ಆರೋಗ್ಯ, ಉಪಯುಕ್ತ ಮಾಹಿತಿ

ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

536

ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

ಹಾಗೆಂದು ಕೂದಲು ಶಾಶ್ವತವಾಗಿ ಉದುರಿ ಹೋಗುತ್ತದೆ ಎಂದು ಭಾವಿಸಬೇಡಿ. ಇದು ಈ ಚಿಕಿತ್ಸೆಯನ್ನು ಪಡೆಯುವವರೆಗೆ ಮಾತ್ರ, ಚಿಕಿತ್ಸೆ ನಿಲ್ಲಿಸಿದ ಕೂಡಲೆ ಕೂದಲು ಬೆಳೆಯುವಿಕೆಯು ಮೊದಲಿನಂತಾಗುತ್ತದೆ. ಆದರೆ ಕೂದಲು ತೆಳ್ಳಗೆ ಇರುತ್ತದೆ ಅಷ್ಟೇ.

  1. ಕೂದಲು ಉದುರುವಿಕೆಯ ಕಾರಣಗಳು ಯಾವುವು

ಕೂದಲು ಉದುರುವಿಕೆಯು ಈ ಕೆಳಕಂಡ ಕಾರಣಗಳ ಸಲುವಾಗಿ ಕಾಣಿಸಿಕೊಳ್ಳಬಹುದು:

  • ಕಿಮೊಥೆರಪಿ: ಈ ಚಿಕಿತ್ಸೆಯಲ್ಲಿ ಔಶಧಿಗಳು ಬಹುತೇಕ ಬಾರಿ ಆರೋಗ್ಯಕರ ಹಾಗು ಕ್ಯಾನ್ಸರ್‌ಕಾರಕ ಕೋಶಗಳೆರಡರ ಮೇಲೆ ದಾಳಿ ಮಾಡುತ್ತವೆ. ಆ ಪ್ರಕ್ರಿಯೆಯಲ್ಲಿ ಇವು ಕೂದಲಿನ ಕೋಶಗಳ ಮೇಲೂ ಸಹ ದಾಳಿ ಮಾಡುತ್ತವೆ. ಹೀಗಾಗಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕೂದಲು ಉದುರುತ್ತದೆ.

  • ರೇಡಿಯೇಶನ್ ಥೆರಪಿ: ರೇಡಿಯೇಶನ್ ಚಿಕಿತ್ಸೆಯನ್ನು ಯಾವ ಭಾಗದ ಮೇಲೆ ಕೊಡಲಾಗುತ್ತದೆಯೋ, ಅದರ ಆಧಾರದ ಮೇಲೆ ಕೂದಲು ಉದುರುವಿಕೆಯು ಕಾಣಿಸಿಕೊಳ್ಳುತ್ತದೆ. ಉದಾ> ಒಂದು ವೇಳೆ ರೇಡಿಯೇಶನ್ ಅನ್ನು ಮೆದುಳಿನಲ್ಲಿರುವ ಮೆಟಾಸ್ಟಾಸಿಸ್‌ಗೆ ನೀಡಿದಲ್ಲಿ, ತಲೆಯ ಭಾಗದಲ್ಲಿ ಸಂಪೂರ್ಣ ಕೂದಲು ಉದುರಬಹುದು.

  • ಹಾರ್ಮೋನ್ ಥೆರಪಿ: ಇದು ಕೂದಲನ್ನು ತೆಳ್ಳಗೆ ಮಾಡುತ್ತದೆ ಆದರೆ ಸಂಪೂರ್ಣ ಕೂದಲು ಉದುರುವಿಕೆಗೆ ಕಾರಣವಾಗುವುದಿಲ್ಲ.
  1. ಯಾವಾಗ ಕೂದಲು ಬೆಳೆಯುತ್ತದೆ?

ಈ ಮೊದಲೇ ಹೇಳಿದಂತೆ, ಕೂದಲು ಉದುರುವಿಕೆಯು ಕ್ಯಾನ್ಸರ್‌ ಚಿಕಿತ್ಸೆಯ ಒಂದು ತಾತ್ಕಾಲಿಕ ಭಾಗವಾಗಿರುತ್ತದೆ.

  • ಒಂದು ವೇಳೆ ನೀವು ಕಿಮೊಥೆರಪಿಗೆ ಒಳಗಾದಲ್ಲಿ, ನಿಮ್ಮ ಕೂದಲು ಒಂದು ಇಂಚು ಬೆಳೆಯಲು 3-6 ತಿಂಗಳ ಕಾಲ ತೆಗೆದುಕೊಳ್ಳುತ್ತದೆ.

  • ಒಂದು ವೇಳೆ ನೀವು ರೇಡಿಯೇಶನ್ ಥೆರಪಿಯಿಂದ ಕೂದಲನ್ನು ಕಳೆದುಕೊಂಡಲ್ಲಿ, 4-6 ತಿಂಗಳ ನಂತರ ನಿಮ್ಮ ಕೂದಲು ಒಂದು ಇಂಚು ಬೆಳೆಯುತ್ತದೆ.
  1. ಕೂದಲು ಉದುರುವಿಕೆಯ ಸಮಸ್ಯೆಯನ್ನು ಹೇಗೆ ತಡೆದುಕೊಳ್ಳುವುದು?

ಕೂದಲು ಉದುರುವಿಕೆಗೆ ಮೊದಲೇ ಅದನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಚಿಕಿತ್ಸೆ ನಡೆಯುವಾಗ ಮತ್ತು ನಡೆದ ಮೇಲೆ ಈ ಸಲಹೆಗಳನ್ನು ಅನುಸರಿಸಿ:-

a.ಚಿಕಿತ್ಸೆಗೆ ಮೊದಲು :-

ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ: ಚಿಕಿತ್ಸೆ ಪಡೆಯುವ ಮೊದಲೇ ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ. ಆಗ ಕೂದಲು ಉದುರುವುದು ಮತ್ತು ಬೆಳೆಯುವುದು ನಿಮ್ಮ ಅರಿವಿಗೆ ಬರುವುದು ಕಡಿಮೆಯಾಗುತ್ತದೆ. ಪುರುಷರು ತಮ್ಮ ತಲೆಯನ್ನು ಬೋಳಿಸಿಕೊಂಡು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮಹಿಳೆಯರಿಗೆ ಇದು ಇಷ್ಟವಾಗದ ಸಲಹೆಯಾಗಿರುತ್ತದೆ.

ಕೋಲ್ಡ್ ಕ್ಯಾಪ್ ಥೆರಪಿ: ನಿಮಗೆ ಚಿಕಿತ್ಸೆ ನೀಡುವಾಗ ಕ್ಯಾಪ್ ಅಥವಾ ಕೋಲ್ಡ್ ಪ್ಯಾಕ್‌ಗಳನ್ನು ಧರಿಸಲು ಸಲಹೆ ಮಾಡಬಹುದು. ಕೂದಲು ಉದುರುವುದನ್ನು ತಪ್ಪಿಸಲು ಈ ತಂತ್ರವನ್ನು ಬಳಸಲಾಗುತ್ತದೆ. ಕೋಲ್ಡ್ ಪ್ಯಾಕ್ ತಲೆಯಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುವ ಮೂಲಕ ಕಿಮೊಥೆರಪಿಯ ಔಷಧಿಗಳು ಕೂದಲಿನ ಬುಡಕ್ಕೆ ತಲುಪುವುದನ್ನು ತಡೆಯುತ್ತದೆ.

b.ಚಿಕಿತ್ಸೆ ಅವಧಿಯಲ್ಲಿ:-

  • ನಿಮ್ಮ ಕೂದಲನ್ನು ಪ್ರತಿದಿನ ತೊಳೆಯಲು ಹೋಗಬೇಡಿ.
  • ಯಾವಾಗಲೂ ಬೇಬಿ ಶಾಂಪೂವಿನಂತಹ ಮೃದುವಾದ ಶಾಂಪೂವನ್ನು ಬಳಸಿ ಕೂದಲನ್ನು ಸ್ವಚ್ಛಗೊಳಿಸಿಕೊಳ್ಳಿ.

  • ಮೃದುವಾದ ಹೇರ್‌ಬ್ರಷ್ ಅನ್ನು ಬಳಸಿ ಹಾಗೂ ಬಿಗಿಯಾದ ಕ್ಲಿಪ್‌ಗಳನ್ನು ಬಳಸಿ ನಿಮ್ಮ ಕೂದಲಿನ ಸ್ಟೈಲ್ ಅನ್ನು ಮಾಡಬೇಡಿ.
  • ಬಿಸಿಲಿನಲ್ಲಿ ಹೋಗವಾಗ ನಿಮ್ಮ ತ್ವಚೆಗೆ ಸನ್‌ಸ್ಕ್ರೀನ್ ಲೋಶಹ್ ಮತ್ತು ತಲೆಗೆ ಸ್ಕಾರ್ಫ್ ಸುತ್ತಿಕೊಂಡು ಹೋಗುವುದನ್ನು ಮರೆಯಬೇಡಿ.
  • ಒಂದು ವೇಳೆ ನಿಮ್ಮ ಕೂದಲಿನಲ್ಲಿ ಹಕ್ಕಳೆಗಳು ಅಥವಾ ತುರಿಕೆಗಳು ಇದ್ದಲ್ಲಿ, ಅದು ಒಣ ತ್ವಚೆಯನ್ನು ಪ್ರತಿನಿಧಿಸುತ್ತದೆ. ಇದಕ್ಕೆ ಎಣ್ಣೆ ಅಥವಾ ಮೊಯಿಶ್ಚರೈಸರ್ ಅನ್ನು ಬಳಸಿ. ಆ್ಯಂಟಿ ಡೆಂಡ್ರಫ್ ಶಾಂಪೂವನ್ನು ಬಳಸಬೇಡಿ.

  • ಕರ್ಲಿಂಗ್, ಸ್ಟ್ರೈಟೆನಿಂಗ್ ಅಥವಾ ಕಲರಿಂಗ್ ಅನ್ನು ಮಾಡಿಸಬೇಡಿ.

c.ಚಿಕಿತ್ಸೆಯ ನಂತರ :-

ನಿಮ್ಮ ಸ್ವಾಭಾವಿಕ ಕೂದಲನ್ನು ಮೃದುವಾಗಿ ತೊಳೆಯಿರಿ, ಬಾಚಿರಿ ಅಥವಾ ಕಲರ್ ಮಾಡಿ. ಏಕೆಂದರೆ ಈ ಕೂದಲುಗಳು ತುಂಬಾ ಸೂಕ್ಷ್ಮವಾಗಿ ವರ್ತಿಸುತ್ತವೆ:

  • ನಿಮ್ಮ ಕೂದಲನ್ನು ವಾರಕ್ಕೆ ಎರಡು ದಿನ ಮಾತ್ರ ತೊಳೆಯಿರಿ.
  • ತ್ವಚೆಯಲ್ಲಿ ಹಕ್ಕಳೆಗಳು ಹಾಗೂ ಒಣ ತ್ವಚೆಯನ್ನು ನಿವಾರಿಸಿಕೊಳ್ಳಲು ನೀವು ಕೂದಲಿನ ಮಸಾಜ್ ಅನ್ನು ಮಾಡಿಸಿಕೊಳ್ಳಬಹುದು.

ಆತುರಪಡಬೇಡಿ, ನೀವು ಕೂದಲು ಬೆಳೆಯುವುದನ್ನು ನೋಡಲು ಕಾತರದಿಂದ ಇರಬಹುದು. ಆದರೆ ಅದಕ್ಕೂ ಸ್ವಲ್ಪ ಸಮಯ ಬೇಕಾಗುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಡಿಕೆಶಿ ಪುತ್ರಿಗೂ ಸಿದ್ದಾರ್ಥ ಅವರ ಪುತ್ರನಿಗೂ ಮದುವೆ ನಿಶ್ಚಯ, ಮದುವೆ ಯಾವಾಗ!

    ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…

  • ದೇವರು-ಧರ್ಮ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ನೋಡಿರಿ

    ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…

  • ಸುದ್ದಿ

    ವಾಹನ ಚಾಲಕರಿಗೆ ಹೊಸ ರೂಲ್ಸ್…..ಏನೆಂದು ತಿಳಿಯಿರಿ?

    ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…

  • ವಿಸ್ಮಯ ಜಗತ್ತು

    ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

    ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

  • inspirational

    ದೀರ್ಘಾಯುಷ್ಯಕ್ಕಾಗಿ ಉತ್ತಮವಾಗಿ ಉಸಿರಾಡಿ

    ಮಯೂನ್ ಎನ್ಬದುಕಿರುವ ಎಲ್ಲ ಜೀವಿಗಳೂ ಉಸಿರಾಡುತ್ತವೆ ಎಂಬ ವಿಷಯ ಯಾರಿಗೂ ಹೊಸತಲ್ಲ. ಮಾನವನು ಪ್ರತಿನಿಮಿಷಕ್ಕೆ ಹದಿನಾರು ಬಾರಿ ಉಸಿರಾಡುತ್ತಾನೆ. ಉಸಿರಾಟದ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳವುದೇ ಇಲ್ಲ. ಏಕೆಂದರೆ ಉಸಿರಾಟ ನಮ್ಮಇಚ್ಛೆಗೆ ಕಾಯದೆ ಅನೈಚ್ಛಿಕವಾಗಿ ನಡೆಯುತ್ತಿರುತ್ತದೆ. ಜಗತ್ತಿನಲ್ಲಿ ಬಹಳಷ್ಟು ಜನರು ಉಸಿರಾಡುತ್ತಿರುವ ಕ್ರಮ ಸರಿಯಿಲ್ಲ. ಹೇಗೋ ಉಸಿರಾಡಿಕೊಂಡು ಬದುಕಿದ್ದಾರೆ ಎಂದು ಆಧುನಿಕ ವೈದ್ಯರು ಆರೋಪಣೆ ಮಾಡುತ್ತಿದ್ದಾರೆ.ನಿವು ಸರಿಯಾಗಿ ಉಸಿರಾಡುತಿದ್ತ್ದೀರ? ಇದನ್ನು ತಿಳಿದುಕೊಳ್ಳಲು ಒಂದು ಸರಳ ವಿಧಾನ ಇದೆ. ನೀವು ಈಗ ಎಲ್ಲೇ ಇರಿ. ಏನೇ ಮಾಡುತ್ತಿರಿ. ಒಮ್ಮೆ ಆಳವಾಗಿ…

  • ಸುದ್ದಿ

    ಬಜೆಟ್ ನಲ್ಲಿ ರೈತರಿಗೆ ಬಂಪರ್ ಆಫರ್ ಘೋಷಿಸಿದ ಕುಮಾರಣ್ಣ..ಪ್ರತಿ ಹೆಕ್ಟೇರಿಗೆ ಸಿಗಲಿದೆ 10000ರೂ ಹಣ..

    ಬಿಜೆಪಿಯ ಕಮಲದ ಆಪರೇಶನ್ ಭೀತಿಯ ನಡುವೆಯೇ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಮಾಡಿದ್ದಾರೆ. ಈತ್ತಿಚೆಗಷ್ಟೇ ತಮ್ಮ ಕೊನೆಯ ಬಜೆಟ್ ಮಂಡಿಸಿದ್ದ ಕೇಂದ್ರಸರ್ಕಾರ ಸಣ್ಣ ರೈತರಿಗೆ ಮೂರೂ ಕಂತಿನಂತೆ ವರ್ಷಕ್ಕೆ ಆರು ಸಾವಿರ ಕೊಡುವುದಾಗಿ ಬಜೆಟ್ ನಲ್ಲಿ ಹೇಳಿತ್ತು. ಈಗ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಇಂದು ಮಂಡಿಸಿರುವ ಬಜೆಟ್ ನಲ್ಲಿ ಸಿರಿ ಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ‘ಸಿರಿ ಯೋಜನೆ’ಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ವಯ ಸಿರಿಧಾನ್ಯ ಬೆಳೆಯುವ ರೈತರಿಗೆ, ಪ್ರತಿ ಹೆಕ್ಟೇರಿಗೆ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ…