ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಗತ್ತಿನಲ್ಲಿ ಎಂತಹ ವಿಚಿತ್ರ ಜನಗಳಿರುತ್ತಾರೆ ಎಂದ್ರೆ ಯಾವಾಗ ಏನ್ ಮಾಡ್ತಾರೆ ಅಂತ ಸ್ವತಃ ಅವರಿಗೆ ಗೊತ್ತಿರುವುದಿಲ್ಲ. ಯಾಕೆಂದ್ರೆ ನಮ್ಮ ದೇಶದಲ್ಲಿ ಈಗಾಗಲೇ ಕ್ಯಾಶ್ ಲೆಸ್ ವ್ಯವಹಾರ ನಡೆಯುತ್ತಿದೆ. ಆದರೆ ಚೀನಾದಲ್ಲಿ ಮಹಿಳೆಯೊಬ್ಬರು ಕಾರೊಂದೊನ್ನು ಖರೀದಿಸಲು ಚೀಲದ ತುಂಬಾ ಹಣ ತುಂಬಿಕೊಂಡು ಹೋಗಿದ್ದಾರೆ.
ಹೌದು, ಚೀನಾದಲ್ಲಿ ಮಹಿಳೆಯೊಬ್ಬರು ನಾಲ್ಕು ಚೀಲದ ತುಂಬ ಹಣ ತುಂಬಿಕೊಂಡು ಕಾರ್ ಖರೀದಿಸಲು ಹೋಗಿ ಶೋರೂಂನಲ್ಲಿ ಕೆಲಸ ಮಾಡೋ ಸಿಬ್ಬಂದಿಗೆ ಶಾಕ್ ನೀಡಿದ್ದಾರೆ.
ಕಳೆದ ವಾರ ಚೀನಾದ ಶಾಂಡಾಂಗ್ ಪ್ರಾಂತ್ಯದ ನಿನ್ಝೋನಲ್ಲಿನ ಹೋಂಡಾ ಕಾರ್ ಡೀಲರ್ಶಿಪ್ ಶೋರೂಮಿನಲ್ಲಿ ಈ ಘಟನೆ ನಡೆದಿದೆ. ಮಹಿಳೆ ತಂದಿದ್ದ ಚೀಲಗಳ ತುಂಬಾ 1 ಯುವಾನ್ ಮುಖಬೆಲೆಯ ನೋಟುಗಳಿದ್ದು ಒಟ್ಟು 130,000 ಯುವಾನ್(ಅಂದಾಜು 12.50 ಲಕ್ಷ ರೂ.) ಹಣವಿತ್ತು. ಆದ್ರೆ ಚೀಲದಲ್ಲಿ ಎಷ್ಟು ಹಣ ಇದೆ ಎಂದು ಗೊತ್ತಾಗಬೇಕಲ್ಲ?
ಹಾಗಾಗಿ ಶೋರೂಮಿನಲ್ಲಿ ಕೆಲಸ ಮಾಡುವ ಸುಮಾರು 20 ಜನ ಚೀಲದಲ್ಲಿರುವ ಹಣವನ್ನು ಗಂಟೆಗಟ್ಟಲೆ ಎಣಿಸಿದ್ದಾರೆ.
ಶೋರೂಮ್ನಲ್ಲಿ ಸಣ್ಣ ಮೊತ್ತದ ನೋಟುಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬ ಸಂದೇಶವಿತ್ತು. ಆಗ ಕನ್ಸ್ಟ್ರಕ್ಷನ್ ಬ್ಯುಸಿನೆಸ್ ನಡೆಸುತ್ತಿದ್ದ ಮಹಿಳೆ ಕಾರ್ ಖರೀದಿಸಲು ಚೀಲಗಳ ತುಂಬಾ ಹಣವನ್ನು ತೆಗೆದುಕೊಂಡು ಬಂದಿದ್ದಾರೆ.
ಶೋರೂಮಿನಲ್ಲಿ ಕೆಲಸ ಮಾಡುವ ನೌಕರನ ಮಾಹಿತಿ ಮೇರೆಗೆ, ಗ್ರಾಹಕರೊಬ್ಬರು ಕರೆ ಮಾಡಿ ಸಣ್ಣ ನೋಟುಗಳಿಂದ ಹಣ ನೀಡಬಹುದಾ ಎಂದು ಕೇಳಿದ್ರು.
ನಾನು ಖಂಡಿತವಾಗಿಯೂ ನೀಡಬಹುದು ಎಂದೆ. ನಂತರ ಆಕೆ ಹಣವನ್ನು ತೆಗೆದುಕೊಂಡು ಹೋಗಿ ಬನ್ನಿ ಎಂದು ಕರೆದರು. ನಾನು ಹೋಗಿ ಕಾರ್ನ ಡಿಕ್ಕಿ ತೆಗೆದಾಗ 1 ಯುವಾನ್ ನೋಟುಗಳ ನಾಲ್ಕು ಚೀಲಗಳನ್ನ ನೋಡಿದೆ ಎಂದು ನೌಕರರೊಬ್ಬರು ಸ್ಥಳೀಯ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಹಣ ಎಣಿಸಲು ಪಜೀತಿ ಪಟ್ಟ ನೌಕರರು:-
ಹಣ ಎಣಿಸುವ ಕೆಲಸ ಜಾಸ್ತಿಯಾಗಿದ್ದರಿಂದ ಶೂರೂಮ್ನವರು ಕೊನೆಗೆ ಮೆಕ್ಯಾನಿಕ್ಗಳನ್ನೂ ಸಹಾಯಕ್ಕೆ ಕೆರೆದಿದ್ದಾರೆ. ಮಹಿಳೆ 200,000 ಯುವಾನ್(ಅಂದಾಜು 19.0 ಲಕ್ಷ ರೂ.) ಮೊತ್ತದ ಕಾರ್ ಖರೀದಿ ಮಾಡಿದ್ದು ಉಳಿದ ಹಣವನ್ನು ಮೊಬೈಲ್ ಬ್ಯಾಂಕಿಂಗ್ ಮೂಲಕ ಪಾವತಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕನ್ ಕಬಾಬ್ ಕಂಡ ತಕ್ಷಣ ಅಹಾ ಎಂದು ತಿನ್ನುವವರು ಈ ಸುದ್ದಿಯನ್ನು ನೋಡಲೇ ಬೇಕು. ಏಕೆಂದರೆ ರಸ್ತೆ ಬದಿಯಲ್ಲಿ ತಿನ್ನುವ ಕಲರ್ ಫುಲ್ಕಬಾಬ್ ಅನ್ನು ಕೊಳಕು ಜಾಗದಲ್ಲಿ ತಯಾರಿಸುತ್ತಾರೆ. ಹಣ ಕೊಟ್ಟು ಸಿಕ್ಕಸಿಕ್ಕ ಕಡೆ ಕಬಾಬ್ ತಿಂದರೆ ಫ್ರೀಯಾಗಿ ಕಾಯಿಲೆಗಳು ಕೂಡ ಬರುತ್ತದೆ. ಏಕೆಂದರೆ ಕಬಾಬ್ ತಯಾರಿಸುವ ವ್ಯಕ್ತಿ ಸಿಗರೇಟ್ ಸೇದಿಕೊಂಡು ಅದರ ಹೊಗೆಯನ್ನು ಕಬಾಬ್ ಮಸಾಲೆ ಪಕ್ಕ ಉಫ್ ಉಫ್ ಎಂದು ಉದುತ್ತಾನೆ.ಅಲ್ಲದೆ ಸಿಗರೇಟಿನ ವೇಸ್ಟ್ಅನ್ನು ಕಬಾಬ್ ಮಸಾಲೆಯ ಪಕ್ಕವೇ ಹಾಕುತ್ತಾನೆ. ಸಿಗರೇಟು ಸೇದಿದ ಹಾಗೂ…
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…
ಮೊಳಕೆ ಬಂದ ಕಾಳುಗಳು ಆರೋಗ್ಯಕ್ಕೆ ಒಳ್ಳೆಯದು. ಹೆಚ್ಚಾಗಿ ಡಯೆಟ್ ಮಾಡುವವರು ಮೊಳಕೆ ಬಂದ ಕಾಳುಗಳನ್ನು ತಿನ್ನುತ್ತಾರೆ. ಸಾಮಾನ್ಯವಾಗಿ ಹೆಸರು, ಕಡಲೆಯನ್ನು ಮೊಳಕೆ ಬರಿಸಿ ಸೇವಿಸುತ್ತಾರೆ.
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…