News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

825

ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಈ ರೀತಿಯ ಪ್ರಕರಣಗಳಿಗೆ ಪರಿಹಾರ ಎಲ್ಲಿದೆ..?

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ  ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಪಿಂಚಣಿಯೂ ನಿಂತು ಬಿಟ್ಟಿದೆ…

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.

ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್‌ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .

 

ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕ್ಯಾರೆಟ್ ನಲ್ಲಿದೆ ಅದ್ಬುತ ಅರೋಗ್ಯಕರ ಅಂಶಗಳು.

    ಕ್ಯಾರೆಟ್ಟುಗಳಲ್ಲಿ ಕ್ಯಾಲೋರಿ ಪ್ರೋಟೀನ್ ಹಾಗೂ ಕೊಬ್ಬಿನ ಅಂಶಗಳು ತುಂಬ ಕಡಿಮೆ ಇದ್ದು, ಸುಮಾರು 86-95 ಶೇಖಡಾದಷ್ಟು ನೀರಿನ ಅಂಶವನ್ನು ಒಳಗೊಂಡಿದೆ. ಒಂದು ಮಧ್ಯಮ ಗಾತ್ರದ ಕ್ಯಾರೆಟ್ ಸೇವಿಸುವುದರಿಂದ ಕೇವಲ ಇಪ್ಪತ್ತೈದು ಕ್ಯಾಲೋರಿಗಳು ಹಾಗೂ ಕೇವಲ ನಾಲ್ಕು ಗ್ರಾಂ ನಷ್ಟು ಜೀರ್ಣವಾಗುವ ಕಾರ್ಬೋಹೈಡ್ರೇಟುಗಳು ಲಭ್ಯವಾಗುತ್ತವೆ. ವಿವಿಧ ಪ್ರೋಟಿನ್, ವಿಟಮಿನ್ ಗಳನ್ನು ಹೇರಳವಾಗಿ ಹೊಂದಿರುವ ಕ್ಯಾರೆಟ್ ರೋಗ ನಿರೋಧಕ ಶಕ್ತಿಯನ್ನು ಕೂಡ ಹೊಂದಿದೆ. ಇದು ತ್ವಚೆಗೆ ಸಹಕಾರಿಯಾಗಿದ್ದು, ಹಲವಾರು ರೋಗಗಳನ್ನು ದೂರವಿಡುತ್ತದೆ.ರಕ್ತದ ಶುದ್ಧತೆಗೆ ಹಾಗೂ ಹರಿಯುವಿಕೆಗೆ ನೆರವಾಗುವ ಅಲ್ಕಾಲೈನ್ ಅಂಶಗಳನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

    ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ…

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಸಿನಿಮಾ

    ಶಂಕರ್ ನಾಗ್, ಧೋನಿ, ಮೋದಿಯವರು ನನಗೆ ಸ್ಫೂರ್ತಿ ಎಂದ ನಟ ರಾಕಿಂಗ್ ಸ್ಟಾರ್ ಯಶ್.

    ಕನ್ನಡ ನಿರ್ದೇಶಕ ಮತ್ತು ನಟ ಶಂಕರ್ ನಾಗ್ ಅವರು, ಕ್ರಿಕೆಟರ್ ಧೋನಿ ಅವರ ಮತ್ತು ಪ್ರಧಾನ ಮಂತ್ರಿ ಮೋದಿ ಅವರು ನನಗೆ ಸ್ಫೂರ್ತಿಯಾಗಿದ್ದಾರೆ ಎಂದು ನಟ ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಸೋಮವಾರ ಸಂಜೆ ಮುಂಬೈನಲ್ಲಿ ನಡೆದ ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದು ನಂತರ ಜಿಕ್ಯೂ ಇಂಡಿಯಾ ಸಂದರ್ಶನದಲ್ಲಿ ಮಾತನಾಡಿದ ಅವರು, ನಿಮ್ಮ ಸಕ್ಸಸ್ ಮಂತ್ರ ಯಾವುದು ಎಂದು ಕೇಳಿದಾಗ, ನಾನು ನನಗೆ ಇಷ್ಟವಾದ ಕೆಲಸ ಮಾಡುತ್ತೇನೆ. ಆಗ…

  • ಸುದ್ದಿ

    ಶೀಘ್ರದಲ್ಲೇ ಇನ್ಮುಂದೆ ದೇಶದ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ಮಣ್ಣಿನ ಕುಡಿಕೆಗಳಲ್ಲಿ ಬಿಸಿ ಬಿಸಿ ಟೀ ಲಭ್ಯ…!

    ಎಲ್ಲ ಪ್ರಮುಖ ರೈಲ್ವೆ ನಿಲ್ದಾಣಗಳು, ಬಸ್ ಡಿಪೋಗಳು, ಏರ್ಪೋರ್ಟ್ಗಳು ಮತ್ತು ಮಾಲ್ಗಳಲ್ಲಿ ನೀವು ‘ಟೀ’ಯನ್ನು ಮಣ್ಣಿನ ಲೋಟಗಳಲ್ಲಿ(ಕುಲ್ಹಾದ್) ಕುಡಿಯುವ ಅವಕಾಶ ಸದ್ಯದಲ್ಲೇ ಸಿಗಲಿದೆ. ಇಂಥದ್ದೊಂದು ವ್ಯವಸ್ಥೆ ಜಾರಿಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಲವು ತೋರಿಸಿದ್ದಾರೆ. ಇದೇ ವೇಳೆ ಕೇಂದ್ರ ಸಚಿವ ನಿತಿನ್ ಗಡ್ಕರಿ, ಬೇಡಿಕೆಗೆ ಅನುಗುಣವಾಗಿ ಮಣ್ಣಿನ ಲೋಟಗಳ ಉತ್ಪಾದನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡುವಂತೆ ಖಾದಿ ಮತ್ತು ಗ್ರಾಮೋದ್ಯಮ ಆಯೋಗಕ್ಕೂ ನಿರ್ದೇಶನ ನೀಡಿದ್ದಾರೆ ಮಣ್ಣಿನ ಲೋಟಗಳನ್ನು ಬಳಸುವ ಪರಿಸರಸ್ನೇಹಿ ವ್ಯವಸ್ಥೆಯನ್ನು ದೇಶದ ಪ್ರಮುಖ100 ರೈಲ್ವೆ…