News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಆರೋಗ್ಯ

ಕಿತ್ತಳೆ ಹಣ್ಣಿನ ಉಪಯೋಗಗಳನ್ನು ತಿಳಿಯ ಬೇಕಾ..? ಹಾಗದ್ರೆ ಈ ಲೇಖನವನ್ನು ಓದಿ…

1827

ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.

ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.

ಅಜೀರ್ಣದ ತೊಂದರೆಯನ್ನು ನಿವಾರಿಸಲು:-

ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-

ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.

ಉಸಿರಾಟವನ್ನು ಸರಾಗಗೊಳಿಸುತ್ತದೆ :-

ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.

ಚರ್ಮವನ್ನು ಬೆಳ್ಳಗಾಗಿಸಲು :-

ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ.  ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.

ಹೃದಯಘಾತ  ನಿಯಂತ್ರಣ:-

ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.

ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.

ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.

ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ