ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.

ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.

ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.

ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.

ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.

ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ನಿನ್ನೆ ಸದನದಲ್ಲಿ ಬಹುಮತ ಕೂಡ ಸಾಬೀತು ಮಾಡಿದ್ದಾರೆ. ಬಿಎಸ್ವೈ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಸ್ಪೀಕರ್ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದು, ನಾಳೆ ಸದನದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ಪೀಕರ್ ಚುನಾವಣೆಯಿಂದ ಹಿಂದೆ ಸರಿದಿದ್ದು, ಯಾವುದೇ ನಾಮಪತ್ರ ಸಲ್ಲಿಸಿರಲಿಲ್ಲ. ಬಿಜೆಪಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಹೀಗಾಗಿ ಕಾಗೇರಿ…
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಹಿಂದೂ ಧರ್ಮ ಹಾಗೂ ಹಿಂದೂ ಪೂಜಾ ವಿಧಾನದ ಪ್ರಕಾರ ಬಾಳೆ ಎಲೆಗೆ ಮಹತ್ವದ ಸ್ಥಾನವಿದೆ. ಬಾಳೆ ಎಲೆ ಇಲ್ಲದೆ ಸತ್ಯನಾರಾಯಣನ ಪೂಜೆ ನಡೆಯೋದಿಲ್ಲ. ಹಾಗೂ ಹಲವು ಪೂಜೆ ವಿಧಾನಗಳಲ್ಲಿ ಬಾಳೆ ಎಳೆಯನ್ನೇ ಬಳಸುತ್ತಾರೆ. ಬಾಳೆ ಎಲೆಗೆ ಎಷ್ಟು ಧಾರ್ಮಿಕ ಮಹತ್ವವಿದೆಯೋ ಅಷ್ಟೇ ಆಯುರ್ವೇದದಲ್ಲಿಯೂ ಮಹತ್ವ ಪಡೆದಿದೆ. ಸರ್ವ ರೋಗಗಳನ್ನ ಗುಣಪಡಿಸುವ ಶಕ್ತಿ ಬಾಳೆ ಎಲೆಗಿದೆ.
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು. ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ. ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ತರಕಾರಿ…