News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

826

ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಈ ರೀತಿಯ ಪ್ರಕರಣಗಳಿಗೆ ಪರಿಹಾರ ಎಲ್ಲಿದೆ..?

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ  ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಪಿಂಚಣಿಯೂ ನಿಂತು ಬಿಟ್ಟಿದೆ…

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.

ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್‌ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .

 

ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • inspirational

    ರೋಗ ನಿರೋಧಕ ಶಕ್ತಿ ಹೆಚ್ಚಳ ಹೇಗೆ? ಚರಕ ಸಂಹಿತೆಯ ಉತ್ತರ..

    ಚರಕ ಸಂಹಿತೆ ಇಂದಿಗೂ ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಗ್ರಂಥ ಎಂದು ಎಲ್ಲ ವೈದ್ಯರು ಒಕ್ಕೊರಲಿನಿಂದ ಒಪ್ಪುತ್ತಾರೆ , ಹೊಸ ಆರೋಗ್ಯ ಸಮಸ್ಯೆಗಳು , ಜಟಿಲ ಕಾಯಿಲೆಗಳು ಉತ್ಪತ್ತಿ ಆದಾಗ ವೈಜ್ಞಾನಿಕ ಪ್ರಪಂಚ ಆಸೆ ಭರವಸೆಗಳಿಂದ  ನೋಡುವುದು ಈ 2ನೇ ಶತಮಾನದ ಗ್ರಂಥದೆಡೆಗೆ , ಚರಕ ಸಂಹಿತೆಯಲ್ಲಿ ಅಗ್ನಿವೇಶ ಎಂಬ ವಿದ್ಯಾರ್ಥಿಯು ಗುರುವಾದ ಅತ್ರೇಯರಲ್ಲಿ ನಮ್ಮ ಮನಸ್ಸಿನಲ್ಲಿರುವ ಪ್ರಶ್ನೆಯನ್ನೇ ಕೇಳಿದ್ದಾನೆ -ಹಿತಕರವಾದ ಅಥವಾ ಅಹಿತಕರವಾದ ಆಹಾರ ಸೇವಿಸುವ ಎರಡು ತರಹದ ಜನರಲ್ಲಿ ಕೂಡ ಕೆಲವರು ಆರೋಗ್ಯದಿಂದ ಇರುತ್ತಾರೆ ,ಕೆಲವರು…

  • ಸುದ್ದಿ

    7 ತಲೆಯ ಹಾವಿನ ಪೊರೆ ಪತ್ತೆ..!ನೋಡಿದರೆ ಅದೃಷ್ಟ ಎಂದು ಇಲ್ಲಿನ ಜನ ಮಾಡುತ್ತಿರುವುದೇನು ಗೊತ್ತಾ..?

    ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಸಮೀಪ 7 ಹೆಡೆ ಸರ್ಪದ ಅಸ್ತಿತ್ವ ಕಂಡುಬಂದಿದೆ. 7 ತಲೆಯ ಹೊಂದಿರುವ ಹಾವಿನ ಪೂರೆ ಕಾಣಿಸಿಕೊಂಡಿದ್ದು, ಇದು ದೈವ ಸ್ವರೂಪ ಎಂದು ಗ್ರಾಮಸ್ಥರು ಹೂವು, ಹಣ್ಣು, ಅರಿಶಿನ ಕುಂಕುಮ ಹಾಕಿ ಪೂಜೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್ ಆಗಿದೆ. ಕೋಡಿಹಳ್ಳಿ ಸಮೀಪದ ಮರಿಗೌಡನ ದೊಡ್ಡಿ ಬಳಿ ನಿರ್ಜನ ಪ್ರದೇಶದಲ್ಲಿ ಹಾವಿನ ಪೊರೆ ಕಾಣಿಸಿಕೊಂಡಿದೆ. ಸಮೀಪದಲ್ಲಿ ದೊಡ್ಡ ಹುತ್ತ ಕೂಡ ಇದೆ. ಸುಮಾರು 6 ತಿಂಗಳ ಹಿಂದೆ ಕೋಟೆಕೊಪ್ಪ ಗ್ರಾಮದ…

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…