ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-
ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…
ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನಟಿ ವಿಜಯಲಕ್ಷ್ಮಿ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆಗೆ ಹಣಕಾಸು ನೆರವು ನೀಡುವಂತೆ ಅವರ ಸಹೋದರಿ ಉಷಾದೇವಿ ಮನವಿ ಮಾಡಿದ್ದಾರೆ. ಸ್ಯಾಂಡಲ್ ವುಡ್ ಟಾಪ್ ನಟಿಯಾಗಿದ್ದ ವಿಜಯಲಕ್ಷ್ಮಿ ಅವರಿಗೆ ತೀವ್ರವಾದ ಸುಸ್ತು ಮತ್ತು ಹೈ ಬಿಪಿಯಿಂದಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ವಾರ ಅವರ ತಾಯಿಯ ಆರೋಗ್ಯ ಸರಿಯಿಲ್ಲದ ಕಾರಣ ಆಸ್ಪತ್ರೆಗೆ ಸೇರಿಸಿದ್ದು, ಇದ್ದ ಹಣವನ್ನೆಲ್ಲ ಖರ್ಚು ಮಾಡಲಾಗಿದೆ. ಈಗ ವಿಜಯಲಕ್ಷ್ಮಿ ಅವರನ್ನು ಆಸ್ಪತ್ರೆಗೆ ಸೇರಿಸಿದ್ದು ಚಿಕಿತ್ಸೆಗೆ ನೆರವು ನೀಡುವಂತೆ ಸಹೋದರಿ ಉಷಾದೇವಿ…
ನಮ್ಮ ಮೊಬೈಲ್’ಗಳಲ್ಲಿ ಹಾಕಿಕೊಳ್ಳುವ ಎಷ್ಟೋ appಗಳು, ನಮ್ಮ ನಿತ್ಯ ಜೀವನದಲ್ಲಿ ತುಂಬಾ ಪ್ರಭಾವ ಬೀರುತ್ತವೆ.ಅದರಲ್ಲಿ ಕೆಲವು appಗಳು, ಅವುಗಳ ಉಪಯೋಗಗಳು ನಿಮಗಾಗಿ…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.