ಆರೋಗ್ಯ, ಉಪಯುಕ್ತ ಮಾಹಿತಿ

ಕ್ಯಾನ್ಸರ್ ಚಿಕಿತ್ಸೆಯಿಂದ ನಿಮ್ಮ ಕೂದಲು ಉದುರುತ್ತಿದಿಯೇ -ಏನು ಮಾಡಬೇಕು ಗೊತ್ತಾ..?ತಿಳಿಯಲು ಈ ಲೇಖನ ಓದಿ ..

520

ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.

ಹಾಗೆಂದು ಕೂದಲು ಶಾಶ್ವತವಾಗಿ ಉದುರಿ ಹೋಗುತ್ತದೆ ಎಂದು ಭಾವಿಸಬೇಡಿ. ಇದು ಈ ಚಿಕಿತ್ಸೆಯನ್ನು ಪಡೆಯುವವರೆಗೆ ಮಾತ್ರ, ಚಿಕಿತ್ಸೆ ನಿಲ್ಲಿಸಿದ ಕೂಡಲೆ ಕೂದಲು ಬೆಳೆಯುವಿಕೆಯು ಮೊದಲಿನಂತಾಗುತ್ತದೆ. ಆದರೆ ಕೂದಲು ತೆಳ್ಳಗೆ ಇರುತ್ತದೆ ಅಷ್ಟೇ.

  1. ಕೂದಲು ಉದುರುವಿಕೆಯ ಕಾರಣಗಳು ಯಾವುವು

ಕೂದಲು ಉದುರುವಿಕೆಯು ಈ ಕೆಳಕಂಡ ಕಾರಣಗಳ ಸಲುವಾಗಿ ಕಾಣಿಸಿಕೊಳ್ಳಬಹುದು:

  • ಕಿಮೊಥೆರಪಿ: ಈ ಚಿಕಿತ್ಸೆಯಲ್ಲಿ ಔಶಧಿಗಳು ಬಹುತೇಕ ಬಾರಿ ಆರೋಗ್ಯಕರ ಹಾಗು ಕ್ಯಾನ್ಸರ್‌ಕಾರಕ ಕೋಶಗಳೆರಡರ ಮೇಲೆ ದಾಳಿ ಮಾಡುತ್ತವೆ. ಆ ಪ್ರಕ್ರಿಯೆಯಲ್ಲಿ ಇವು ಕೂದಲಿನ ಕೋಶಗಳ ಮೇಲೂ ಸಹ ದಾಳಿ ಮಾಡುತ್ತವೆ. ಹೀಗಾಗಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕೂದಲು ಉದುರುತ್ತದೆ.

  • ರೇಡಿಯೇಶನ್ ಥೆರಪಿ: ರೇಡಿಯೇಶನ್ ಚಿಕಿತ್ಸೆಯನ್ನು ಯಾವ ಭಾಗದ ಮೇಲೆ ಕೊಡಲಾಗುತ್ತದೆಯೋ, ಅದರ ಆಧಾರದ ಮೇಲೆ ಕೂದಲು ಉದುರುವಿಕೆಯು ಕಾಣಿಸಿಕೊಳ್ಳುತ್ತದೆ. ಉದಾ> ಒಂದು ವೇಳೆ ರೇಡಿಯೇಶನ್ ಅನ್ನು ಮೆದುಳಿನಲ್ಲಿರುವ ಮೆಟಾಸ್ಟಾಸಿಸ್‌ಗೆ ನೀಡಿದಲ್ಲಿ, ತಲೆಯ ಭಾಗದಲ್ಲಿ ಸಂಪೂರ್ಣ ಕೂದಲು ಉದುರಬಹುದು.

  • ಹಾರ್ಮೋನ್ ಥೆರಪಿ: ಇದು ಕೂದಲನ್ನು ತೆಳ್ಳಗೆ ಮಾಡುತ್ತದೆ ಆದರೆ ಸಂಪೂರ್ಣ ಕೂದಲು ಉದುರುವಿಕೆಗೆ ಕಾರಣವಾಗುವುದಿಲ್ಲ.
  1. ಯಾವಾಗ ಕೂದಲು ಬೆಳೆಯುತ್ತದೆ?

ಈ ಮೊದಲೇ ಹೇಳಿದಂತೆ, ಕೂದಲು ಉದುರುವಿಕೆಯು ಕ್ಯಾನ್ಸರ್‌ ಚಿಕಿತ್ಸೆಯ ಒಂದು ತಾತ್ಕಾಲಿಕ ಭಾಗವಾಗಿರುತ್ತದೆ.

  • ಒಂದು ವೇಳೆ ನೀವು ಕಿಮೊಥೆರಪಿಗೆ ಒಳಗಾದಲ್ಲಿ, ನಿಮ್ಮ ಕೂದಲು ಒಂದು ಇಂಚು ಬೆಳೆಯಲು 3-6 ತಿಂಗಳ ಕಾಲ ತೆಗೆದುಕೊಳ್ಳುತ್ತದೆ.

  • ಒಂದು ವೇಳೆ ನೀವು ರೇಡಿಯೇಶನ್ ಥೆರಪಿಯಿಂದ ಕೂದಲನ್ನು ಕಳೆದುಕೊಂಡಲ್ಲಿ, 4-6 ತಿಂಗಳ ನಂತರ ನಿಮ್ಮ ಕೂದಲು ಒಂದು ಇಂಚು ಬೆಳೆಯುತ್ತದೆ.
  1. ಕೂದಲು ಉದುರುವಿಕೆಯ ಸಮಸ್ಯೆಯನ್ನು ಹೇಗೆ ತಡೆದುಕೊಳ್ಳುವುದು?

ಕೂದಲು ಉದುರುವಿಕೆಗೆ ಮೊದಲೇ ಅದನ್ನು ಎದುರಿಸಲು ಸಿದ್ಧರಾಗಬೇಕಾಗುತ್ತದೆ. ಚಿಕಿತ್ಸೆ ನಡೆಯುವಾಗ ಮತ್ತು ನಡೆದ ಮೇಲೆ ಈ ಸಲಹೆಗಳನ್ನು ಅನುಸರಿಸಿ:-

a.ಚಿಕಿತ್ಸೆಗೆ ಮೊದಲು :-

ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ: ಚಿಕಿತ್ಸೆ ಪಡೆಯುವ ಮೊದಲೇ ಕೂದಲನ್ನು ಸಣ್ಣಗೆ ಕತ್ತರಿಸಿಕೊಳ್ಳಿ. ಆಗ ಕೂದಲು ಉದುರುವುದು ಮತ್ತು ಬೆಳೆಯುವುದು ನಿಮ್ಮ ಅರಿವಿಗೆ ಬರುವುದು ಕಡಿಮೆಯಾಗುತ್ತದೆ. ಪುರುಷರು ತಮ್ಮ ತಲೆಯನ್ನು ಬೋಳಿಸಿಕೊಂಡು ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತಾರೆ. ಆದರೆ ಮಹಿಳೆಯರಿಗೆ ಇದು ಇಷ್ಟವಾಗದ ಸಲಹೆಯಾಗಿರುತ್ತದೆ.

ಕೋಲ್ಡ್ ಕ್ಯಾಪ್ ಥೆರಪಿ: ನಿಮಗೆ ಚಿಕಿತ್ಸೆ ನೀಡುವಾಗ ಕ್ಯಾಪ್ ಅಥವಾ ಕೋಲ್ಡ್ ಪ್ಯಾಕ್‌ಗಳನ್ನು ಧರಿಸಲು ಸಲಹೆ ಮಾಡಬಹುದು. ಕೂದಲು ಉದುರುವುದನ್ನು ತಪ್ಪಿಸಲು ಈ ತಂತ್ರವನ್ನು ಬಳಸಲಾಗುತ್ತದೆ. ಕೋಲ್ಡ್ ಪ್ಯಾಕ್ ತಲೆಯಲ್ಲಿನ ರಕ್ತನಾಳಗಳನ್ನು ಸಂಕುಚಿತಗೊಳಿಸುವ ಮೂಲಕ ಕಿಮೊಥೆರಪಿಯ ಔಷಧಿಗಳು ಕೂದಲಿನ ಬುಡಕ್ಕೆ ತಲುಪುವುದನ್ನು ತಡೆಯುತ್ತದೆ.

b.ಚಿಕಿತ್ಸೆ ಅವಧಿಯಲ್ಲಿ:-

  • ನಿಮ್ಮ ಕೂದಲನ್ನು ಪ್ರತಿದಿನ ತೊಳೆಯಲು ಹೋಗಬೇಡಿ.
  • ಯಾವಾಗಲೂ ಬೇಬಿ ಶಾಂಪೂವಿನಂತಹ ಮೃದುವಾದ ಶಾಂಪೂವನ್ನು ಬಳಸಿ ಕೂದಲನ್ನು ಸ್ವಚ್ಛಗೊಳಿಸಿಕೊಳ್ಳಿ.

  • ಮೃದುವಾದ ಹೇರ್‌ಬ್ರಷ್ ಅನ್ನು ಬಳಸಿ ಹಾಗೂ ಬಿಗಿಯಾದ ಕ್ಲಿಪ್‌ಗಳನ್ನು ಬಳಸಿ ನಿಮ್ಮ ಕೂದಲಿನ ಸ್ಟೈಲ್ ಅನ್ನು ಮಾಡಬೇಡಿ.
  • ಬಿಸಿಲಿನಲ್ಲಿ ಹೋಗವಾಗ ನಿಮ್ಮ ತ್ವಚೆಗೆ ಸನ್‌ಸ್ಕ್ರೀನ್ ಲೋಶಹ್ ಮತ್ತು ತಲೆಗೆ ಸ್ಕಾರ್ಫ್ ಸುತ್ತಿಕೊಂಡು ಹೋಗುವುದನ್ನು ಮರೆಯಬೇಡಿ.
  • ಒಂದು ವೇಳೆ ನಿಮ್ಮ ಕೂದಲಿನಲ್ಲಿ ಹಕ್ಕಳೆಗಳು ಅಥವಾ ತುರಿಕೆಗಳು ಇದ್ದಲ್ಲಿ, ಅದು ಒಣ ತ್ವಚೆಯನ್ನು ಪ್ರತಿನಿಧಿಸುತ್ತದೆ. ಇದಕ್ಕೆ ಎಣ್ಣೆ ಅಥವಾ ಮೊಯಿಶ್ಚರೈಸರ್ ಅನ್ನು ಬಳಸಿ. ಆ್ಯಂಟಿ ಡೆಂಡ್ರಫ್ ಶಾಂಪೂವನ್ನು ಬಳಸಬೇಡಿ.

  • ಕರ್ಲಿಂಗ್, ಸ್ಟ್ರೈಟೆನಿಂಗ್ ಅಥವಾ ಕಲರಿಂಗ್ ಅನ್ನು ಮಾಡಿಸಬೇಡಿ.

c.ಚಿಕಿತ್ಸೆಯ ನಂತರ :-

ನಿಮ್ಮ ಸ್ವಾಭಾವಿಕ ಕೂದಲನ್ನು ಮೃದುವಾಗಿ ತೊಳೆಯಿರಿ, ಬಾಚಿರಿ ಅಥವಾ ಕಲರ್ ಮಾಡಿ. ಏಕೆಂದರೆ ಈ ಕೂದಲುಗಳು ತುಂಬಾ ಸೂಕ್ಷ್ಮವಾಗಿ ವರ್ತಿಸುತ್ತವೆ:

  • ನಿಮ್ಮ ಕೂದಲನ್ನು ವಾರಕ್ಕೆ ಎರಡು ದಿನ ಮಾತ್ರ ತೊಳೆಯಿರಿ.
  • ತ್ವಚೆಯಲ್ಲಿ ಹಕ್ಕಳೆಗಳು ಹಾಗೂ ಒಣ ತ್ವಚೆಯನ್ನು ನಿವಾರಿಸಿಕೊಳ್ಳಲು ನೀವು ಕೂದಲಿನ ಮಸಾಜ್ ಅನ್ನು ಮಾಡಿಸಿಕೊಳ್ಳಬಹುದು.

ಆತುರಪಡಬೇಡಿ, ನೀವು ಕೂದಲು ಬೆಳೆಯುವುದನ್ನು ನೋಡಲು ಕಾತರದಿಂದ ಇರಬಹುದು. ಆದರೆ ಅದಕ್ಕೂ ಸ್ವಲ್ಪ ಸಮಯ ಬೇಕಾಗುತ್ತದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • ಸುದ್ದಿ

    ರಾಜ್ಯ ಸರ್ಕಾರದಿಂದ ನೆರೆ ಸಂತ್ರಸ್ತರಿಗೊಂದು ಸಿಹಿ ಸುದ್ದಿ….!

    ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…

  • ಸುದ್ದಿ

    ನಮ್ಗೆ ಪ್ರಚಾರ ನಿಲ್ಲಿಸುವಂತೆ ಹೇಳುತ್ತಾರೆ..ಅವರಿಗೆ ಅವಧಿ ಮೀರಿದ್ರೂ ಪ್ರಚಾರ ಮಾಡಲು ಅವಕಾಶ ಕೊಡುತ್ತಾರೆ ಎಂದು ದೂರು ಕೊಟ್ಟ ಸುಮಲತಾ…

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಇಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಬೆಳವಣಿಗೆಗಳ ಕುರಿತು ಮಾಹಿತಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಆದ ಗೊಂದಲಗಳ ಬಗ್ಗೆ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗಿದ್ದು, ಮಾಹಿತಿ ತಿಳಿದುಕೊಳ್ಳಲು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿದ್ದಾಗಿ ಅವರು ಹೇಳಿದ್ದಾರೆ ನಮಗೆ ರಾತ್ರಿ 9.30 ಕ್ಕೆ ಪ್ರಚಾರ ನಿಲ್ಲಿಸುವಂತೆ ಚುನಾವಣಾ ಅಧಿಕಾರಿಗಳು ಒತ್ತಡ ಹಾಕುತ್ತಾರೆ….

  • ಆರೋಗ್ಯ

    ಕ್ಯಾರೆಟ್ ನ ಉಪಯೋಗಗಳು ಗೊತ್ತಾದ್ರೆ ಅಚ್ಚರಿ ಪಡ್ತಿರಾ.! ಈ ಮಾಹಿತಿ ನೋಡಿ.

    ಆರೋಗ್ಯ ತಜ್ಞರ ಪ್ರಕಾರ  ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್‌ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…

  • ಸುದ್ದಿ

    ಮಧ್ಯಾನ ಊಟದ ನಂತರ ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ಶಾಲಾ ಮಕ್ಕಳು….!

    ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….

  • ಸುದ್ದಿ

    ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡು ರಸ್ತೆ ಮಧ್ಯದಲ್ಲಿ ಅಮಾನವೀಯ ರೀತಿ ವರ್ತಿಸಿದ ಮಹಿಳೆ.

    ಕೊರೊನಾ ಮಹಾಮಾರಿ ದೇಶ ಅದರಲ್ಲೂ ರಾಜ್ಯವನ್ನು ವಕ್ಕರಿಸಿದ ಬಳಿಕ ಅನೇಕ ಅಮಾನವೀಯ ಘಟನೆಗಳು ಬೆಳಕಿಗೆ ಬಂದಿವೆ. ಕೆಲವೊಂದು ಮಾನವೀಯ ಕೆಲಸಗಳು ಕೂಡ ನಡೆದಿವೆ. ಈ ಮಧ್ಯೆ ಸಿಲಿಕಾನ್ ಸಿಟಿಯಲ್ಲಿ ಪೌರಕಾರ್ಮಿಕರ ಮೇಲೆ ಮಹಿಳೆಯೊಬ್ಬರು ಅಮಾನವೀಯವಾಗಿ ವರ್ತಿಸಿರುವುದು ಬೆಳಕಿಗೆ ಬಂದಿದೆ. ಹೌದು. ಪೌರಕಾರ್ಮಿಕರು ಕುಡಿಯಲು ನೀರು ಕೇಳಿದ್ದಕ್ಕೆ ಸಿಟ್ಟುಗೊಂಡ ಮಹಿಳೆ ಅವರನ್ನು ನಿಂದಿಸಿದ್ದಲ್ಲದೇ, ಬಾಟಲಿಯಲ್ಲಿ ನೀರು ತುಂಬಿಸಿ ನಂತರ ಅದನ್ನು ರಸ್ತೆ ಮಧ್ಯದಲ್ಲಿಟ್ಟು ಬಂದಿದ್ದಾರೆ. ಈ ಮೂಲಕ ಅಮಾನವೀಯತೆಯನ್ನು ಪ್ರದರ್ಶಿಸಿದ್ದಾರೆ. ಇದನ್ನು ಅಲ್ಲೆ ಇದ್ದ ಕೆಲವರು ತಮ್ಮ ಮೊಬೈಲ್…