ಮುಂಬೈ, ಪುಣೆ ನಗರಗಳಲ್ಲಿ ಯೋಜನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು. ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ…
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….
ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್ಡಿಆರ್ಎಫ್) ಒಟ್ಟು1813.75 ಕೋಟಿ…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ
ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…