ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ. ಇಲ್ಲಿ ಕೊಲೆಸ್ಟ್ರಾಲ್ ಇದೆ ಎಂದರೆ ಮೂರೂ ಅಂಶಗಳ ಒಟ್ಟು ಪ್ರಮಾಣದಲ್ಲಿ ಎಲ್ಡಿಎಲ್ ಪ್ರಮಾಣ ಶೇಖಡಾವಾರು ಹೆಚ್ಚಿದ್ದು ವೈದ್ಯರು ಸೂಕ್ತ ಔಷಧಿ ಮತ್ತು ಆಹಾರದಲ್ಲಿ ಕಟ್ಟುಟ್ಟು ಸಾಧಿಸಲು ಸಲಹೆ ಮಾಡುತ್ತಾರೆ.

ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಿದಷ್ಟು ಹೃದಯ ಸಂಬಂಧಿ ರೋಗಗಳಿಗೆ ಮುಕ್ತ ಆಹ್ವಾನ ನೀಡಿದಂತೆ. ಒಂದು ವೇಳೆ ಇದು ಗರಿಷ್ಠ ಮಟ್ಟವನ್ನು ದಾಟಿದರೆ ವೈದ್ಯರು ಅನಿವಾರ್ಯವಾಗಿ ಪ್ರಬಲ ಔಷಧಿ ಗಳನ್ನೂ ಕಟ್ಟುನಿಟ್ಟಿನ ಅಹಾರ ನಿಯಂತ್ರಣ ಮತ್ತು ಕಡ್ಡಾಯ ವ್ಯಾಯಾಮವನ್ನೂ ಸೂಚಿಸುತ್ತಾರೆ. ಸುಖಮಯ ಜೀವನ ನಡೆಸುತ್ತಾ ಬಂದಿರುವವರಿಗೆ ಇವು ಕಬ್ಬಿಣದ ಕಡಲೆಗಳಾಗಿ ಪರಿಣಮಿಸುತ್ತವೆ. ಈ ಕಬ್ಬಿಣದ ಕಡಲೆ ಜಗಿಯುವ ಬದಲು ನಿಸರ್ಗ ನಮಗೆ ಮೆತ್ತಗಿರುವುದನ್ನು ಜಗಿಯಲು ನೀಡಿದೆ. ಅದೇ ತಿನ್ನಲು ಕೊಂಚ ಒಗರಾಗಿರುವ, ಆದರೆ ಬಳಿಕ ನೀರು ಕುಡಿದರೆ ಸಿಹಿಯಾಗಿರುವ ನೆಲ್ಲಿಕಾಯಿ.

ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುವುದು, ಅದರಲ್ಲೂ ಕೆಟ್ಟ ಕೊಲೆಸ್ಟ್ರಾಲ್ ಕಡೆಮೆಗೊಳಿಸಲು ನೆಲ್ಲಿಕಾಯಿಯ ಪೋಷಕಾಂಶಗಳು ಅತ್ಯುತ್ತಮವಾಗಿವೆ. ಇದರ ಆರೋಗ್ಯಕರ ಗುಣಗಳನ್ನು ಕಂಡುಕೊಂಡ ಆಯುರ್ವೇದ ನೂರಾರು ನೂರಾರು ವರ್ಷಗಳಿಂದ ಔಷಧಿ ರೂಪದಲ್ಲಿ ಬಳಸುತ್ತಾ ಬಂದಿದೆ.ಇದರಲ್ಲಿರುವ ವಿಟಮಿನ್ ಸಿ, ವಿವಿಧ ಆಂಟಿ ಆಕ್ಸಿಡೆಂಟುಗಳು ಮತ್ತು ಖನಿಜಗಳು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ.
ಆದರೆ ಇದರ ನಿಜವಾದ ಶಕ್ತಿ ಇರುವುದು ಕೊಲೆಸ್ಟ್ರಾಲ್ ಸಂಗ್ರಹವಾಗಲು ನೆರವಾಗುವ ಹೆಚ್.ಎಂ.ಜಿ. ಸಿಆರ್ ಕಿಣ್ವದ ಪ್ರಬಲತೆಯನ್ನು ತಗ್ಗಿಸುವುದರಲ್ಲಿ. ಅಲ್ಲದೇ ಆಹಾರದಿಂದ ಕೆಟ್ಟ ಕೊಲೆಸ್ಟ್ರಾಲ್ ಹೀರಿಕೊಳ್ಳದೇ ಇರಲು ನೆರವಾಗುತ್ತದೆ. ಕೊಲೆಸ್ಟ್ರಾಲ್ ನಿಯಂತ್ರಣದ ಹೊರತಾಗಿ ನೆಲ್ಲಿಕಾಯಿ ಮಧುಮೇಹಿಗಳಿಗೂ ಉತ್ತಮ ಔಷಧೀಯ ಆಹಾರವಾಗಿದೆ. ಇದರಲ್ಲಿರುವ ಮಧುಮೇಹಿ ವಿರೋಧಿ ಗುಣಗಳು ಅಧಿಕ ರಕ್ತದೊತ್ತಡವನ್ನುನಿಯಂತ್ರಿಸಲೂ ನೆರವಾಗುತ್ತವೆ.

ನೆಲ್ಲಿಕಾಯಿಯನ್ನು ಕೊಲೆಸ್ಟ್ರಾಲ್ ಕಡಿಮೆಗೊಳಿಸುವ ನಿಟ್ಟಿನಲ್ಲಿ ಬಳಸುವ ಬಗೆ: ನೆಲ್ಲಿಕಾಯಿಯ ಅತ್ಯುತ್ತಮ ಬಳಕೆ ಎಂದರೆ ಈಗ ತಾನೇ ಹಿಂಡಿ ತೆಗೆದ ರಸವನ್ನು ಕುಡಿಯುವುದು. ಪ್ರತಿದಿನ ಸುಮಾರು ಅರ್ಧ ಲೋಟದಷ್ಟು ನಲ್ಲಿಕಾಯಿ ಜ್ಯೂಸ್ ಕುಡಿದರೆ ಉತ್ತಮ ಫಲಿತಾಂಶವನ್ನು ಪಡೆಯಬಹುದು.

* ಎರಡು ದೊಡ್ಡ ಗಾತ್ರದ ಅಥವಾ ನಾಲ್ಕು ಚಿಕ್ಕಗಾತ್ರದ ನೆಲ್ಲಿಕಾಯಿಗಳನ್ನು ಚಿಕ್ಕದಾಗಿ ಕತ್ತರಿಸಿ ಬೀಜವನ್ನು ನಿವಾರಿಸಿ.
* ಬ್ಲೆಂಡರ್ನಲ್ಲಿ ಕೊಂಚ ನೀರಿನೊಂದಿಗೆ ತಿರುಳನ್ನು ಸೇರಿಸಿಅರೆಯಿರಿ.
* ಈ ನೀರನ್ನು ತೆಳ್ಳನೆಯ ಮಸ್ಲಿನ್ ಬಟ್ಟೆ ಅಥವಾ ಸೋಸುಕ ಬಳಸಿ ನೀರುಸಂಗ್ರಹಿಸಿ.
* ಈ ನೀರಿಗೆ ಕೊಂಚ ಕಪ್ಪು ಉಪ್ಪು ಅಥವಾ ಕಲ್ಲುಪ್ಪು ಸೇರಿಸಿ ಕುಡಿಯಬಹುದು.
*ರುಚಿ ಇಷ್ಟವಾಗದಿದ್ದರೆ ಕೊಂಚ ಜೇನನ್ನು ಸೇರಿಸಿ ಕುಡಿಯಬಹುದು.
” ಮಧುಮೇಹಿಗಳಿಗೆ ಜೇನು ಸಲ್ಲದು. ಆದ್ದರಿಂದ ಮಧುಮೇಹಿಗಳು.
* ಉಪ್ಪು, ಜೇನು ಸೇರಿಸದ ರಸ ಕುಡಿಯುವುದು ಉತ್ತಮ”
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ ಅರ್ಚಕರ ಮಂತ್ರಘೋಷ ,ಮಂಗಳವಾದ್ಯ ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…
ಗಗನಮುಖಿಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಿಂದಾಗಿ ಬಹುತೇಕ ವಾಹನ ಖರೀದಿದಾರರು ಇದೀಗ ಎಲೆಕ್ಟ್ರಿಕ್ ವಾಹನಗಳತ್ತ ಮುಖಮಾಡುತ್ತಿದ್ದು, ಹೀಗಿರುವಾಗ ಮರುಬಳಕೆ ಮಾಡಬಹುದಾದ ಪ್ಲಾಸ್ಟಿಕ್ನಿಂದ ಪೆಟ್ರೋಲ್ ಸಿದ್ದಪಡಿಸಿರುವ ಎಂಜಿನಿಯರ್ ಒಬ್ಬರು ಅತಿ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡುತ್ತಿದ್ದಾರೆ. ಹೌದು, ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ದಿನದಿಂದ ದಿನಕ್ಕೆ ದುಬಾರಿಯಾಗುತ್ತಿರುವ ದಿನಗಳಲ್ಲಿ ಅಗ್ಗದ ಬೆಲೆಯಲ್ಲಿ ಪೆಟ್ರೋಲ್ ಉತ್ಪಾದನೆ ಮಾಡಬಲ್ಲ ಹೊಸ ತಂತ್ರಜ್ಞಾನವನ್ನು ಸಿದ್ದಪಡಿಸಿದ್ದು, ಪರಿಸರಕ್ಕೆ ಮಾರಕವಾಗಿ ಪರಿಣಮಿಸಿರುವ ಪ್ಲಾಸ್ಟಿಕ್ ಅನ್ನೇ ಬಳಕೆ ಮಾಡಿಕೊಂಡು ಈ ಹೊಸ ಆವಿಷ್ಕಾರವನ್ನು ಮಾಡಲಾಗಿದೆ….
ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಟಿವಿ ಅಥವಾ ಮೊಬೈಲ್ ನೋಡುತ್ತಲೋ ಊಟ ಮಾಡುವುದು ಸಾಮಾನ್ಯ. ಆದರೆ ಅಧ್ಯಯನಗಳ ಪ್ರಕಾರ ಹೀಗೆ ಮಾಡೋದ್ರಿಂದ ಬೊಜ್ಜು/ಸ್ಥೂಲಕಾಯ ಸಮಸ್ಯ ಬರುವುದು ಜಾಸ್ತಿ ಎಂದು ವರದಿಯಾಗಿದೆ
ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಉಡುಪಿ ಮೊದಲ ಸ್ಥಾನ ಪಡೆದುಕೊಂಡಿದ್ದರೆ ಚಿತ್ರದುರ್ಗ ಕೊನೆಯ ಸ್ಥಾನ ಪಡೆದು ಕಳಪೆ ಫಲಿತಾಂಶ ಪಡೆದ ಜಿಲ್ಲೆಯಾಗಿದೆ. ಈ ಸಲದ ದ್ವಿತೀಯ ಪರೀಕ್ಷೆಯಲ್ಲಿ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಅದರಲ್ಲಿಯೂ ಪಂಕ್ಚರ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಕುಸುಮ ಎಂಬುವವರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಬಳ್ಳಾರಿಯ ಕೊಟ್ಟೂರಿನಲ್ಲಿ ಸೈಕಲ್ ಶಾಪ್ನಲ್ಲಿ ನಡೆಸುತ್ತಿದ್ದ ದೇವೇಂದ್ರಪ್ಪ ಮತ್ತು ಜಯಮ್ಮ ಎಂಬುವವರ ಪುತ್ರಿ ಕುಸುಮಾ ಸೈಕಲ್ ಶಾಪ್ನಲ್ಲಿ ಪಂಕ್ಚರ್ ಹಾಕುವ ಕೆಲಸ…