ಆರೋಗ್ಯ

ಕ್ಯಾನ್ಸರ್ ರೋಗ ನಿಯಂತ್ರಿಸುವ ಪವರ್ ಈ ತರಕಾರಿಗಳಿಗಿವೆ..!ತಿಳಿಯಲು ಈ ಲೇಖನ ಓದಿ…

332

ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್. ಆದಾಗ್ಯೂ, ಆಧುನಿಕ ವೈದ್ಯಕೀಯ ಕ್ಷೇತ್ರವು ಎಷ್ಟೊoದು ಮುಂದುವರೆದಿದೆ ಎಂದರೆ, ಒಂದು ವೇಳೆ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲಿಯೇ ಗುರುತಿಸಿದರೆ ಅದನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ.

ಧೂಮಪಾನ, ಮದ್ಯಪಾನಗಳಂತಹ ದುಶ್ಚಟಗಳೊoದಿಗೆ, ನಮ್ಮ ಆಹಾರಕ್ರಮವೂ ಕೂಡ ಅನೇಕ ಬಾರಿ ಕ್ಯಾನ್ಸರ್‌ಗೆ ಕಾರಣವಾಗಬಹುದು. ಆದ್ದರಿಂದ ಕ್ಯಾನ್ಸರ್ ಅನ್ನು ದೂರವಿರಿಸಲು ನೆರವಾಗುವ ಆಹಾರಕ್ರಮವು ಯಾವುದೆಂದು ತಿಳಿಯರಿ.

ಈರುಳ್ಳಿ ಮತ್ತು ಬೆಳ್ಳುಳ್ಳಿ:-

ಭಾರತೀಯ ಅಡುಗೆಗಳಲ್ಲಿ ಪ್ರಮುಖ ಪಾತ್ರವನ್ನು ಪಡೆದಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಔಷಧೀಯ ಗುಣಗಳು ಇದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರವಾಗಿದೆ. ಹಲವಾರು ಶತಮಾನಗಳಿಂದಲೂ ಈರುಳ್ಳಿ ಮತ್ತು ಬೆಳ್ಳುಳ್ಳಿಯನ್ನು ಮನೆಮದ್ದಾಗಿ ಬಳಸಿಕೊಳ್ಳುತ್ತಾ ಇದ್ದಾರೆ. ಈರುಳ್ಳಿ ಮತ್ತು ಬೆಳ್ಳುಳ್ಳಿ ಕೆಲವರಿಗೆ ಇಷ್ಟವಾಗಲ್ಲ.

ಯಾಕೆಂದರೆ ಇದರ ಘಾಟು ವಾಸನೆ. ಅಲ್ಲಿಯುಮ್ಸ್ ಪ್ರಭೇದಕ್ಕೆ ಸೇರಿರುವಂತಹ ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಕ್ಯಾನ್ಸರ್ ಅನ್ನು ತಡೆಯುವ ಗುಣಗಳು ಇವೆಯಂತೆ. ಇದರಲ್ಲಿ ಇರುವಂತಹ ಕೆಲವೊಂದು ನೈಸರ್ಗಿಕ ರಾಸಾಯನಿಕಗಳು ಕೆಲವು ಬಗೆಯ ಕ್ಯಾನ್ಸರ್‌ನ್ನು ತಡೆಯುತ್ತದೆ. ಈರುಳ್ಳಿ ಮತ್ತು ಬೆಳ್ಳುಳ್ಳಿಯಲ್ಲಿ ಇರುವಂತಹ ಆ್ಯಂಟಿಆಕ್ಸಿಡೆಂಟ್‌ಗಳು ಡಿಎನ್ ಎ ಕೋಶಗಳಿಗೆ ಹಾನಿಯುಂಟು ಮಾಡುವ ಫ್ರೀ ರ್ಯಾಡಿಕಲ್ ಅನ್ನು ತಡೆಯುತ್ತದೆ.

ಎಲೆಕೋಸು:-

ಪ್ರತಿದಿನ ಎಲೆಕೋಸನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅದರಿಂದ ನಮ್ಮ ದೇಹವು ಹೆಚ್ಚಿನ ಪೋಷಕಾಂಶಗಳನ್ನು ಪಡೆದುಕೊಂಡು ಕ್ಯಾನ್ಸರ್ ಕಾಯಿಲೆಯಿಂದ ನಮ್ಮನ್ನು ಕಾಪಾಡುತ್ತದೆ. ಇದಕ್ಕೆಲ್ಲಾ ಕಾರಣ ಎಲೆಕೋಸಿನಲ್ಲಿ ಸಲ್ಫೋರಫನೆ ಎನ್ನುವ ಅಂಶವಿದ್ದು, ಇದು ಕ್ಯಾನ್ಸರ್‌ನಿಂದ ರಕ್ಷಿಸುತ್ತದೆ.

ಎಲೆಕೋಸಿನಲ್ಲಿ ಇರುವಂತಹ ಅತ್ಯಂತ ಶಕ್ತಿಶಾಲಿ ಆ್ಯಂಟಿಆಕ್ಸಿಡೆಂಟ್ ಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಗೆ ಕಾರಣವಾಗುವಂತಹ ಫ್ರೀ ರ್ಯಾಡಿಕಲ್ ಗಳನ್ನು ನಿವಾರಣೆ ಮಾಡುತ್ತದೆ.

ಹಸಿರು ಬಟಾಣಿ:-

ಹಸಿರು ಬಟಾಣಿಗಳು ಕ್ಯಾನ್ಸರನ್ನು ನಿಯಂತ್ರಿಸಲು ಇರುವ ಅತ್ಯಂತ ಶಕ್ತಿಶಾಲಿ ತರಕಾರಿಗಳಾಗಿವೆ. ಅದರಲ್ಲೂ ಮುಖ್ಯವಾಗಿ ಜಠರದ ಕ್ಯಾನ್ಸರ್ ನಿವಾರಿಸಲು ಇವು ಸಹಾಯ ಮಾಡುತ್ತವೆ.

ಇದರಲ್ಲಿ ಪೊಟಾಶಿಯಂ, ಕಬ್ಬಿಣಾಂಶ ಮತ್ತು ವಿಟಮಿನ್‍ಗಳು ಯಥೇಚ್ಛವಾಗಿದ್ದು, ಜೀರ್ಣಾಂಗ ವ್ಯವಸ್ಥೆಯನ್ನು ಶುದ್ಧಗೊಳಿಸಲು ಇವು ನೆರವು ನೀಡುತ್ತವೆ.

ಬೀನ್ಸ್:-

ಬೀನ್ಸ್‌ಗಳಲ್ಲಿ ವಿಟಮಿನ್ ಬಿಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇದು ಕ್ಯಾನ್ಸರ್ ನಿಯಂತ್ರಿಸಲು ಗಣನೀಯವಾದ ಕೊಡುಗೆಯನ್ನು ನೀಡುತ್ತದೆ.

ಇವುಗಳು ಕಾರ್ಸಿನೊಜೆನ್‍ಗಳನ್ನು ನಿವಾರಿಸುವ ಲುಲುಟೇನ್ ಮತ್ತು ವೈಯೊಲಕ್ಸಂಥಿನ್ ಮತ್ತು ಬೀಟಾ-ಕೆರೊಟಿನ್‍ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಪಾಲಕ್ ಸೊಪ್ಪು:-

ಪಾಲಕ್ ಸೊಪ್ಪು ಸಹ ಪ್ರಪಂಚದಲ್ಲಿರುವ ಅತ್ಯಂತ ಆರೋಗ್ಯಕಾರಿ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಅದರಲ್ಲೂ ಇದು ಕ್ಯಾನ್ಸರನ್ನು ನಿಯಂತ್ರಿಸುವ ಆಹಾರ ಪದಾರ್ಥವಾಗಿರುವುದು ಸಹ ಇದರ ಹೆಚ್ಚುಗಾರಿಕೆ.

ಸ್ಪೈನಚ್‍ನಲ್ಲಿ ಪೊಟಾಶಿಯಂ, ಸತು, ವಿಟಮಿನ್ ಕೆ, ಇ, ಮತ್ತು ಎ ಗಳು ಅಧಿಕ ಪ್ರಮಾಣದಲ್ಲಿರುತ್ತವೆ.

ಬೀಟ್‍ರೂಟ್‍ಗಳು:-

ಬೀಟ್‍ರೂಟ್‍ಗಳು ರಕ್ತ ಪರಿಚಲನೆಯನ್ನು ಮತ್ತು ರಕ್ತದಲ್ಲಿ ಸಕ್ಕರೆಯ ಪ್ರಮಾಣವನ್ನು ಸುಸ್ಥಿತಿಯಲ್ಲಿಡಲು ನೆರವಾಗುತ್ತವೆ. ಇವುಗಳು ರಕ್ತದೊತ್ತಡವನ್ನು ನಿವಾರಿಸುವ ಅಂಶಗಳನ್ನು ಸಹ ಹೊಂದಿರುತ್ತವೆ.

ತರಕಾರಿ ಮತ್ತು ಹಣ್ಣನ್ನು ಹೆಚ್ಚು ಹೆಚ್ಚು ಸೇವಿಸಿರಿ:-

ತಾಜಾ ತರಕಾರಿ ಮತ್ತು ಹಣ್ಣುಗಳನ್ನು ನಿಮ್ಮ ದಿನನಿತ್ಯದ ಆಹಾರದ ಕ್ರಮದಲ್ಲಿ ಸೇರಿಸಿಕೊಳ್ಳುವುದರ ಮೂಲಕ ನಿಮ್ಮ ಶರೀರಕ್ಕೆ ಅವಶ್ಯಕವಾಗಿರುವ ಪೋಷಕಾಂಶಗಳು ಮತ್ತು ವಿಟಮಿನ್ ಗಳನ್ನು ಒದಗಿಸಬಹುದು. ಈ ಪೋಷಕಾಂಶಗಳು ಮತ್ತು ವಿಟಮಿನ್‌ಗಳು , ನಿಮ್ಮ ರೋಗನಿರೋಧಕ ಮಟ್ಟವನ್ನು ಹೆಚ್ಚಿಸುವುದು ಮಾತ್ರವಲ್ಲದೇ, ಸೋಂಕುಗಳು ಮತ್ತು ಕ್ಯಾನ್ಸರ್ ನ ವಿರುದ್ಧ ಕಾದಾಡಲೂ ಕೂಡ ಸಹಕಾರಿಯಾಗಿವೆ. ಅಲ್ಲದೇ, ಇವು ಜಂಕ್ ಮತ್ತು ಕೊಬ್ಬುಯುಕ್ತ ಆಹಾರಗಳ ಬಗೆಗಿನ ನಿಮಗಿರುವ ಹಸಿವನ್ನು ತನ್ನಿಂತಾನಾಗಿಯೇ ಕಡಿಮೆ ಮಾಡುತ್ತವೆ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಆಧಾರ್‌ ಕಾರ್ಡ್‌’ನಲ್ಲಿ ತಪ್ಪುಗಳಿದ್ದರೆ ನೀವೇ, ನಿಮ್ಮ ಮೊಬೈಲ್’ನಲ್ಲೇ ಸರಿಪಡಿಸಬಹುದು! ಹೇಗೆ ಗೊತ್ತಾ?

    ಈಗ ಎಲ್ಲದಕ್ಕೂ ಒಂದೇ ಕಾರ್ಡ್‌ – ಅದುವೇ ಆಧಾರ್‌ ಕಾರ್ಡ್‌.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಸುದ್ದಿ

    7 ವರ್ಷಗಳಲ್ಲಿ 7 ಬಾರಿ ಗರ್ಭಪಾತ ; ಕರಳು ಚಿಮ್ಮುತ್ತೆ ಮಹಿಳೆಯ ಹೃದಯ ವಿದ್ರಾವಕ ಕಥೆ….

    ಹೈದ್ರಾಬಾದ್ ನ ಮಹಿಳೆಯೊಬ್ಬಳ ನೋವಿನ ಕಥೆ ಬಹಿರಂಗವಾಗಿದೆ. ಮಹಿಳೆಗೆ ಒಂದಲ್ಲ ಎರಡಲ್ಲ 7 ಬಾರಿ ಗರ್ಭಪಾತವಾಗಿದೆ. ಪ್ರತಿ ಬಾರಿ ಗರ್ಭ ಧರಿಸುತ್ತಿದ್ದಂತೆ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಗಂಡನ ಮನೆಯವರು ಲಿಂಗ ಪರೀಕ್ಷೆ ನಂತ್ರ ಗರ್ಭಪಾತ ಮಾಡಿಸ್ತಿದ್ದರಂತೆ. ಸುಮತಿ ಏಳು ವರ್ಷಗಳಲ್ಲಿ 7 ಬಾರಿ ಗರ್ಭ ಧರಿಸಿದ್ದಾಳೆ. ಪ್ರತಿ ಬಾರಿಯೂ ಗರ್ಭಪಾತ ಮಾಡಿಸಲಾಗಿದೆ. ಒಂದು ಗರ್ಭಪಾತದಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಗರ್ಭಪಾತ ನಡೆಯುತ್ತಿತ್ತು. ಗರ್ಭ ಧರಿಸಿದ ಮೇಲೆ ಖುಷಿ ಪಡುವ ಬದಲು ಅಳುತ್ತಿದ್ದ ಸುಮತಿ ಈ ಬಾರಿ ಹೆಣ್ಣಾಗದಿರಲಿ ಎಂದು…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ( 22 ಡಿಸೆಂಬರ್, 2018) ನೀವು ಸಂತೋಷನೀಡುವ ಮೂಲಕ ಮತ್ತು ಹಿಂದಿನ ತಪ್ಪುಗಳನ್ನು ಮನ್ನಿಸುವ ಮೂಲಕ ನಿಮ್ಮ ಜೀವನವನ್ನು ಸಮರ್ಥಗೊಳಿಸಲಿದ್ದೀರಿ. ನಿಮ್ಮ ಸಂಬಂಧದ ಆ ಎಲ್ಲಾ…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಸುದ್ದಿ

    ತನ್ನ ಪ್ರೊಫೆಸರ್ ಮದುವೆಗೆ ಹೋದ ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಟೇಜ್ ಮೇಲೆ ಮಾಡಿದ್ದೇನು. ಶಾಕ್ ಆದ ಹೆಣ್ಣು.

    ಸಮಯ ಮತ್ತು ಸಂದರ್ಭದ ಅರಿವಿಲ್ಲದೆ ನಾವು ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ನಗೆಪಾಟಲಿಗೆ ದಾರಿಮಾಡಿ ಕೊಡುತ್ತದೆ. ಇಂತಹದ್ದೇ ಒಂದು ಕೆಲಸವನ್ನ ಇಂಜಿನಿಯರಿಂಗ್ ಓದುತ್ತಿದ್ದ ಒಬ್ಬ ವಿದ್ಯಾರ್ಥಿ ಮಾಡಿದ್ದಾನೆ ಮತ್ತು ಈತ ಮಾಡಿದ ಕೆಲಸಕ್ಕೆ ಒಂದು ಕ್ಷಣ ಎಲ್ಲರೂ ಬೆರಗಾಗಿದ್ದಾರೆ. ಇನ್ನು ಇದೂ ದೊಡ್ಡ ಸುದ್ದಿ ಅಲ್ಲದೆ ಇರಬಹುದು ಆದರೆ ಇದು ವಿಭಿನ್ನ ಅನ್ನುವ ಕಾರಣಕ್ಕೆ ನಾವು ನಿಮಗೆ ಹೇಳುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಇಂಜಿನಿಯರಿಂಗ್ ವಿದ್ಯಾರ್ಥಿ ಮಾಡಿದ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ…