ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದರಿಂದ ನಿಮ್ಮ ರಾತ್ರಿಯ ನಿದ್ದೆ ಹಾಳಾಗುತ್ತಿದೆಯೇ…? ಹಾಗಾದರೆ, ಇಲ್ಲಿದೆ ನೋಡಿ ಸುಲಭ ಪರಿಹಾರ.

ವಿಂಟರ್ ಗ್ರೀನ್ ಆಯಿಲ್ :-
ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.

ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.
ವಿಟಮಿನ್-ಇ :-
ಮುಚ್ಚಿಕೊಂಡಿರುವ ನರಗಳಲ್ಲಿ ರಕ್ತ ಪ್ರಸರಣ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಸ್ಪಿನಾಚ್ ಹಾಗೂ ಅವಕಾಡೋ ಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಪ್ರಸಾರ ಸುಗಮವಾಗುತ್ತದೆ. ವಿಟಮಿನ್-ಇ ಸಪ್ಲಿಮೆಂಟ್ ಗಳನ್ನೂ ಉಪಯೋಗಿಸಬಹುದು.

ನೀರು :- ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು
ಶಾಖ : –ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ವಿದ್ಯುತ್ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ.

15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಎಪ್ಸಮ್ ಸಾಲ್ಟ್ ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.
ಎಲೆಕ್ಟ್ರೋಲೈಟ್ :-
ದೇಹಕ್ಕೆ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್,ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಈ ಎಲ್ಲಾ ಎಲೆಕ್ಟ್ರೋಲೈಟ್ ಗಳನ್ನು ಒಳಗೊಂಡಿರುವ ಆಹಾರ ಸೇವಿಸುವುದು ಉತ್ತಮ.

ಸ್ಟ್ರೆಚಿಂಗ್ : –ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.

ಕಾಲುಗಳ ಸೆಳೆತ ನಿಮ್ಮ ರಾತ್ರಿ ನಿದ್ದೆಯನ್ನು ಹಾಳುಗೆಡವುತ್ತದೆ. ಸಾಕಷ್ಟು ಶುದ್ದನೀರು, ಸತ್ವಯುತ ಆಹಾರ ಸೇವನೆ, ಸ್ಟ್ರೆಚ್ಚಿಂಗ್, ಮಸಾಜು ಮಾಡುವುದು ಮುಂತಾದುವುಗಳಿಂದ ಸೆಳೆತವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ ಡ್ರಾ ಮಾಡಲು ಸಾಮಾನ್ಯವಾಗಿ ಎಲ್ಲರೂ ಎಟಿಎಂ ಬಳಸ್ತಾರೆ. ಬೇರೆ ಬ್ಯಾಂಕ್ ಎಟಿಎಂನಿಂದ ಹಣ ಡ್ರಾ ಮಾಡುವವರ ಸಂಖ್ಯೆಯೇ ಜಾಸ್ತಿ ಇದೆ. ಹೀಗೆ ಮಾಡುವಾಗ ಕೆಲವೊಂದು ಸಮಸ್ಯೆಗಳು ಎದುರಾಗುತ್ತವೆ.ಮಾನಸಿಕ ಹಾಗೂ ಆರ್ಥಿಕ ನಷ್ಟ ಎದುರಿಸಬೇಕಾಗುತ್ತದೆ. ಹಾಗಾಗಿ ಬೇರೆ ಬ್ಯಾಂಕ್ ಎಟಿಎಂಗೆ ಹೋದಾಗ ಕೆಲವೊಂದು ವಿಷಯಗಳ ಬಗ್ಗೆ ಗಮನ ನೀಡಬೇಕಾಗುತ್ತದೆ. ಬೇರೆ ಎಟಿಎಂಗೆ ಹೋದಾಗ ನೀವು ಈ ಕೆಲಸವನ್ನು ಅವಶ್ಯವಾಗಿ ಮಾಡಬೇಕಾಗುತ್ತದೆ. ಹಣ ಡ್ರಾ ಮಾಡಿದ ನಂತ್ರ ಬರುವ ಸ್ಲಿಪ್ ನ್ನು ಜೋಪಾನವಾಗಿ ತೆಗೆದಿಟ್ಟುಕೊಂಡಿರಬೇಕಾಗುತ್ತದೆ. ಕೆಲವೊಮ್ಮೆ ಹಣ ಡ್ರಾ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…
ಶ್ರೀಕೃಷ್ಣನು ಸ್ವರ್ಗದಿಂದ ತಂದ ಪಾರಿಜಾತ ವೃಕ್ಷದ ಬಗ್ಗೆ ತಿಳಿಯದವರು ಇಲ್ಲವೆಂದರೆ ಸುಳ್ಳಲ್ಲ. ಏಕೆಂದರೆ ಪ್ರತಿಯೊಬ್ಬರಿಗೂ ಗೊತ್ತು ಶ್ರೀಕೃಷ್ಣ ಪಾರಿಜಾತ ವೃಕ್ಷದ ಬಗ್ಗೆ ಪಾರಿಜಾತ ವೃಕ್ಷ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು ಶ್ರೀಕೃಷ್ಣ ಹಾಗೂ ಸತ್ಯಭಾಮೆ. ಪಾರಿಜಾತ ವೃಕ್ಷವನ್ನು ಸ್ವರ್ಗದಿಂದ ಸತ್ಯಭಾಮೆಗಾಗಿ ಶ್ರೀಕೃಷ್ಣನು ತಂದಿದ್ದಾನೆ ಎನ್ನುವ ವೃತ್ತಾಂತ ಪ್ರತಿಯೊಬ್ಬರಿಗೂ ಗೊತ್ತಿರುತ್ತದೆ. ಇನ್ನೂ ಹೀಗೆ ಬೋಕರಿಸಲ್ಪಟ್ಟ ಪಾರಿಜಾತ ವೃಕ್ಷ ಮತ್ತೆಲ್ಲೂ ಇಲ್ಲ. ಅದು ನಮ್ಮ ಭಾರತ ದೇಶದಲ್ಲಿಯೇ ಇದೆ. ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನು ತನ್ನ ಪ್ರಿಯಸಖಿಯಾದ ಸತ್ಯಭಾಮೆಗೆ ಬೋಕರಿಸಬೇಕೆಂದ್ದಿದ…
ಅರ್ಪಣಾ ಈಗ ಬೆಂಗಳೂರಿನ ನಿವಾಸಿಯಾಗಿದ್ದು, ನಿವೃತ್ತ ಎಸ್ಬಿಐ ಉದ್ಯೋಗಿ ಸಾವಿತ್ರಿ ಕೃಷ್ಣನ್ ಹಾಗೂ ಕಮಾಂಡರ್, ಮಾಜಿ ಭಾರತೀಯ ನೌಕಾಪಡೆ ಅಧಿಕಾರಿ ಕೆಆರ್ ಕೃಷ್ಣನ್ ಮಗಳು. ಶಾಲಾ ಶಿಕ್ಷಣವನ್ನು ಇಲ್ಲಿಯೇ ಪೂರ್ಣಗೊಳಿಸಿರುವ ಅರ್ಪಣಾ ಹೆಚ್ಚಿನ ಶಿಕ್ಷಣಕ್ಕಾಗಿ ಕೆನೆಡಾಗೆ ಹೋಗಿದ್ದರು. ಅರ್ಪಣಾ ಅಮೆರಿಕದ ಡಾರ್ಟ್ಮೌತ್ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ್ದಾರೆ. ಮೊದಲು ಮೆಕಿನ್ಸೆ ಹಾಗೂ ಸಿಕ್ವೊಯ ಕ್ಯಾಪಿಟಲ್ನಲ್ಲಿ ಕೆಲಸ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ರೋಹನ್ ಹಾರ್ವರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ಪಿಎಚ್ಡಿ ಪದವಿಯನ್ನು ಪಡೆದಿದ್ದಾರೆ. ರೋಹನ್ ಮೂರ್ತಿ ಕ್ಲಾಸಿಕಲ್ ಲೈಬ್ರರಿ…
ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…
ಹಸಿ ತರಕಾರಿಗಳ ಸೇವನೆಯಿಂದ ನಿಮ್ಮ ದೇಹಕ್ಕೆ ಬೇಕಾದ ಆರೋಗ್ಯ ಶಕ್ತಿ ದೊರೆಯುತ್ತದೆ ಎಂಬುದು ವೈದ್ಯಲೋಕ ತಿಳಿಸಿರುವ ಮಾಹಿತಿಯಾಗಿದೆ. ತರಕಾರಿಗಳನ್ನು ಬೇಯಿಸಿದಾಗ ಅದಲ್ಲಿರುವ ಪೋಷಕಾಂಶಗಳು ನಷ್ಟವಾಗುತ್ತವೆ ಎಂಬುದು ಸಂಶೋಧನೆಗಳಿಂದ ತಿಳಿದು ಬಂದಿದ್ದು ಆದಷ್ಟು ತರಕಾರಿಗಳನ್ನು ಹಸಿಹಸಿಯಾಗಿಯೇ ನಿಮ್ಮ ನಿತ್ಯದ ಆಹಾರ ಕ್ರಮದಲ್ಲಿ ಬಳಸುವುದರಿಂದ ಲಾಭ ನಿಮಗೇ ಉಂಟಾಗಲಿದೆ.