News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

760

ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.

 ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.

ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.

ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್‍ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.

ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್‍ಗೆ ಸದ್ಯ ಅವರೇ ಆಧಾರ ಸ್ತಂಭಗಳು.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಸುದ್ದಿ

    ಎಪ್ರಿಲ್ ಮೇ ನಲ್ಲಿ ಮದ್ವೆ ಆಗ್ತಾ ಇದ್ದೀರಾ..?ಹಾಗಾದ್ರೆ ತಪ್ಪದೇ ಈ ಸುದ್ದಿ ನೋಡಿ..

    2019ರ ಲೋಕಸಭೆ ಚುನಾವಣಾ ದಿನಾಂಕ ಘೋಷಣೆಯಾಗ್ತಿದ್ದಂತೆ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆ ಜಾರಿಯಾದ ಕಾರಣ ದೇಶದಾದ್ಯಂತ ಅನೇಕ ನಿಯಮಾವಳಿಗಳು ಜಾರಿಗೆ ಬರುತ್ತವೆ. ಚುನಾವಣಾ ಆಯೋಗ ಹೊಸ ನಿಯಮಗಳನ್ನು ಕೂಡ ಜಾರಿಗೆ ತಂದಿದೆ. ಸಾಮಾನ್ಯವಾಗಿ ಏಪ್ರಿಲ್-ಮೇ ತಿಂಗಳಿನಲ್ಲಿ ಮದುವೆಗಳು ನಡೆಯುವುದು ಹೆಚ್ಚು. ಆದ್ರೆ ಚುನಾವಣೆ ಹಿನ್ನೆಲೆಯಲ್ಲಿ ಮದುವೆ ವಾದ್ಯಗಳು ಈ ಬಾರಿ ಕಡಿಮೆ ಪ್ರಮಾಣದಲ್ಲಿ ಕೇಳಿ ಬರಲಿವೆ. ಮದುವೆ ಸಂದರ್ಭದಲ್ಲಿ ವಾದ್ಯಗಳ ಬಳಕೆಗೆ ಒಪ್ಪಿಗೆ ಪಡೆಯಬೇಕಾಗುತ್ತದೆ. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಎಸ್ಡಿಎಂ ಒಪ್ಪಿಗೆ ಪಡೆದು…

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • inspirational

    ಮಾಲೂರು ಕರಗ ಮಹೋತ್ಸವಕ್ಕಾಗಿ ನಗರಸಭೆಯಿಂದ ಸ್ವಚ್ಛತಾ ಕಾರ್ಯ

    ಮಾಲೂರು ಪಟ್ಟಣದಲ್ಲಿ ನಡೆಯುವ ಕರಗ ಮಹೋತ್ಸವ ಅತ್ಯಂತ ಪ್ರಸಿದ್ಧ ಧಾರ್ಮಿಕ ಜಾತ್ರೆಯಾಗಿದೆ. ಈ ಜಾತ್ರೆ ಕೋಲಾರ ಜಿಲ್ಲೆಯಲ್ಲಿ ಪ್ರಮುಖ ಸಾಂಸ್ಕೃತಿಕ ಹಬ್ಬವಾಗಿದೆ, ಸಾವಿರಾರು ಭಕ್ತರು ಭಾಗವಹಿಸುವುದರಿಂದ ನಗರದಲ್ಲಿ ಭಾರಿ ಜನಸಂದಣಿ ಉಂಟಾಗುತ್ತದೆ. ನಗರಸಭೆಯ ಸ್ವಚ್ಛತಾ ಕಾರ್ಯಗಳು ಮಾಲೂರು ನಗರಸಭೆ ಜಾತ್ರೆಗೆ ಮುನ್ನ ದೊಡ್ಡ ಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದೆ: ಮುಖ್ಯ ರಸ್ತೆಗಳ ಸ್ವಚ್ಛತೆಜಾತ್ರೆ ನಡೆಯುವ ಪ್ರಮುಖ ರಸ್ತೆಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದೆ ಕಾಲುವೆ ಮತ್ತು ಡ್ರೆನೇಜ್ ಕ್ಲೀನಿಂಗ್ನೀರು ನಿಲ್ಲದಂತೆ ಕಾಲುವೆಗಳನ್ನು ಸ್ವಚ್ಛಗೊಳಿಸಿ, ತಡೆಗಳನ್ನು ತೆಗೆದುಹಾಕಲಾಗಿದೆ ಕಸ ತೆರವು ಕಾರ್ಯಪಟ್ಟಣದ…

  • ಸಿನಿಮಾ, ಸುದ್ದಿ

    ಅಪ್ಪನ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್ ನೀಡಿದ ಐರಾ.

    ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್‍ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…