ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.
ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.
ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.
ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.
ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.
ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.
2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್ಗೆ ಸದ್ಯ ಅವರೇ ಆಧಾರ ಸ್ತಂಭಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ಉತ್ತರ ಪ್ರದೇಶದ ಅಜಂಘಡ ಜಿಲ್ಲೆಯ ಶಾಲೆಯ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರವನ್ನು ಸೆರೆ ಹಿಡಿದ ಪತ್ರಕರ್ತನ ಬಂಧನವಾಗಿ ವಾರ ಕಳೆದ ಬಳಿಕ, ಸ್ಥಳೀಯ ಆಡಳಿತವು ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದೆ. ಜಿಲ್ಲೆಯ ಊದ್ಪುರ ಸರಕಾರಿ ಪ್ರಾಥಮಿಕ ಪಾಠಶಾಲೆಯಲ್ಲಿ ನೆಲವನ್ನು ಒರೆಸುತ್ತಿದ್ದ ಮಕ್ಕಳ ಚಿತ್ರಗಳನ್ನು ಸೆರೆಹಿಡಿದ ಸ್ಥಳೀಯ ಪತ್ರಕರ್ತ ಸಂತೋಷ್ ಜೈಸ್ವಾಲ್ನನ್ನು ಪೊಲೀಸರು ಬಂಧಿಸಿ, ಆತನ ವಿರುದ್ಧ ಸುಲಿಗೆ ಹಾಗೂ ಸಾರ್ವಜನಿಕ ಸೇವಕರ ಕರ್ತವ್ಯಕ್ಕೆ ಅಡ್ಡಿಯಾದ ಆಪಾದನೆ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಶಾಲಾ ಪ್ರಾಂಶುಪಾಲರು, ಪತ್ರಕರ್ತನ ವಿರುದ್ದ…
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…