ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಧಾರ್ ಕಾರ್ಡ್ ಎಂಬ ಸಾರ್ವತ್ರಿಕ ಗುರುತಿನ ಚೀಟಿ, ಒಂದೆಡೆ ಅಕ್ರಮ ನುಸುಳುಕೋರರನ್ನು ತಡೆಗಟ್ಟಲು, ಸರ್ಕಾರದ ಯೋಜನೆಗಳು ನೈಜ ಫಲಾನುಭವಿಗಳಿಗೆ ಸಿಗುವಂತೆ ಮಾಡಲು ಸಹಕಾರಿಯಾಗುತ್ತಿರುವ ಹೊತ್ತಲ್ಲೇ, ಇನ್ನೊಂದೆಡೆ ಹಲವು ಬಡವರ ಪಾಲಿಗೆ ಆಧಾರ್ ಕಾರ್ಡ್ ಒಂದು ಶಾಪವಾಗಿ ಪರಿಣಮಿಸಿದೆ! ಕುಷ್ಟರೋಗದ ಕಾರಣ ಕಣ್ಣಿನ ದೃಷ್ಟಿ ಹಾಗೂ ಬೆರಳುಗಳನ್ನು ಕಳೆದುಕೊಂಡಿರುವುದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿಲ್ಲ.

ಮಾಗಡಿ ರಸ್ತೆಯಲ್ಲಿ ವಾಸಿಸುತ್ತಿರುವ 65 ವರ್ಷದ ಸಾಜಿದಾ ಬೇಗಂ ಅಡ್ಡಿ ಆತಂಕಗಳಿಲ್ಲದೆ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಏಕೆಂದರೆ, ಅವರ ಬಳಿ ಎಲ್ಲ ಕೆಲಸ ಕಾರ್ಯಗಳಿಗೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಇಲ್ಲ!ಕುಷ್ಟರೋಗ ದಿಂದ ತಮ್ಮ ಕೈಬೆರಳುಗಳನ್ನೂ, ಕಣ್ಣಿನ ದೃಷ್ಟಿಯನ್ನೂ ಕಳೆದುಕೊಂಡ ಅವರಿಗೆ ಬೆರಳಚ್ಚು ನೀಡುವುದಕ್ಕೆ, ಕಣ್ಣಿನ ರೆಟಿನಾ ಅಚ್ಚು ನೀಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಆಧಾರ್ ಕಾರ್ಡ್ ಇಲ್ಲ!

ಆಧಾರ್ ಕಾರ್ಡ್ ಇಲ್ಲವೆಂಬ ಕಾರಣಕ್ಕೆ ಅವರಿಗೆ ಪ್ರತಿ ತಿಂಗಳು ಬರುತ್ತಿದ್ದ 1೦೦೦ ರೂ. ಪಿಂಚಣಿಯೂ ನಿಂತು ಬಿಟ್ಟಿದೆ! ಕೈ ಬೆರಳು ಇಲ್ಲದವರು, ಕುಷ್ಟ ರೋಗಿಗಳು ಆಧಾರ್ ಕಾರ್ಡ್ ಮಾಡಿಸುವುದು ಹೇಗೆ ಎಂಬ ಬಗ್ಗೆ ಸ್ಪಷ್ಟನೆ ಇಲ್ಲ.
ಈ ಕುರಿತು ಮಾತನಾಡಿದ ಮಾಗಡಿ ರಸ್ತೆಯಲ್ಲಿರುವ ಕುಷ್ಟ ರೋಗಿಗಳ ಆಸ್ಪತ್ರೆಯ ವೈದ್ಯಕೀಯ ಆಡಳಿತಾಧಿಕಾರಿ ಡಾ.ಅಯುಬ್ ಅಲಿ ಜೈ, 1೦೦ ಹಾಸಿಗೆಯ ನಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 57 ಜನರಲ್ಲಿ 1೦ ಜನರ ಬಳಿ ಆಧಾರ್ ಕಾರ್ಡ್ ಇಲ್ಲ. ರೋಗಿಗಳು ಹೇಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂಬ ಬಗ್ಗೆ ಸ್ಪಷ್ಟನೆ ಇಲ್ಲ ಎಂದಿದ್ದಾರೆ.

ಸಾಜಿದಾ ಬೇಗಂರಂತೆಯೇ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇನ್ನೊಬ್ಬ ಕುಷ್ಟ ರೋಗಿ ಆಧಾರ್ ಕಾರ್ಡ್ ಮಾಡಿಸುವುದಕ್ಕಾಗಿ ಬಹಳಷ್ಟು ಬಾರಿ ಬೆಂಗಳೂರು ಒನ್ ಕೇಂದ್ರಕ್ಕೆ ಅಲೆದಿದ್ದಾರೆ. ಅಲ್ಲಿನ ಸಿಬ್ಬಂದಿಗಳು, ನಿಮಗೆ ಆಧಾರ್ ಕಾರ್ಡ್ ನೀಡುವುದಕ್ಕೆ ಸಾಧ್ಯವಿಲ್ಲ ಎಂದು ವಾಪಸ್ ಕಳಿಸಿದ್ದಾರೆ.
ಈ ಕುರಿತು ಸ್ಪಷ್ಟನೆ ನೀಡಿದ UIDAI (Unique Identification Authority of India ಮೊದಲು ಅವರು ಎನ್ ರೋಲ್ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ಏನಾದರೂ ದೋಷವಿದ್ದರೆ ಅದಕ್ಕೂ ಒಂದು ಪತ್ರ ಬರುತ್ತದೆ ಎಂದಿದೆ. ಆದರೂ ಆಧಾರ್ ಕಾರ್ಡ್ಗೆ ಅತ್ಯಗತ್ಯವಾದ ಬೆರಳಚ್ಚು ನೀಡುವುದಕ್ಕೆ ಸಾಧ್ಯವಿಲ್ಲದವರು ಏನು ಮಾಡಬೇಕೆಂಬ ಬಗ್ಗೆ ಸ್ಪಷ್ಟನೆ ಇಲ್ಲ .
ಆಧಾರ್ ನೋಂದಣಿಗೆ ತೊಡಕುಂಟಾಗಿ ಪಿಂಚಣಿ ವಂಚಿತರಾಗಿದ್ದ ಕುಷ್ಟರೋಗ ಎದುರಿಸುತ್ತಿರುವ ಸಜೀದಾ ಬೇಗಂ (65) ಅವರಿಗೆ ಹಲವರು ನೆರವಿನ ಹಸ್ತ ಚಾಚಿದ್ದಾರೆ. ಘಟನೆ ಬಗ್ಗೆ ಮಾಹಿತಿ ಪಡೆದಿರುವ ಕಂದಾಯ ಇಲಾಖೆ ಕಾರ್ಯದರ್ಶಿ ಹಾಗೂ ಯುಐಡಿಎಐ ಈ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ರಾಷ್ಟ್ರೀಯ ಹೆಲ್ತ್ ಮಿಷನ್ ನ ನಿರ್ದೇಶಕ ರಥನ್ ಕೇಲ್ಕರ್, ಈ ವಿಷಯವನ್ನು ಸೆಂಟರ್ ಫಾರ್ ಇ-ಕಾಮರ್ಸ್ ನ ಗಮನಕ್ಕೆ ತಂದಿದ್ದೇನೆ, ಇದೇ ಮಾದರಿಯ ಪ್ರಕರಣಗಳು ಚಾಮರಾಜನಗರದಲ್ಲಿಯೂ ಕಂಡುಬಂದಿದೆ. ಈ ರೀತಿಯ ಪ್ರಕರಣಗಳಿಗೆ ಪರಿಹಾರ ಇನ್ನಷ್ಟೇ ಕಂಡುಕೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಒಂದೆಡೆ ಸರ್ಕಾರಿ ಸಂಸ್ಥೆಗಳು ಸಜೀದಾ ಬೇಗಂ ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುತ್ತಿದ್ದರೆ, ಮತ್ತೊಂದೆಡೆ ನೆಟಿಜನ್ ಗಳೂ ಸಹ ನೆರವಿಗೆ ಧಾವಿಸುತ್ತಿದ್ದಾರೆ. ಸಜೀದಾ ಬೇಗಂ ಕುರಿತ ವರದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನವದೆಹಲಿಯ ಡೀ ಶರ್ಮಾ, ನೇಹಾ ಬಾರ್ವೆ ವ್ಯಾಸ್, ಬಜಾಜ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫೈನಾನ್ಶಿಯಲ್ ಅಡ್ವೈಸರ್ ಆದ ಫಲಕ್ ರಬ್ನವಾಜ್, ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವವರು ಸಜೀದಾ ಬೇಗಂ ಗೆ ನೆರವು ನೀಡಲು ಆಸ್ಪತ್ರೆಯ ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್ನ ಮಸ್ಕತ್ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ. LLC ಎರಡು ಸುತ್ತುಗಳು ಮತ್ತು ಫೈನಲ್ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…
![]()
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…
21,091 ಕೋಟಿ ರೂ. ವೆಚ್ಚದ ಯೋಜನೆಗೆ ಸಚಿವ ಸಂಪುಟದ ಅನುಮೋದನೆ ಬಾಕಿ
73 ಕಿ.ಮೀ ಉದ್ದದ 8 ಪಥದ ಪೆರಿಫೆರಲ್ ರಿಂಗ್ ರಸ್ತೆ
ಸುಮಾರು 38,000 ಮರಗಳ ಹನನ..!
ಜೆಡಿಎಸ್ ನ ರೆಬೆಲ್ ಶಾಸಕರಲ್ಲಿ ಗುರುತಿಸಿಕೊಂಡಿರುವ ಮಾಗಡಿ ಶಾಸಕ ಬಾಲಕೃಷ್ಣ ರವರು ಎಂದು ಮಾಜಿ ಪ್ರಧಾನಿ ದೇವೇಗೌಡ್ರು ಮತ್ತು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ. ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…