ಆರೋಗ್ಯ

ಕೊಲೆಸ್ಟ್ರಾಲ್ ನಿಯಂತ್ರಿಸಲು ನೆಲ್ಲಿಕಾಯಿ ಉಪಯೋಗ ತಿಳಿಯಲು ಈ ಲೇಖನಿ ಓದಿ…

403

ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್‌ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ.

ಕೊಲೆಸ್ಟ್ರಾಲ್  ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು ವೇಳೆ ಇದು ಗರಿಷ್ಠ ಮಟ್ಟವನ್ನು ದಾಟಿದರೆ ವೈದ್ಯರು ಅನಿವಾರ್ಯವಾಗಿ ಪ್ರಬಲ ಔಷಧಿ ಗಳನ್ನೂ ಕಟ್ಟುನಿಟ್ಟಿನ ಅಹಾರ ನಿಯಂತ್ರಣ ಮತ್ತು ಕಡ್ಡಾಯ ವ್ಯಾಯಾಮವನ್ನೂ ಸೂಚಿಸುತ್ತಾರೆ. ಸುಖಮಯ ಜೀವನ ನಡೆಸುತ್ತಾ ಬಂದಿರುವವರಿಗೆ ಇವು ಕಬ್ಬಿಣದ ಕಡಲೆಗಳಾಗಿ ಪರಿಣಮಿಸುತ್ತವೆ. ಈ ಕಬ್ಬಿಣದ ಕಡಲೆ ಜಗಿಯುವ ಬದಲು ನಿಸರ್ಗ ನಮಗೆ ಮೆತ್ತಗಿರುವುದನ್ನು ಜಗಿಯಲು ನೀಡಿದೆ. ಅದೇ ತಿನ್ನಲು ಕೊಂಚ ಒಗರಾಗಿರುವ, ಆದರೆ ಬಳಿಕ ನೀರು ಕುಡಿದರೆ ಸಿಹಿಯಾಗಿರುವ ನೆಲ್ಲಿಕಾಯಿ.

ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು, ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಕಡೆಮೆಗೊಳಿಸಲು ನೆಲ್ಲಿಕಾಯಿಯ ಪೋಷಕಾಂಶಗಳು ಅತ್ಯುತ್ತಮವಾಗಿವೆ. ಇದರ ಆರೋಗ್ಯಕರ ಗುಣಗಳನ್ನು ಕಂಡುಕೊಂಡ ಆಯುರ್ವೇದ ನೂರಾರು ನೂರಾರು ವರ್ಷಗಳಿಂದ ಔಷಧಿ ರೂಪದಲ್ಲಿ ಬಳಸುತ್ತಾ ಬಂದಿದೆ.ಇದರಲ್ಲಿರುವ ವಿಟಮಿನ್ ಸಿ, ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಖನಿಜಗಳು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ.

ಆದರೆ ಇದರ ನಿಜವಾದ ಶಕ್ತಿ ಇರುವುದು ಕೊಲೆಸ್ಟ್ರಾಲ್ ಸಂಗ್ರಹವಾಗಲು ನೆರವಾಗುವ ಹೆಚ್.ಎಂ.ಜಿ. ಸಿಆರ್ ಕಿಣ್ವದ ಪ್ರಬಲತೆಯನ್ನು ತಗ್ಗಿಸುವುದರಲ್ಲಿ. ಅಲ್ಲದೇ ಆಹಾರದಿಂದ ಕೆಟ್ಟ ಕೊಲೆಸ್ಟ್ರಾಲ್ ಹೀರಿಕೊಳ್ಳದೇ ಇರಲು ನೆರವಾಗುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣದ ಹೊರತಾಗಿ ನೆಲ್ಲಿಕಾಯಿ ಮಧುಮೇಹಿಗಳಿಗೂ ಉತ್ತಮ ಔಷಧೀಯ ಆಹಾರವಾಗಿದೆ. ಇದರಲ್ಲಿರುವ ಮಧುಮೇಹಿ ವಿರೋಧಿ ಗುಣಗಳು ಅಧಿಕ ರಕ್ತದೊತ್ತಡವನ್ನುನಿಯಂತ್ರಿಸಲೂ ನೆರವಾಗುತ್ತವೆ.

ನೆಲ್ಲಿಕಾಯಿಯನ್ನು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ನಿಟ್ಟಿನಲ್ಲಿ ಬಳಸುವ ಬಗೆ: ನೆಲ್ಲಿಕಾಯಿಯ ಅತ್ಯುತ್ತಮ ಬಳಕೆ ಎಂದರೆ ಈಗ ತಾನೇ ಹಿಂಡಿ ತೆಗೆದ ರಸವನ್ನು ಕುಡಿಯುವುದು. ಪ್ರತಿದಿನ ಸುಮಾರು ಅರ್ಧ ಲೋಟದಷ್ಟು ನಲ್ಲಿಕಾಯಿ ಜ್ಯೂಸ್ ಕುಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು.

ನಲ್ಲಿಕಾಯಿ ಜ್ಯೂಸ್ ತಯಾರಿಸುವ ವಿಧಾನ:-

* ಎರಡು ದೊಡ್ಡ ಗಾತ್ರದ ಅಥವಾ ನಾಲ್ಕು ಚಿಕ್ಕಗಾತ್ರದ ನೆಲ್ಲಿಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ ಬೀಜವನ್ನು ನಿವಾರಿಸಿ.

* ಬ್ಲೆಂಡರ್‌ನಲ್ಲಿ ಕೊಂಚ ನೀರಿನೊಂದಿಗೆ ತಿರುಳನ್ನು ಸೇರಿಸಿಅರೆಯಿರಿ.

* ಈ ನೀರನ್ನು ತೆಳ್ಳನೆಯ ಮಸ್ಲಿನ್ ಬಟ್ಟೆ ಅಥವಾ ಸೋಸುಕ ಬಳಸಿ ನೀರುಸಂಗ್ರಹಿಸಿ.

* ಈ ನೀರಿಗೆ ಕೊಂಚ ಕಪ್ಪು ಉಪ್ಪು ಅಥವಾ ಕಲ್ಲುಪ್ಪು ಸೇರಿಸಿ ಕುಡಿಯಬಹುದು.

*ರುಚಿ ಇಷ್ಟವಾಗದಿದ್ದರೆ ಕೊಂಚ ಜೇನನ್ನು ಸೇರಿಸಿ ಕುಡಿಯಬಹುದು.

” ಮಧುಮೇಹಿಗಳಿಗೆ ಜೇನು ಸಲ್ಲದು. ಆದ್ದರಿಂದ ಮಧುಮೇಹಿಗಳು.

* ಉಪ್ಪು, ಜೇನು ಸೇರಿಸದ ರಸ ಕುಡಿಯುವುದು ಉತ್ತಮ”

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ʼಚಿನ್ನʼ ಪ್ರಿಯರಿಗೆ ಬಿಗ್‌ ಶಾಕ್: 39 ಸಾವಿರ‌ ರೂ. ಗಡಿ ದಾಟಿದ ಚಿನ್ನದ ಬೆಲೆ

    ಚಿನ್ನ ಜನಸಾಮಾನ್ಯರಿಗೆ ಕೈಗೆಟುಕುತ್ತಿಲ್ಲ. ನಿರಂತರವಾಗಿ ಬಂಗಾರದ ಬೆಲೆ ಏರಿಕೆಯಾಗ್ತಿದೆ. ಸತತ 6ನೇ ದಿನವೂ ಬಂಗಾರದ ಬೆಲೆ ಹೆಚ್ಚಾಗಿದೆ. ಚಿನ್ನ ಈವರೆಗೆ ಶೇಕಡಾ 25 ರಷ್ಟು ಏರಿಕೆ ಕಂಡಿದ್ದು, ಸೋಮವಾರ 10 ಗ್ರಾಂ ಚಿನ್ನದ ಬೆಲೆ 39,196 ರೂಪಾಯಿಯಾಗಿದೆ. ಇನ್ನು ಬೆಳ್ಳಿ ಬೆಲೆಯಲ್ಲೂ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ ಶೇಕಡಾ 1ರಷ್ಟು ಹೆಚ್ಚಳ ಕಂಡಿದೆ. ಸೋಮವಾರ ಬೆಳ್ಳಿ ಬೆಲೆ ಕೆ.ಜಿ.ಗೆ 45,058 ರೂಪಾಯಿಗೆ ಮಾರಾಟವಾಗ್ತಿದೆ. ಶುಕ್ರವಾರ ಕೆ.ಜಿ. ಬೆಳ್ಳಿ 45,148 ರೂಪಾಯಿಯಿತ್ತು. ಇದು 2016ರ ನಂತ್ರ ಗರಿಷ್ಠ…

  • Uncategorized

    ಖಾಲಿ ಹೊಟ್ಟೆಯಲ್ಲಿ ಈ ಹಣ್ಣು ತಿಂದರೆ ಏನಾಗುತ್ತೆ ಗೊತ್ತಾ!

    ಈ ಹಣ್ಣಿನಲ್ಲಿರುವ ಅಮಿನೋ ಆ್ಯಸಿಡ್ ಎಂಬ ರಾಸಾಯನಿಕ ಅಂಶದಿಂದಾಗಿ ಮಕ್ಕಳಲ್ಲಿ ಸಿಡುಬು ಮತ್ತು ದಡಾರಾ ಕಾಯಿಲೆಯ ಲಕ್ಷಣಗಳು ಗೋಚರಿಸುವಂತೆ ಮಾಡುತ್ತಿವೆ. ಇದರಿಂದ ರಕ್ತದಲ್ಲಿನ ಗ್ಲೂಕೋಸ್ ಅಂಶ ಗಣನೀಯವಾಗಿ ಇಳಿಯುವಂತೆ ಮಾಡಿ ಮಕ್ಕಳಲ್ಲಿ ಹೈಪೊಗ್ಲಿಸಿಮಿಯಾ ಎಂಬ ಸಮಸ್ಯೆಯನ್ನು ತಂದೊಡ್ಡುತ್ತದೆ

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಸುದ್ದಿ

    ರಜನಿಕಾಂತ್ ಈ ಮಹಿಳೆಯನ್ನು ಈಗಲೂ ಹುಡುಕುತ್ತಿದ್ದಾರಂತೆ. ಯಾಕೆ ಗೊತ್ತಾ!

    ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್‌ಪೋರ್ಟ್ ಸರ್ವಿಸ್ ಬಸ್  ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು. ನಿರ್ಮಲಾ…

  • ಉಪಯುಕ್ತ ಮಾಹಿತಿ

    ಈ ಚಿಕ್ಕ ಕೆಲಸವನ್ನ ಮಾಡಿದರೆ ಸಾಕು ಈ ಜನ್ಮದಲ್ಲಿ ಇಲಿಗಳು ನಿಮ್ಮ ಮನೆಗೆ ಸುಳಿಯುವುದಿಲ್ಲ, ಇಲಿಗಳ ಕಾಟಕ್ಕೆ ಮುಕ್ತಿ ಇಲ್ಲಿದೆ.

    ಯಾರ ಮನೆಯಲ್ಲಿ ಇಲಿಗಳು ಇಲ್ಲ ಹೇಳಿ, ಇನ್ನು ಇಲಿಗಳ ಕಾಟ ಕೇವಲ ಮನೆಯಲ್ಲಿ ಮಾತ್ರವಲ್ಲೇ ಹೊಲ ಗದ್ದೆಗಳಲ್ಲಿ ಕೂಡ ಇರುತ್ತದೆ, ಹೌದು ಹೊಲ ಗದ್ದೆಗಳಲ್ಲಿ ಇಲಿಗಳ ಕಾಟ ಆರಂಭವಾಯಿತು ಅಂದರೆ ರೈತರಿಗೆ ದಿಕ್ಕೇ ತೋಚದಂತೆ ಆಗುತ್ತದೆ. ಇಲಿಗಳು ಇಲ್ಲಿ ಇರುತ್ತದೆಯೋ ಅಲ್ಲಿ ಸರ್ವಶನಾಶ ಆಗುತ್ತದೆ ಎಂದು ಹೇಳಿದರೆ ತಪ್ಪಾಗಲ್ಲ, ಯಾಕೆ ಅಂದರೆ ಇಲಿಗಳು ಕಚ್ಚದ ವಸ್ತುಗಳೇ ಇಲ್ಲ. ಎಷ್ಟೇ ಗಟ್ಟಿ ವಸ್ತುವಾದರೂ ಅದನ್ನ ತೂತು ಮಾಡುವ ಶಕ್ತಿಯನ್ನ ಹೊಂದಿರುತ್ತದೆ ಇಲಿಗಳು, ಮನೆಯ ವಸ್ತುಗಳನ್ನ ಹಾಲು ಮಾಡುತ್ತದೆ ಮತ್ತು…