ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದರಿಂದ ನಿಮ್ಮ ರಾತ್ರಿಯ ನಿದ್ದೆ ಹಾಳಾಗುತ್ತಿದೆಯೇ…? ಹಾಗಾದರೆ, ಇಲ್ಲಿದೆ ನೋಡಿ ಸುಲಭ ಪರಿಹಾರ.

ವಿಂಟರ್ ಗ್ರೀನ್ ಆಯಿಲ್ :-
ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.

ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.
ವಿಟಮಿನ್-ಇ :-
ಮುಚ್ಚಿಕೊಂಡಿರುವ ನರಗಳಲ್ಲಿ ರಕ್ತ ಪ್ರಸರಣ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಸ್ಪಿನಾಚ್ ಹಾಗೂ ಅವಕಾಡೋ ಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಪ್ರಸಾರ ಸುಗಮವಾಗುತ್ತದೆ. ವಿಟಮಿನ್-ಇ ಸಪ್ಲಿಮೆಂಟ್ ಗಳನ್ನೂ ಉಪಯೋಗಿಸಬಹುದು.

ನೀರು :- ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು
ಶಾಖ : –ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ವಿದ್ಯುತ್ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ.

15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಎಪ್ಸಮ್ ಸಾಲ್ಟ್ ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.
ಎಲೆಕ್ಟ್ರೋಲೈಟ್ :-
ದೇಹಕ್ಕೆ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್,ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಈ ಎಲ್ಲಾ ಎಲೆಕ್ಟ್ರೋಲೈಟ್ ಗಳನ್ನು ಒಳಗೊಂಡಿರುವ ಆಹಾರ ಸೇವಿಸುವುದು ಉತ್ತಮ.

ಸ್ಟ್ರೆಚಿಂಗ್ : –ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.

ಕಾಲುಗಳ ಸೆಳೆತ ನಿಮ್ಮ ರಾತ್ರಿ ನಿದ್ದೆಯನ್ನು ಹಾಳುಗೆಡವುತ್ತದೆ. ಸಾಕಷ್ಟು ಶುದ್ದನೀರು, ಸತ್ವಯುತ ಆಹಾರ ಸೇವನೆ, ಸ್ಟ್ರೆಚ್ಚಿಂಗ್, ಮಸಾಜು ಮಾಡುವುದು ಮುಂತಾದುವುಗಳಿಂದ ಸೆಳೆತವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…
ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಫೆಬ್ರವರಿ, 2019) ದಿನದಲ್ಲಿ ನಂತರ ಹಣಕಾಸುಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ….
ಜೋಗ ಜಲಪಾತದ ನೆತ್ತಿ ಪ್ರದೇಶದ ಜಲಪಾತಕ್ಕೆ ಧುಮುಕಿ ಕಣ್ಮರೆಯಾಗಿದ್ದ ಯುವಕನ ಮೃತದೇಹ ಹುಡುಕಲು ಜಲಪಾತಕ್ಕೆ ಇಳಿದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಕತ್ತಲಾದರೂ ವಾಪಸ್ಸು ಬರದೆ ಇದ್ದದ್ದು, ಎಲ್ಲರ ಆತಂಕಕ್ಕೆ ಕಾರಣವಾಗಿತ್ತು.