ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.
ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .
ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 24 ಜನವರಿ, 2019 ಜಂಟಿ ಯೋಜನೆಗಳು ಮತ್ತು ಸಂಶಯಾಸ್ಪದ ಹಣಕಾಸು ಯೋಜನೆಗಳಲ್ಲಿ ಹೂಡಿಕೆ ಮಾಡಬೇಡಿ. ನೀವು…
ನಿತ್ಯ ಭವಿಷ್ಯ………… ಮೇಷ ರಾಶಿ ನಿಮ್ಮ ಬುದ್ಧಿ ಚಾತುರ್ಯಕ್ಕೆ ಎಂತಹವರೂ ತಲೆ ಬಾಗುವರು. ಜೀವನದಲ್ಲಿನ ಕಷ್ಟಗಳ ಮೇಲೆ ಜಯ ಸಾಧಿಸುವಿರಿ. ಉತ್ತಮ ಸ್ನೇಹಿತರ ಬೆಂಬಲ ನಿಮಗೆ ದೊರೆಯುವುದು. ಹಣಕಾಸಿನ ಸ್ಥಿತಿ ಉತ್ತಮವಾಗಿರುವುದು. ನಂಬಿದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಕ್ರಮೇಣ ತೊಂದರೆಗೆ ದಾರಿ ಆಗುವುದು. ವೃಷಭ ರಾಶಿ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದೂರಿನ ಬಂಧುಗಳಿಂದ ಕಿರಿಕಿರಿ ಮಾತುಗಳು ಎದುರಾಗುವ ಸಂಭವವಿದೆ. ನೀವು ಮಾಡದೇ ಇರುವ ತಪ್ಪಿಗೆ ಮುನಿಸಿಕೊಳ್ಳುವ ಸಂದರ್ಭವಿದೆ. ಇದಕ್ಕೆ ಹೆಚ್ಚಿನ…
ಆನ್ಲೈನ್ ಮಾರುಕಟ್ಟೆ ಇಂದಿನ ದಿನದಲ್ಲಿ ಮೊಬೈಲ್ ಫೋನ್ಗಳ ಮಾರಾಟವನ್ನು ಹೆಚ್ಚು ಮಾಡುತ್ತಿದೆ. ವಿವಿಧ ಆಫರ್ಗಳು, ಹೊಸ ಫೋನ್ ಲಾಂಚ್ ಗಳು ಸೇರಿದಂತೆ ಎಕ್ಸ್ಕ್ಲೂಸಿವ್ ಸೇಲ್ಗಳು ಸೇರಿದಂತೆ ಅನೇಕ ಆಫರ್ ಗಳು ಲಭ್ಯವಿದೆ.
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಭಾರತದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ ಹಾಗೂ ಪಾಕ್ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಹೈದರಾಬಾದ್ ಪ್ರವೇಶಿಸದಂತೆ ಬಿಜೆಪಿ ಶಾಸಕ ರಾಜಾ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ಹಮಾರಾ ಪಾಕಿಸ್ತಾನ್ ಜಿಂದಾಬಾದ್ ಎಂದು ಟ್ವಿಟ್ಟರ್ ನಲ್ಲಿ ಶೋಯೇಬ್ ಮಲ್ಲಿಕ್ ಹೇಳಿದ್ದರ ವಿರುದ್ಧ ಅನೇಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೆಲವರು ದೈಹಿಕ ಹಲ್ಲೆಯ ಎಚ್ಚರಿಕೆಯನ್ನೂ ನೀಡಿದ್ದು, ತೆಲಂಗಾಣಕ್ಕೆ ಬಂದರೆ ಪಾಕಿಸ್ತಾನಕ್ಕೆ ಹೇಗೆ ಹಿಂದಿರುಗುತ್ತೀಯ ನೋಡುತ್ತೇನೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ರಾಜಾ…
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…