ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.
ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.
ಈರುಳ್ಳಿ ಮತ್ತು ಬೆಳ್ಳುಳ್ಳಿ:-
ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.
ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.
ಎಲೆಕೋಸು:-
ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್ನಿಂದ ರಕ್ಷಿಸುತ್ತದೆ.
ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.
ಹಸಿರು ಬಟಾಣಿ:-
ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.
ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.
ಬೀನ್ಸ್:-
ಬೀನ್ಸ್ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.
ಇವುಗಳು ಕಾರ್ಸಿನೊಜೆನ್ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಪಾಲಕ್ ಸೊಪ್ಪು:-
ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.
ಸ್ಪೈನಚ್ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.
ಬೀಟ್ರೂಟ್ಗಳು:-
ಬೀಟ್ರೂಟ್ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.
ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-
ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.