News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

758

ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.

 ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.

ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.

ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್‍ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.

ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್‍ಗೆ ಸದ್ಯ ಅವರೇ ಆಧಾರ ಸ್ತಂಭಗಳು.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟಾಲಿವುಡ್ ಸ್ಟಾರ್ ಪ್ರಭಾಸ್ ಚಿರಂಜೀವಿ ಫ್ಯಾಮಿಲಿಯ ಅಳಿಯನಾಗ್ತಾರಾ ..?ತಿಳಿಯಲು ಈ ಲೇಖನ ಓದಿ…

    ಬಾಹುಬಲಿ -2’ ಬಂದಿದ್ದೇ ಬಂದಿದ್ದು ಟಾಲಿವುಡ್ ಸ್ಟಾರ್ ಪ್ರಭಾಸ್ ಮನೆ ಮಾತಾಗಿದ್ದಾರೆ. ಈ ವರ್ಷ ಸೋಷಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಸುದ್ದಿಯಾದ ವಿಷಯಗಳಲ್ಲಿ ಪ್ರಭಾಸ್ ಮದುವೆ ಸುದ್ದಿ ಕೂಡ ಪ್ರಮುಖವಾಗಿದೆ. ಟಾಲಿವುಡ್ ಇಂಡಸ್ಟ್ರಿಯ ಮೋಸ್ಟ್ ಬ್ಯಾಚುಲರ್ ಹೀರೋ ಅಂದ್ರೆ ಪ್ರಭಾಸ್. ಕೆಲವು ದಿನಗಳಿಂದ ಈ ನಟನ ಮದುವೆಯ ಬಗ್ಗೆ ಗಾಸಿಪ್ ಗಳು ಕೇಳಿ ಬರುತ್ತಿದೆ. ಆದರೆ ಈಗ ಟಾಲಿವುಡ್ ಅಂಗಳದಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಪುತ್ರಿ ನಿಹಾರಿಕಾ ಅವರೊಂದಿಗೆ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಬಲವಾಗಿ ಕೇಳತೊಡಗಿದೆ….

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿಯ ಶುಭಫಲಗಳನ್ನು ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಮಾರ್ಚ್, 2019) ನೀವು ಸ್ನೇಹಿತರೊಂದಿಗೆ ಒಳ್ಳೆಯ ಸಮಯ ಹೊಂದಿದ್ದರೂ ವಾಹನಚಾಲನೆ ಮಾಡುವಾಗ ಹೆಚ್ಚುವರಿ ಆರೈಕೆಯನ್ನು ಹೊಂದಿಕೊಳ್ಳಿ….

  • ಕರ್ನಾಟಕದ ಸಾಧಕರು

    ‘ತಿಮ್ಮಪ್ಪ ನಾಯಕ’ ಕನಕದಾಸರಾಗಿದ್ದು ಹೇಗೆ ಎಂದು ತಿಳಿಯ ಬೇಕಾ..!ಹಾಗದ್ರೆ ಈ ಲೇಖನ ಓದಿ..

    ಕನಕದಾಸರು ವೃತ್ತಿಯಲ್ಲಿ ಸೈನಿಕರಾಗಿದ್ದರು. ಒಮ್ಮೆ ಯುದ್ಧದಲ್ಲಿ ಹೆಚ್ಚು ಗಾಯವಾಗಿದ್ದಾಗ, ಬೇಸರಗೊಂಡು ಯುದ್ಧವನ್ನು ಬಿಟ್ಟು, ದೇವರನಾಮಗಳನ್ನು ಬರೆದು ಪರಮಾತ್ಮನನ್ನು ಧ್ಯಾನಿಸತೊಡಗಿದರು.

  • ಸುದ್ದಿ

    150 ವರ್ಷ ಬದುಕಬೇಕೆಂಬ ಮೈಕಲ್ ಜಾಕ್ಸನ್ ಬಗ್ಗೆ ನಿಮಗೆಷ್ಟು ಗೊತ್ತು,.??

    ಮೈಕಲ್ ಜಾಕ್ಸನ್ ಎಂಬ ಮಹಾನ್ ಗಾಯಕ ಪ್ರತಿಭೆಯು 150 ವರ್ಷಗಳ ಕಾಲ ಬದುಕಬೇಕೆಂದು ಬಯಸಿದ, ಅದಕ್ಕಾಗಿ ತಲೆ ಕೂದಲಿಂದ ಹಿಡಿದು ಕಾಲಿನ ಬೆರಳುಗಳವರೆಗೆ ದಿನ ನಿತ್ಯ ಪರೀಕ್ಷಿಸಲು 12 ನುರಿತ ಡಾಕ್ಟರ್ ಗಳನ್ನು ತನ್ನ ಮನೆಯಲ್ಲಿ ನೇಮಿಸಿದ್ದ. ಆತ ಆಹಾರವನ್ನು ಸೇವಿಸುವುದಕ್ಕೆ ಮುಂಚೆ ಆತನ ಆಹಾರಗಳನ್ನು ಲ್ಯಾಬ್ ನಲ್ಲಿ ಟೆಸ್ಟ್ ಮಾಡುತ್ತಿದ್ದರು. ಆತನ ದೈನಂದಿನ ವ್ಯಾಯಾಮ ಮತ್ತು ಇತರ ದೇಹ ಸಂರಕ್ಷಣೆಗಾಗಿ ಮತ್ತೆ 15 ಜನರನ್ನು ಕೂಡಾ ನೇಮಿಸಿದ್ದ. ಆಕ್ಸಿಜನ್ ನ ಅಳತೆಯನ್ನು ನಿಯಂತ್ರಿಸುವ ತಂತ್ರಜ್ಞಾನವಿರುವ ಬೆಡ್ಡನ್ನು…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ 5 ನವೆಂಬರ್, 2018 ಮೇಷ ರಾಶಿ ನೀವು ಸಂಪ್ರದಾಯಬದ್ಧ ಹೂಡಿಕೆಗಳನ್ನು ಮಾಡಿದಲ್ಲಿ ಒಳ್ಳೆಯ…