ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

755

ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.

 ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.

ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.

ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್‍ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.

ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್‍ಗೆ ಸದ್ಯ ಅವರೇ ಆಧಾರ ಸ್ತಂಭಗಳು.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಉತ್ತರ ಪ್ರದೇಶ,ಬಿಹಾರ್ನಲ್ಲಿ ಇವಿಎಂ ಹ್ಯಾಕ್ – ಬೆಂಗ್ಳೂರಲ್ಲಿ ಸ್ಟ್ರಾಂಗ್ ರೂಂಗಳಿಗೆ ಸರ್ಪಗಾವಲು….!

    ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಇವಿಎಂ ಹ್ಯಾಕ್ ಸುದ್ದಿ ಪಸರಿಸಿರೋ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತಪೆಟ್ಟಿಗೆ ಇರುವ ಕೇಂದ್ರಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಕೇಂದ್ರ ವಿಭಾಗದ ಮತಪೆಟ್ಟಿಗೆ ಮೌಂಟ್ ಕಾರ್ಮಲ್ ಕಾಲೇಜಿನಲ್ಲಿ, ದಕ್ಷಿಣ ವಿಭಾಗದ ಜಯನಗರ ಎನ್‍ಎಂಕೆಆರ್ ವಿ ಕಾಲೇಜಿನಲ್ಲಿ ಕಡೆಯದಾಗಿ ಉತ್ತರ ವಿಭಾಗದ ಮತಪೆಟ್ಟಿಗೆ ಮಹಾರಾಣಿ ಕಾಲೇಜಿನಲ್ಲಿ ಭದ್ರವಾಗಿದೆ. ಈ ಮತಪೆಟ್ಟಿಗೆ ಸ್ಟ್ರಾಂಗ್ ರೂಂ ಒಳಗೆ ಓಡಾಡಲು ನಿಯೋಜಿತ ಸಿಬ್ಬಂದಿ, ಗುರುತಿನ ಚೀಟಿ ಇರುವ ಅಭ್ಯರ್ಥಿ, ಅಭ್ಯರ್ಥಿಯ ಏಜೆಂಟ್‍ಗೆ ಮಾತ್ರ ಪ್ರವೇಶವಿದೆ. ಉಳಿದಂತೆ ಯಾರಿಗೂ ಸಹ…

  • ಸುದ್ದಿ

    ಒಂದು ಮೀನಿಗೆ 5 ಲಕ್ಷ ರೂ ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಿಲ್ಲ ಯಾಕೆ ಗೊತ್ತಾ,? ಇಷ್ಟಕ್ಕೂ ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ,.!!

    ಬರಿ  ಒಂದು ಮೀನಿಗೆ ಗ್ರಾಹಕರೊಬ್ಬರು 5 ಲಕ್ಷ ರೂ. ನೀಡಲು ಮುಂದಾದ್ರೂ ಮಾಲೀಕ ಮಾತ್ರ ಮಾರಾಟ ಮಾಡಲ್ಲ ಎಂದು ಹೇಳಿದ ಯಾಕೆ ಗೊತ್ತಾ,.! ಈ ವಿಶೇಷ ಮೀನಿನ ಮೇಲೆ ಉರ್ದುವಿನಲ್ಲಿ ‘ಅಲ್ಲಾಹ’ ಎಂದು ಬರೆಯಲಾಗಿದ್ದು, ಕೆಲವರು ಜಲಚರಕ್ಕಾಗಿ ಲಕ್ಷಾಂತರ ರೂಪಾಯಿ ನೀಡಲು ಮುಂದಾಗುತ್ತಿದ್ದಾರೆ. ಇಷ್ಟಕ್ಕೂ  ಆ ಮೀನಿನ ವಿಶೇಷತೆಯಾದರೂ ಏನು ಗೊತ್ತಾ ಇಲ್ಲಿದೆ ನೋಡಿ ಅಚ್ಚರಿ ಮುಡಿಸುವ ವಿಷಯ. ಉತ್ತರ ಪ್ರದೇಶದ ಶಾಮಲಿ ಜಿಲ್ಲೆಯ ಕೈರಾನಾದಲ್ಲಿರುವ ಈ ವಿಶೇಷ ಮೀನು ನೋಡಲು ಜನರು ದೂರದಿಂದ ಆಗಮಿಸುತ್ತಿದ್ದಾರೆ. ಶಬಾಬ್…

  • ಸುದ್ದಿ

    ನಿಮ್ಮ ಬ್ಯಾಂಕ್ ಖಾತೆಯಲ್ಲಿ ಇರುವ ಹಣ ಎಷ್ಟು ಎಂದು ಅಕ್ಷಯ್ ಕುಮಾರ್ ಕೇಳಿದ ಪ್ರಶ್ನೆಗೆ ಮೋದಿ ಹೇಳಿದ್ದೇನು ಗೊತ್ತಾ?

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಬಾಲಿವುಡ್ ನಟ ಅಕ್ಷಯ್ ಕುಮಾರ್ ಜೊತೆ ಮೊದಲ ಬಾರಿಗೆ ತಮ್ಮ ವೈಯುಕ್ತಿಕ ಜೀವನ ಅನುಭವಗಳೊಂದಿಗೆ, ತಮ್ಮ ಜೀವನಕ್ಕೆ ಸಂಬಂಧಿಸಿದ ಹಲವಾರು ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಈವರೆಗೆ ಯಾರಿಗೂ ತಿಳಿದಿರದ ಕೆಲ ಮಾಹಿತಿಗಳನ್ನೂ ಮೋದಿ ನಟ ಅಕ್ಷಯ್ ಜೊತೆಗೆ ಹಂಚಿಕೊಂಡಿದ್ದಾರೆ. 1 ಗಂಟೆ 10 ನಿಮಿಷದ ಈ ಸಂದರ್ಶನದಲ್ಲಿ ಮೋದಿ ಹೇಳಿದ ಕೆಲ ಆಸಕ್ತಿಕರ ವಿಚಾರಗಳು ಇವೆ.ನಿಮಗೆ ಮಾವಿನ ಹಣ್ಣು ಇಷ್ಟವೇ ಎಂದು ಅಕ್ಷಯ್ ಕುಮಾರ್ ಕೇಳಿದ್ದಕ್ಕೆ ನಾನು ಮಾವಿನ ಹಣ್ಣು…

  • ಆಧ್ಯಾತ್ಮ, ಜ್ಯೋತಿಷ್ಯ

    ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಇಟ್ಟುಕೊಳ್ಳಬೇಕಾ?ಬಿಸಾಡಬೇಕಾ?

    ದೇವಸ್ಥಾನಗಳಿಗೆ ಹೋದಾಗ ದೇವರಿಗೆ ಪೂಜೆ ಆದ ನಂತರ ಸಾಮಾನ್ಯವಾಗಿ ಪ್ರಸಾದವನ್ನು ಕೊಡುತ್ತಾರೆ. ಜೊತೆಗೆ ಹೂ ಅಥವಾ ಹೂವಿನ ಮಾಲೆಯನ್ನು ಸಹ ಕೊಡುತ್ತಾರೆ. ಪೂಜಾರಿಗಳು ಪ್ರಸಾದದ ರೂಪದಲ್ಲಿ ಕೊಟ್ಟ ಹೂವನ್ನು ಭಕ್ತರು ಸ್ವಿಕಾರ ಮಾಡುತ್ತಾರೆ. ಆದರೆ ಹೀಗೆ ಕೊಟ್ಟ ಹೂವನ್ನು ಏನು ಮಾಡಬೇಕೆಂದು ಎಷ್ಟೋ ಮಂದಿಗೆ ಗೊತ್ತಿಲ್ಲ. ಹಾಗಾದ್ರೆ ಪ್ರಸಾದದ ರೂಪದಲ್ಲಿ ಸಿಕ್ಕ ಹೂವನ್ನು ಏನು ಮಾಡಬೇಕು..? ದೂರದ ಊರುಗಳಿಗೆ ಹೋಗಿದ್ದರೆ, ಅಲ್ಲಿನ ದೇವಸ್ಥಾನದಲ್ಲಿ ಸಿಕ್ಕ ಹೂಗಳು ಮನೆಗೆ ಬರುವ ಮೊದಲೇ ಬಾಡಿರುತ್ತದೆ. ಸಾಮಾನ್ಯವಾಗಿ ಬಾಡಿದ ಹೂಗಳನ್ನು ಮನೆಯಲ್ಲಿ…

  • ಸುದ್ದಿ

    ಪರೀಕ್ಷೆಗೆ ಲೇಟಾಗುತ್ತೆ ಎಂದು ಓನ್ ವೇ ನಲ್ಲಿ ಬೈಕ್ ಓಡಿಸಿಕೊಂಡು ಹೋದ ವಿಧ್ಯಾರ್ಥಿನಿ. ಅಡ್ಡಗಟ್ಟಿದ ಟ್ರಾಫಿಕ್ ಪೋಲಿಸ್ ಮಾಡಿದ್ದೇನು ಗೊತ್ತಾ?

    ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…

  • ಸುದ್ದಿ

    5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುತ್ತೇನೆ, ಬಾಬಾ ರಾಮ್‍ದೇವ್.

    ಪತಂಜಲಿ ಸಂಸ್ಥೆ 5 ಲಕ್ಷ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಡಲು ಮತ್ತು ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಆಯುರ್ವೇದ ಅತ್ಯುತ್ತಮ ಮಾರ್ಗ. ಕಳೆದ 40 ವರ್ಷಗಳಿಂದ ನಾನು ಬೆಳಗ್ಗೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಚಟುವಟಿಕೆಯಿಂದ ಜೀವನ ನಡೆಸುತ್ತಿದ್ದೇನೆ ಎಂದು ಯೋಗ ಗುರು ಬಾಬಾ ರಾಮ್‍ದೇವ್ ಹೇಳಿದ್ದಾರೆ. ಮಾಧ್ಯವೊಂದರ ಜೊತೆ ಬಾಬಾ ರಾಮ್‍ದೇವ್ ಮಾತನಾಡಿ ಸ್ವಾವಲಂಬಿ (ಆತ್ಮನಿರ್ಭರ್) ಭಾರತಕ್ಕಾಗಿ ಅಳವಡಿಸಿಕೊಳ್ಳಬಹುದಾದ…