News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ

ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಿದ್ದ ರಾಜ್ಯ ಕರ್ನಾಟಕ!ಇಂದಿರಾಗಾಂಧಿಯವರಂತೆ ಪ್ರಿಯಾಂಕ ಗಾಂಧಿಯನ್ನು ಗೆಲ್ಲಿಸುತ್ತಾ?ಹಾಗಾದ್ರೆ ಇವರು ಯಾವ ಕ್ಷೇತ್ರದಲ್ಲಿ ನಿಂತ್ರೆ ಗೆಲ್ತಾರೆ…ಮುಂದೆ ಓದಿ…

756

ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.

 ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.

ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.

ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್‍ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.

ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.

ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್‍ಗೆ ಸದ್ಯ ಅವರೇ ಆಧಾರ ಸ್ತಂಭಗಳು.

ಮೂಲ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…