ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.
ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.
ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.
ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.
ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.
ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.
2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್ಗೆ ಸದ್ಯ ಅವರೇ ಆಧಾರ ಸ್ತಂಭಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…
ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…
ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮಾರಾಟ ಪ್ರಕ್ರಿಯೆ 2020ರ ಮಾರ್ಚ್ ತಿಂಗಳ ಒಳಗೆ ಪೂರ್ಣಗೊಳಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾಗಿ ಟೈಮ್ಸ್ ಅಫ್ ಇಂಡಿಯಾ ವರದಿ ಮಾಡಿದೆ. ನಿರ್ಮಲಾ ಸೀತಾರಾಮನ್ ಮಾತನಾಡಿ, ಸರ್ಕಾರದಿಂದ ನಡೆದ ಅಂತರರಾಷ್ಟ್ರೀಯ ರೋಡ್ ಷೋಗಳಲ್ಲಿ ಏರ್ ಇಂಡಿಯಾ ಖರೀದಿಗೆ ಹೂಡಿಕೆದಾರರು ‘ಸಾಕಷ್ಟು ಆಸಕ್ತಿ’ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಏರ್ ಇಂಡಿಯಾ ಮಾರಾಟಕ್ಕೆ ಮುಂದಾದಾಗ ಹೂಡಿಕೆದಾರರಿಂದ ಸಕಾರಾತ್ಮಕವಾದ ಸ್ಪಂದನೆ ಬಂದಿರಲಿಲ್ಲ….
ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಮಾತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಧಾನ ಹೊರಹಾಕಿದ್ದ ಶಾಸಕರಿಗೆ ಸಚಿ ಸ್ಥಾನ ಕೊಡುವುದಾಗಿ ಮೈತ್ರಿ ಸರ್ಕಾರ ಭರವಸೆ ನೀಡಿದ್ದು ಅದರಂತೆ ಈಗ ಸಚಿವ ಸಂಪುಟದ ವಿಸ್ತರಣೆ ಶುರುವಾಗಿದೆ. ರಾಜ್ಯ ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಯಂತೆಯೇ ಡಿಸೆಂಬರ್ 22 ರಂದು ಅಂದರೇ ಇಂದು ಸಂಪುಟ ವಿಸ್ತರಣೆಯಾಗಲಿದೆ, ಇಬ್ಬರು ಹಾಲಿ ಸಚಿವರಿಗೆ ಕೊಕ್ ನೀಡಿದ್ದು, 8 ಮಂದಿ ನೂತನ ಸಚಿವರಾಗಿ ಇಂದು ಸಂಜೆ 5.30 ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ನೀವು ಟೀ ಕುಡಿಯುತ್ತೀರಾ…? ಹಾಗಿದ್ದರೆ ನಿಮ್ಮ ಬುದ್ಧಿಮತ್ತೆ ಭಾರಿ ಚುರುಕಾಗಿರುತ್ತೆ. ನಾವು ಇದನ್ನು ಹೇಳುತ್ತಿಲ್ಲ. ಅಧ್ಯಯನ ಒಂದು ಹೇಳುತ್ತಿದೆ. ಚಹಾ ಕುಡಿಯುವವರು ಮತ್ತು ಕುಡಿಯದವರನ್ನು ಅಧ್ಯಯನಕ್ಕೆ ಒಳಪಡಿಸಿದಾಗ, ಚಹಾ ಕುಡಿಯುವವರ ಮೆದುಳಿನ ಬೆಳವಣಿಗೆ ಚೆನ್ನಾಗಿರುವುದಲ್ಲದೆ, ಅವರ ಬುದ್ಧಿ ಮತ್ತೆ ಸಹ ಚುರುಕಾಗಿರುತ್ತದೆ ಎನ್ನುವ ಅಂಶ ತಿಳಿದು ಬಂದಿದೆ. ‘ನಮ್ಮ ಸಂಶೋಧನೆಯಲ್ಲಿ ತಿಳಿದು ಬಂದ ಮೊದಲ ಸಕಾರಾತ್ಮಕ ಅಂಶವೆಂದರೆ ನಿತ್ಯವೂ ಚಹಾ ಸೇವಿಸುವವರ ಮೆದುಳು ಚುರುಕಾಗಿರುವುದಲ್ಲದೆ, ವಯಸ್ಸಾದ ಬಳಿಕ ಕುಂಠಿತವಾಗುವ ಸಾಮರ್ಥ್ಯವನ್ನು ರಕ್ಷಣೆ ಮಾಡುವಲ್ಲಿ ಸಹಕರಿಸುತ್ತದೆ’ ಎಂದು ಸಿಂಗಾಪುರದ…