ಆರೋಗ್ಯ

ಕಿತ್ತಳೆ ಹಣ್ಣಿನ ಉಪಯೋಗಗಳನ್ನು ತಿಳಿಯ ಬೇಕಾ..? ಹಾಗದ್ರೆ ಈ ಲೇಖನವನ್ನು ಓದಿ…

1809

ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.

ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.

ಅಜೀರ್ಣದ ತೊಂದರೆಯನ್ನು ನಿವಾರಿಸಲು:-

ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-

ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.

ಉಸಿರಾಟವನ್ನು ಸರಾಗಗೊಳಿಸುತ್ತದೆ :-

ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.

ಚರ್ಮವನ್ನು ಬೆಳ್ಳಗಾಗಿಸಲು :-

ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ.  ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.

ಹೃದಯಘಾತ  ನಿಯಂತ್ರಣ:-

ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.

ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.

ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.

ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಸುದ್ದಿ

    ಶಾಲೆಯ ಬಾಗಿಲಿನ ಬಳಿ ನಿಂತ ಬಾಲಕಿ. ಫೋಟೋ ವೈರಲ್ ಆಗ್ತಿದ್ದಂತೆ ಅದೇ ಶಾಲೆಯಲ್ಲಿ ಅಡ್ಮಿಶನ್.

    ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ  ಅವುಲಾ ಶ್ರೀನಿವಾಸ್  ಎಂಬುವವರು…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • Place

    ಕೇದಾರನಾಥ ದೇವಾಲಯ

    ಹಿಂದುಗಳು ನಡೆದುಕೊಳ್ಳುವ ಪವಿತ್ರ ನಾಲ್ಕು ಧಾಮಗಳ ಯಾತ್ರೆಯಲ್ಲಿ ಕೇದಾರನಾಥವೂ ಸಹ ಒಂದು, ಅಲ್ಲದೆ, ಸಮುದ್ರ ಮಟ್ಟದಿಂದ ಅತಿ ಎತ್ತರದಲ್ಲಿ ನೆಲೆಸಿರುವ ದೇವಾಲಯವೂ ಸಹ ಇದೆ. ಮೂಲತಃ ಈ ದೇವಾಲಯವು ಪಾಂಡವರಿಂದ ನಿರ್ಮಿಸಲಾಗಿದೆ ಎನ್ನುತ್ತಾರಾದರೂ ಪ್ರಸ್ತುತ ರಚನೆಯು ಆದಿ ಗುರು ಶಂಕರಾಚಾರ್ಯರಿಂದ ನಿರ್ಮಿಸಲ್ಪಟ್ಟಿದೆ ಎನ್ನಲಾಗುತ್ತದೆ. ಪ್ರಾಯಶ: ಕೇದಾರನಾಥ ತಲುಪುವುದು ಬಹುತೇಕರಿಗೆ ಬಲು ಕಷ್ಟಕರವಾಗಿದೆ. ಏಕೆಂದರೆ ಇಲ್ಲಿರುವ ವಿಪರೀತ ಹವಾಮಾನ. ಒಮ್ಮೊಮ್ಮೆ ಮೇಘಗಳ ಸ್ಫೋಟವಾಯಿತೆಂದರೆ ಸಾಕಷ್ಟಿ ನೀರು ಹಾಗೂ ಕಲ್ಲು ಬಂಡೆಗಳು ಕೇದಾರನಾಥಕ್ಕೆ ನುಗ್ಗುವುದು ಸಾಮಾನ್ಯ. ಕಳೆದ 2013 ರಲ್ಲಿ…

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.