ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.
ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .
ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 6 ದಿನಗಳು ಬಾಕಿ ಉಳಿದಿವೆ. ಕೆಲ ವೀಕ್ಷಕರಿಂದ ‘ಡ್ರಾಮಾ ಕ್ವೀನ್’ ಅಂತಲೇ ಕರೆಯಿಸಿಕೊಂಡಿದ್ದ ಅನುಪಮಾ ಗೌಡ ಭಾನುವಾರ ನಡೆದ ಎಲಿಮಿನೇಷನ್ ಪಂಚಾಯ್ತಿಯಲ್ಲಿ ಮನೆಗೆ ಕಳುಹಿಸಲಾಗಿತ್ತು.
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಹಾಲಿವುಡ್ ನಟಿ ಆ್ಯಂಜಲೀನಾ ಜೋಲಿಯಂತೆ ಕಾಣಲು ಇರಾನಿನ ಯುವತಿಯೊಬ್ಬಳು 50 ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿದ್ದಾಳೆ ಎಂಬ ಸುದ್ದಿ ಕೇಳಿ ಜನ ದಂಗಾಗಿದ್ದಾರೆ.
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…