ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.

ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.

ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.

ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.

ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.

ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡತನದಲ್ಲಿ ಅರಳಿದ ಪ್ರತಿಭೆಗಳು ನಮ್ಮ ರಾಜ್ಯದಲ್ಲಿ ಹಾಗು ದೇಶದಲ್ಲಿ ತುಂಬಾನೇ ಜನ ಇದ್ದಾರೆ ಅವರಲ್ಲಿ ಈ ಲಕ್ಷಿ ಕೂಡ ಒಬ್ಬರು ಅನ್ನಬಹುದು. ನಮ್ಮ ನೆಲದ ಸೊಗಡು ಅಥವಾ ನಮ್ಮ ನೆಲದ ಸಂಸ್ಕೃತಿಯ ಮೂಲ ಅಂದರೆ ಅದುವೇ ಜಾನಪದ ಎಂಬುದಾಗಿ ಹೇಳಲಾಗುತ್ತದೆ. ಅಂತಹ ಜಾನಪದ ಸೊಗಡು ಹೆಚ್ಚಿನದಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗು ಹಳ್ಳಿಗಳಲ್ಲಿ ಕಾಣಬಹುದು.
ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ಪವರ್ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್ನಲ್ಲೇ ಆ್ಯಕ್ಷನ್. ಪವರ್ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್ಕುಮಾರ್ ಅವರು ಹಾಕಿರುವ ಈ…
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಯಲ್ಲಿ ಹೊಡಾಡುತಿದ್ದರೆ ಇದನ್ನು ಕಂಡು ದಂಡವನ್ನು ವಿಧಿಸಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯಗಳಲ್ಲಿ ಆರ್.ಆರ್ ನಗರ, ದಾಸರಹಳ್ಳಿ, ಯಲಹಂಕ, ಬೊಮ್ಮನಹಳ್ಳಿ ಸೇರಿದಂತೆ ಹಲವು ಕಡೆ ಒಂದೇ ದಿನದಲ್ಲಿ 69,400 ರೂ ದಂಡ ವಸೂಲಿ ಮಾಡಲಾಗಿದೆ. ಈ ರೀತಿ ಮಾಸ್ಕ್ ಧರಿಸದೇ ರಸ್ತೆಯಲ್ಲಿ ಓಡಾಡುವವರಿಗೆ ಬಿಸಿ…