ಸಿನಿಮಾ, ಸ್ಪೂರ್ತಿ

ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದ ಈ ವ್ಯಕ್ತಿ ,ಸೂಪರ್ ಸ್ಟಾರ್ ಆಗಿದ್ದು ಹೇಗೆ..?ತಿಳಿಯಲು ಈ ಲೇಖನ ಓದಿ..

493

ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.

ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.

ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.

ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.

ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.

ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಕೋಲಾರದಿಂದ ಸ್ಪರ್ಧೆ ಮಾಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ

    ಕೋಲಾರ: ನಾನು ಮುಂದಿನ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲು ತೀರ್ಮಾನ ಮಾಡಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಘೋಷಣೆ ಮಾಡಿದ್ದಾರೆ. ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ನಡೆದ ಕೋಲಾರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನಗೆ ಸ್ಪರ್ಧಿಸಲು ಸರಿಯಾದ ಕ್ಷೇತ್ರವೇ ಇಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನನಗೆ ವರುಣಾದಿಂದ ಮತ್ತೆ ಸ್ಪರ್ಧೆ ಮಾಡಿ ಎಂದು ಹೇಳುತ್ತಿದ್ದಾರೆ, ಬಾದಾಮಿ ದೂರ ಆಯ್ತು ಎಂಬ ಕಾರಣಕ್ಕೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂದಿದ್ದಕ್ಕೆ…

  • ವಿಶೇಷ ಲೇಖನ

    ಒಂದೇ ಒಂದು ಮೋದಿಯ ಫೋನ್ ಕಾಲ್’ಗೆ ಈ ದೇಶದ ಅಧ್ಯಕ್ಷ ಯೆಮನ್ ಮೇಲಿನ ಯುದ್ದ ನಿಲ್ಲಿಸಿದ..!

    ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…

  • ದೇಶ-ವಿದೇಶ

    ಇದು ಪ್ರಪಂಚದ ಮೊದಲ ಅರಣ್ಯ ನಗರ!ಎಲ್ಲಿದೆ ಗೊತ್ತಾ?ಈ ಲೇಖನಿ ಓದಿ …

    ಚೀನಾ ದೇಶವು ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ. ಅದರಲ್ಲೂ ಅಭಿವೃದ್ಧಿ ಮತ್ತು ಸಾಹಸ ವಿಷಯದಲ್ಲಿ ಚೀನಾದವರು ಬೇರೆ ದೇಶಗಳಿಗಿಂತ ಭಿನ್ನ.ಏಕೆಂದರೆ ಏನಾದರೂ ಹೊಸತೊಂದು ಜಗತ್ತಿಗೆ ತೋರಿಸುತ್ತಾ ಬಂದಿದ್ದಾರೆ. ಈಗ ಇದಕ್ಕೆ ಮತ್ತೊಂದು ಸೇರ್ಪಡೆ ಎಂಬಂತೆ ಅರಣ್ಯ ನಗರ ನಿರ್ಮಾಣ ಮಾಡುವ ಹೊಸ ಸಾಹಸಕ್ಕೆ ಚೀನಾ ಮುಂದಾಗಿದೆ.

  • ಆರೋಗ್ಯ

    ಈ ನುಗ್ಗೆ ಎಲೆಗಳ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ…

    ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು  ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್‌ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…