ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

755

ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.

 ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.

ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.

ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್‍ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.

ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್‍ಗೆ ಸದ್ಯ ಅವರೇ ಆಧಾರ ಸ್ತಂಭಗಳು.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅ.17ರಿಂದ ಹಾಸನಾಂಬ ಜಾತ್ರೆ ; 13 ದಿನಗಳ ಕಾಲ ದೇವಿಯ ದರ್ಶನಕ್ಕೆ ಅವಕಾಶ….!

    ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್‌, ಅಪರ ಜಿಲ್ಲಾಧಿಕಾರಿ ನಾಗರಾಜ್‌, ತಹಸೀಲ್ದಾರ್‌…

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

  • ವ್ಯಕ್ತಿ ವಿಶೇಷಣ

    ರೇಪ್ ತಡೆಯಲು,ಒಳಉಡುಪು ತಯಾರಿಸಿದ 19ವರ್ಷದ ಯುವತಿ..!ಇದು ಹೇಗೆಲ್ಲಾ ಕೆಲಸ ಮಾಡುತ್ತೆ ಗೊತ್ತಾ..?

    ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.

  • ನೀತಿ ಕಥೆ

    ಒಬ್ಬರೊಂದಿಗೆ ಹೋಲಿಸಿಕೊಂಡು ಬದುಕಬೇಡಿ ಎಂದು ಹೇಳುವ ಸೊಗಸಾದ ಕಥೆ…!ತಿಳಿಯಲು ಈ ಲೇಖನ ಓದಿ …

    ತಮಗಿರುವ ಸೌಲಭ್ಯಗಳು, ಅವಕಾಶಗಳಿಗಿಂತ ಇತರರಿಗೆ ಉತ್ತಮವಾದ ಸೌಲಭ್ಯಗಳು ಇವೆ ಎಂದು ಕೆಲವರು ಭಾವಿಸುತ್ತಾರೆ. ಹಣ, ಸೌಂದರ್ಯ, ಓದು, ಆಸ್ತಿ, ಹುದ್ದೆ…ಹೀಗೆ ಪ್ರತಿ ವಿಷಯದಲ್ಲೂ ಇತರರ ಜತೆಗೆ ಹೋಲಿಸಿಕೊಳ್ಳುತ್ತಿರುತ್ತಾರೆ. ಈ ರೀತಿ ಇನ್ನೊಬ್ಬರ ಜತೆಗೆ ನಮ್ಮನ್ನು ಹೋಲಿಸಿಕೊಳ್ಳುವ ಅಭ್ಯಾಸ ಒಳ್ಳೆಯದಲ್ಲ.

  • ಸುದ್ದಿ

    ಕೀನ್ಯಾ ನಿಂದ 200 ರೂ ಸಾಲ ತೀರಿಸಲು 30 ವರ್ಷಗಳ ಬಳಿಕ ಭಾರತಕ್ಕೆ ಬಂದ ಭೂಪ…!

    ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…