News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸುದ್ದಿ

ಕುಷ್ಠ ರೋಗಿಯ ಅನ್ನ, ಪಿಂಚಣಿ ಕಿತ್ತುಕೊಂಡ ಆಧಾರ್..! ಓದಿ ಈ ಮನಕಲುಕುವ ಸ್ಟೋರಿ…

819

ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಈ ರೀತಿಯ ಪ್ರಕರಣಗಳಿಗೆ ಪರಿಹಾರ ಎಲ್ಲಿದೆ..?

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ  ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಪಿಂಚಣಿಯೂ ನಿಂತು ಬಿಟ್ಟಿದೆ…

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.

ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.

ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್‌ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .

 

ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಸುದ್ದಿ

    ಹೆಬ್ಬಾವು ಕಚ್ಚಿ ಸತ್ತ ಮಹಿಳೆ ; ಸಾವಿನ ಬಳಿಕ ಮಹಿಳೆ ಮನೆಯಲ್ಲಿ 140 ಹಾವು ಪತ್ತೆ..!ಯಾಕೆ ಗೊತ್ತ?

    ಹೆಬ್ಬಾವು ಸುತ್ತಿ, ಉಸಿರುಗಟ್ಟಿ ಮಹಿಳೆಯೊಬ್ಬರು ಸಾವಿಗೀಡಾಗಿದ್ದು, ಅವರ ಮನೆಯಲ್ಲಿ 140 ಹಾವುಗಳು ಪತ್ತೆಯಾಗಿ ಅಚ್ಚರಿ ಮೂಡಿಸಿದೆ. ಅಮೆರಿಕದ ಇಂಡಿಯಾನಾ ಎಂಬಲ್ಲಿ 36 ವರ್ಷ ವಯಸ್ಸಿನ ಲಾರಾ ಹರ್ಸ್ಟ್ ಎಂಬ ಮಹಿಳೆಯ ದೇಹವನ್ನುಹೆಬ್ಬಾವು ಸುತ್ತಿಕೊಂಡಿತ್ತು. ಅವರು ಅದರಿಂದ ತಪ್ಪಿಸಿಕೊಳ್ಳಲುಎಷ್ಟು ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ.ಹಾಗೇ ಉಸಿರುಗಟ್ಟಿ ಅವರು ಅಸುನೀಗಿದ್ದರು. ಈ ಸಂದರ್ಭದಲ್ಲಿ ಮಹಿಳೆಯಿದ್ದ ಮನೆಯಲ್ಲಿ 140 ಹಾವಿದ್ದಿದ್ದು ಬೆಳಕಿಗೆ ಬಂದಿದೆ. ಈ ಹಾವುಗಳನ್ನು ಡಾನ್ ಮುನ್ಸನ್ ಎಂಬುವವರು ಸಾಕಿದ್ದರು. ಅವರ ಬಳಿ ಲಾರಾ ಅವರು ಇಪ್ಪತ್ತಕ್ಕೂ ಹೆಚ್ಚು ಹಾವುಗಳನ್ನು ಸಾಕಲು…

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.

  • Uncategorized

    ಮಾಲೂರಿನ ಯಶವಂತಪುರ ರಾಜ್ಯದ ಮೊದಲ ಡಿಜಿಟಲ್ ಹಳ್ಳಿ

    ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.

  • ಜೀವನಶೈಲಿ

    ಭಾರತೀಯ ಮಹಿಳೆಯರು ಆಭರಣಗಳನ್ನು ಧರಿಸುವುದರ ಹಿಂದಿರುವ ವೈಜ್ಞಾನಿಕ ಕಾರಣಗಳು ಗೊತ್ತಾ…? ಈ ಲೇಖನ ಓದಿ…

    ಪ್ರಮಂಚದಲ್ಲಿ ಮಹಿಳೆಯರು ಸುಂದರವಾಗಿ ಕಾಣಲು ಅಲಂಕಾರ ಮಾಡಿಕೊಳ್ಳುತ್ತಾರೆ. ಅಲಂಕಾರ ಮಾಡಿಕೊಳ್ಳದೆ ಮಹಿಳೆಯರ ದಿನ ಪೂರ್ಣವಾಗುವುದಿಲ್ಲ. ಅಲಂಕಾರ ಹಾಗೂ ಒಡವೆಗಳಿಗಾಗಿ ಸಾಕಷ್ಟು ಹಣವನ್ನು ಖರ್ಚುಮಾಡಲು ಹಿಂಜರಿಯುವುದಿಲ್ಲ. ಆದರೇ ನಮ್ಮ ಭಾರತೀಯ ಮಹಿಳೆಯರು ಅಲಂಕಾರಕ್ಕಾಗಿ ಧರಿಸುವ ಆಭರಣಗಳ ಹಿಂದಿರುವ ವೈಜ್ಞಾನಿಕ ಕಾರಣಗಳು ಏನೆಂದು ತಿಳಿಯೋಣ.

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…