ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.
ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….
ವಾಕರಿಕೆ ಬರುತ್ತದೆಯೇ?
ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.
ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?
ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.
ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?
ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್ ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.
ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!
ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?
ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.
ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ
ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.
ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.
ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.
ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್. ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು
ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ
ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ರೇಪಿಸ್ಟ್, ಡೇರಾ ಸಚ್ಛಾ ಸೌಧ ಮುಖ್ಯಸ್ಥ ಬಾಬಾ ರಾಮ್ ರಹೀಂಗೆ ಸಿಬಿಐ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆಯಾಗಿದೆ.
ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್ಗಡದ ರಾಜ್ನಂದ್ಗಾಂವ್ನಲ್ಲಿ ನಡೆದಿದೆ. 22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ…
ಸ್ವಿಟ್ಜರ್ಲ್ಯಾಂಡ್ನ ಈ ಪ್ರಕೃತಿ ಮನೋಹರ ಪಟ್ಟಣಕ್ಕೆ ವಲಸೆ ಬರುವವರಿಗೆ ಅಲ್ಲಿಯ ಸರಕಾರವೇ 60,000 ಡಾ.(ಸುಮಾರು 38.7 ಲ.ರೂ.) ನೀಡುತ್ತದೆ. ಸರಕಾರದ ಈ ಕೊಡುಗೆಗೆ ಕಾರಣವಿದೆ. ಈ ಪಟ್ಟಣದಲ್ಲಿ ಜನಸಂಖ್ಯೆ ದಿನೇ ದಿನೇ ಕ್ಷೀಣಿಸುತ್ತಿದೆ.