ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಆದರೆ ಇದು ಆರೋಗ್ಯಕರವೇ? ತಜ್ಞರಲ್ಲಿ ಈ ಪ್ರಶ್ನೆಯನ್ನು ಕೇಳಿದರೆ ಖಾಲಿ ಹೊಟ್ಟೆಯಲ್ಲಿ ಟೀ ಸೇವಿಸುವುದು ಅತ್ಯಂತ ಅನಾರೋಗ್ಯಕರ ಅಭ್ಯಾಸ ಎಂಬ ಉತ್ತರ ಸಿಗುತ್ತದೆ.ಹಾಗಾದರೆ ಟೀ ಯಾವಾಗ ಕುಡಿಯಬೇಕು ಎಂಬ ಪ್ರಶ್ನೆಗೆ ತಜ್ಞರು ಬೆಳಗ್ಗಿನ ಉಪಾಹಾರದ ಬಳಿಕ ಸೇವಿಸುವುದು ಉತ್ತಮ ಎಂಬ ಉತ್ತರ ನೀಡುತ್ತಾರೆ. ಆದರೆ ಟೀ ಸೇವನೆಯ ಪ್ರಮಾಣ ಇಡಿಯ ದಿನದಲ್ಲಿ ಮಿತವಾಗಿರುವುದೂ ಅಗತ್ಯ.
ಹಾಗಾದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯಬಹುದೇ? ಮುಂದೆ ಓದಿ….
ವಾಕರಿಕೆ ಬರುತ್ತದೆಯೇ?
ಟೀ ಕ್ಷಾರೀಯವೂ ಆಗಿದೆ ಕೊಂಚ ಆಮ್ಲೀಯವೂ ಆಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದರಿಂದ ಹೊಟ್ಟೆಯಲ್ಲಿರುವ ಜೀರ್ಣರಸಗಳ ಪ್ರಭಾವ ಏರುಪೇರಾಗುತ್ತದೆ. ಈ ಏರುಪೇರು ವಾಕರಿಕೆ ಬರಿಸುತ್ತದೆ.
ಕಪ್ಪು (ಬ್ಲಾಕ್) ಟೀ ಸುರಕ್ಷಿತವೇ?
ಕಪ್ಪು ಟೀ ಎಂದರೆ ಹೆಚ್ಚು ಕುದಿಸದ ಮತ್ತು ಹಾಲು ಸೇರಿಸದ ಟೀ. ಇದು ತೂಕ ಇಳಿಸಲು ಉತ್ತಮವಾದರೂ ಖಾಲಿ ಹೊಟ್ಟೆಯಲ್ಲಿ ಕುಡಿಯುವ ಮೂಲಕ ಆಮ್ಲೀಯತೆ ಹೆಚ್ಚುತ್ತದೆ, ಇದರಿಂದ ಹೊಟ್ಟೆಯ ಜೀರ್ಣರಸಗಳೂ ಪ್ರಭಾವಕ್ಕೊಳಗಾಗಿ ಹೊಟ್ಟೆಯುಬ್ಬರಿಕೆ ಮತ್ತು ಹೊಟ್ಟೆ ತುಂಬಿರುವ ಹುಸಿಭಾವನೆಯನ್ನು ಮೂಡಿಸುತ್ತದೆ.
ಹಾಲು ಸೇರಿಸಿದ ಟೀ ಕುಡಿದರೆ ಆಗುವ ಅಡ್ಡಪರಿಣಾಮಗಳೇನು?
ಭಾರತದಲ್ಲಿ ಟೀ ಕುಡಿಯುವ ತೊಂಭತ್ತು ಶೇಖಡಾ ಜನರಲ್ಲಿ ಎಂಭತ್ತೊಂಭತ್ತು ಶೇಖಡಾ ಜನರು ಹಾಲು ಸೇರಿಸಿದ ಟೀ ಕುಡಿಯುತ್ತಾರೆ. ಆದರೆ ದಿನಕ್ಕೆ ಮೂರಕ್ಕಿಂತ ಹೆಚ್ಚು ಕಪ್ ಕುಡಿದರೆ ಇದು ಅನಗತ್ಯ ಕೊಬ್ಬು, ಆಮ್ಲೀಯತೆ ಮತ್ತು ಟಿನ್ನಿಟಸ್ ಅಥವಾ ಕಿವಿಗಳಲ್ಲಿ ಗುಂಯ್ಗುಡುವ ತೊಂದರೆಯನ್ನು ತಂದಿಡುತ್ತದೆ.
ಅದರಲ್ಲೂ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ಸುಸ್ತಾದ ಭಾವನೆ, ಹೊಟ್ಟೆಯುಬ್ಬರಿಕೆ, ಜೀರ್ಣರಸಗಳು ಪ್ರಭಾವ ಕಳೆದುಕೊಳ್ಳುವುದು ಮೊದಲಾದ ತೊಂದರೆಗಳು ಎದುರಾಗಬಹುದು. ಇಲ್ಲಿ ಓದಿ :- ಗರ್ಭಿಣಿ ಮಹಿಳೆಯರು ಇವನ್ನು ಬಳಸಿದರೆ, ಹುಟ್ಟುವ ಮಕ್ಕಳಿಗೆ ಅಪಾಯ..!
ಸ್ಟ್ರಾಂಗ್ ಟೀ ಕುಡಿದರೆ ಯಾವ ದುಷ್ಪರಿಣಾಮಗಳಾಗುತ್ತವೆ?
ಹೆಚ್ಚಿನ ರುಚಿ ಪಡೆಯಲು ಎರಡು ವಿಧಾನಗಳಿವೆ. ಮೊದಲನೆಯದು ಟೀಪುಡಿಯನ್ನು ಹೆಚ್ಚು ಸಮಯದವರೆಗೆ ಕುದಿಸುವುದು. ಎರಡನೆಯದು ಹೆಚ್ಚಿನ ಪ್ರಮಾಣದ ಟೀ ಪುಡಿಹಾಕಿ ಕೊಂಚ ಸಮಯದ ವರೆಗೆ ಕುದಿಸುವುದು. ಆದರೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದಾದರೆ ಎರಡೂ ವಿಧಾನಗಳು ಮಾರಕವಾಗಿವೆ. ಅದರಲ್ಲೂ ಹಾಲಿಲ್ಲದ ಸ್ಟ್ರಾಂಗ್ ಟೀ ಕುಡಿಯುವುದರ ಮೂಲಕ ಜೀರ್ಣವ್ಯವಸ್ಥೆ ಹಾಳಾಗುತ್ತದೆ. ಏಕೆಂದರೆ ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಆಮ್ಲಗಳು ಜೀರ್ಣರಸಗಳ ರಚನೆಯನ್ನು ಬದಲಿಸಿಬಿಡುತ್ತವೆ. ಇದು ಅಲ್ಸರ್, ಹುಳಿತೇಗು, ಹೊಟ್ಟೆಯುರಿ, ಎದೆಯುರಿ ಮೊದಲಾದವುಗಳಿಗೆ ನೇರವಾಗಿ ಕಾರಣವಾಗುತ್ತದೆ.
ನಾಲ್ಕೈದು ಬಗೆಯ ಟೀಪುಡಿ ಬೆರೆಸಿದರೆ ಏನಾಗುತ್ತದೆ
ಫ್ಯಾಕ್ಟರಿಯಲ್ಲಿ ತ್ಯಾಜ್ಯವಾಗಿ ಹೋಗಬಹುದಾದ, ಆದರೆ ಕೊಂಚ ಟೀ ಅಂಶವಿರುವ ಪುಡಿಯನ್ನು ಅಲ್ಪ ಪ್ರಮಾಣದಲ್ಲಿ ಟೀಪುಡಿಯಲ್ಲಿ ಬೆರೆಸಿ ಲಾಭ ಮಾಡಿಕೊಳ್ಳಲಾಗುತ್ತದೆ. ಅಗ್ಗದ ಟೀಪುಡಿಯನ್ನು ದುಬಾರಿ ಟೀಪುಡಿಯೊಂದಿಗೂ ಬೆರೆಸಿ ಮಾರಾಟ ಮಾಡುತ್ತಾರೆ.
ಆದರೆ ಪ್ರತಿಷ್ಠಿತ ಸಂಸ್ಥೆಗಳು ನುರಿತ ಚಹಾ ರುಚಿ ನೋಡುವವರ ಮೂಲಕ , ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಎರಡು ಅಥವಾ ಹೆಚ್ಚು ಪುಡಿಗಳನ್ನು ಬೆರೆಸಿ ಪರೀಕ್ಷಿಸಿ ಸುರಕ್ಷಿತ ಎಂದು ಖಚಿತಪಡಿಸಿದ ಮೇಲೆ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಾರೆ. ಇದಕ್ಕೆ ಬ್ಲೆಂಡ್ಎಂದು ಕರೆಯುತ್ತಾರೆ.
ಈ ಬ್ಲೆಂಡ್ ಟೀಪುಡಿ ಕುಡಿಯುವುದು ಸುರಕ್ಷಿತವೇ ಹೊರತು ನಾವಾಗಿ ನಮ್ಮ ಮನಸ್ಸಿಗೆ ಬಂದಂತೆ ಎರಡು ಅಥವಾ ಹೆಚ್ಚಿನ ಟೀಪುಡಿಗಳನ್ನು ಸೇರಿಸಿ ಕುಡಿಯುವುದು ಆರೋಗ್ಯಕ್ಕೆ ಮಾರಕ ಹಾಗೂ ಇದು ಪಾನಮತ್ತನಾಗಿರುವ ಅನುಭವವನ್ನೂ ನೀಡಬಹುದು ಎಂದು ತಜ್ಞರು ಎಚ್ಚರಿಸುತ್ತಾರೆ. ಮಾರುಕಟ್ಟೆಯಲ್ಲಿ ಸಿಗುವ ಥ್ರೀಮಿಕ್ಸ್, ಸೆವೆನ್ ಮಿಕ್ಸ್ ಎಲ್ಲವೂ ವ್ಯಾಪಾರದ ತಂತ್ರಗಳೇ ಹೊರತು ಆರೋಗ್ಯಕರವಲ್ಲ.
ಟೀ ಮತ್ತು ಬಿಸ್ಕತ್
ಭಾರತದಲ್ಲಿ ಅತಿ ಸಾಮಾನ್ಯವಾದ ಧಿಡೀರ್ ತಿಂಡಿ ಎಂದರೆ ಟೀ ಮತ್ತು ಬಿಸ್ಕತ್. ಟೀ ಮತ್ತು ಬಿಸ್ಕತ್ ತಿನ್ನುವುದು ಉತ್ತಮ ಅಭ್ಯಾಸ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಬಿಸ್ಕತ್ ಬದಲಿಗೆ ಟೋಸ್ಟ್, ರಸ್ಕ್ ಮೊದಲಾದವುಗಳನ್ನೂ ಸೇವಿಸಬಹುದು. ಇವುಗಳಲ್ಲಿರುವ ಹಿಟ್ಟಿನ ಅಂಶ ಟೀ ಯಲ್ಲಿರುವ ಆಮ್ಲೀಯತೆಯನ್ನು ಹೀರಿಕೊಳ್ಳುವ ಕಾರಣ ಜೀರ್ಣರಸಗಳು ಹೆಚ್ಚು ಪ್ರಭಾವಕ್ಕೊಳಗಾಗುವುದಿಲ್ಲ. ಟೀ ಒಟ್ಟಿಗೆ ಸಿಹಿ ಅಥವಾ ಉಪ್ಪಿನ ಅಂಶವಿರುವ ತಿಂಡಿಗಳನ್ನು ತಿನ್ನುವ ಮೂಲಕ ದೇಹಕ್ಕೆ ಅಗತ್ಯವಾದ ಸೋಡಿಯಂ ಅಂಶವನ್ನು ಪಡೆದುಕೊಂಡು ಹೊಟ್ಟೆಯ ಮತ್ತು ಕರುಳಿನ ಹುಣ್ಣು (ಅಲ್ಸರ್) ನಿಂದ ಪಾರಾಗಬಹುದು
ಟೀ ಕುಡಿಯುವುದರಲ್ಲಿ ಅತಿಕೆಟ್ಟ ಅಭ್ಯಾಸ
ಆಹಾರ ಸೇವನೆಯ ಬಳಿಕ ಟೀ ಕುಡಿಯುವುದು ಕೆಟ್ಟ ಅಭ್ಯಾಸವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಕರ್ನಾಟಕಕ್ಕಿಂತ ಚಿಕ್ಕದಾಗಿರುವ ಪುಟ್ಟ ದೇಶ ಇಸ್ರೇಲ್, ಎಷ್ಟೇ ತೊಂದರೆಗಳು ಬಂದ್ರೂ ಕೂಡ ಎದೆಗುಂದದೆ, ಬಂದ ತೊಂದರೆಗಳನ್ನು ಎದುರಿಸಿ ಹೇಗೆ ಬೆಳೆದಿದೆ ಎಂದರೆ….ಆ ಇಸ್ರೇಲಿನ ಅದೆಷ್ಟೋ ಪಟ್ಟು ದೊಡ್ಡದಾಗಿರೋ ನಮ್ಮ ಭಾರತಕ್ಕೇನು ಆ ರೀತಿ ಬೆಳೆಯೋ ಅವಕಾಶಗಳೇ ಸಿಕ್ಕಿರಲಿಲ್ಲವಾ ? ಅನ್ನೋದು ನಮಗೆ ನಾವೇ ಕೇಳಿಕೊಳ್ಳಬೇಕಾದ ಮೊದಲ ಪ್ರಶ್ನೆ !
ಪೊಲೀಸರು ಕಳ್ಳರ ಬಾಯಿ ಬಿಡಿಸಲು ಲಾಠಿಯಲ್ಲಿ ಹೊಡೆಯುತ್ತಾರೆ, ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ (ಅಮಾನವೀಯ ಚಿತ್ರಹಿಂಸೆ) ಅನ್ನು ಪ್ರಯೋಗಿಸುತ್ತಾರೆ. ಅಥವಾ ಬೇರೆ ಬೇರೆ ರೀತಿಯಲ್ಲಿ ಪ್ರಯತ್ನ ಮಾಡುತ್ತಾರೆ.ಆದರೆ ಇಂಡೋನೇಷ್ಯಾ ಪೊಲೀಸರು ದೇಹದ ಮೇಲೆ ಹಾವನ್ನು ಬಿಟ್ಟು ಬಾಯಿ ಬಿಡಿಸಿದ್ದಾರೆ. ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಮೊಬೈಲ್ ಕದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸುತ್ತಾರೆ. ಆಗ ಆತ ಯಾವುದೇ ಮಾಹಿತಿಯನ್ನು ನೀಡಿರಲಿಲ್ಲ. ಕೊನೆಗೆ ಪೊಲೀಸರು ಆತನ ಕೈಗಳನ್ನು ಕಟ್ಟಿ ಹಾಕಿ ಕುತ್ತಿಗೆಯ ಸುತ್ತ ಹಾವನ್ನು ಬಿಟ್ಟಿದ್ದಾರೆ….
ಚಂದನವನದ ಆ್ಯಕ್ಷನ್ ಪ್ರಿನ್ಸ್ ದೃವಾ ಸರ್ಜಾ ಮೊನ್ನೆ ಮೊನ್ನೆ ಅಷ್ಟೇ ದುರಂತ ಅಂತ್ಯ ಕಂಡ ಖಳನಾಯಕ ಉದಯ್ ಅವರ ಅಕ್ಕನ ಗಂಡ ಅಂದರೆ ಬಾವ ರಾಜ ನಿರ್ದೇಶನದ ಐರಾ ಚಿತ್ರದ ಮೂಹೂರ್ತವನ್ನು ಉದಯ್ ಅವರ ಸಮಾಧಿ ಬಳಿ ಕ್ಲಾಪ್ ಮಾಡುವ ಆ ಚಿತ್ರಕ್ಕೆ ಚಾಲನೆಯನ್ನು ಮಾಡಿ ಗೆಳೆಯನನ್ನು ನೆನೆದು ಭಾವುಕರಾಗಿದ್ದರು. ದೃವಾ ಸರ್ಜಾ ಮದುವೆಯ ತಯಾರಿ ಕೂಡ ಭರ್ಜರಿಯಾಗಿ ಸಾಗಿದೆ. ಇತ್ತ ದೃವಾ ಸರ್ಜಾ ಮದುವೆಯ ಆಮಂತ್ರಣ ಪತ್ರಿಕೆ ಹಿಡಿದು ಸ್ಯಾಂಡಲ್ ವುಡ್ ಸೂಪರ್ ಸ್ಟಾರ್ ಮನೆ…
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ಡಿಜಿಟಲ್ ವ್ಯಾಲೆಟ್ಗಳಿಗೆ ಕೆವೈಸಿ ಅಳವಡಿಸಲು ಆರ್ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್ ವ್ಯಾಲೆಟ್ ಕಂಪನಿ ಫೋನ್ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್ಬಿಐ ಆಗಸ್ಟ್ವರೆಗೆ ವಿಸ್ತರಿಸಿತ್ತು,…
ಬೆಂಗಳೂರು ನಿಮ್ಹಾನ್ಸ್ನ ಜನ ಆರೋಗ್ಯ ಕೇಂದ್ರದ ಎಪಿಡೀಮಿಯಾಲಜಿ ವಿಭಾಗದ ವತಿಯಿಂದ ಅನುಷ್ಠಾನಗೊಂಡಿರುವ ಮಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಯುವಜನತೆಗೆ ಸಂಬಂಧಿಸಿದ ವಿಷಯಗಳಿಗೆ ಗೌರವಧನ ಆಧಾರದ ಮೇಲೆ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ರಾಷ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ನಾನ ಸಂಸ್ದೆ (ನಿಮ್ಹಾನ್ಸ್) ಬೆಂಗಳೂರು ಇಲ್ಲಿ ತರಬೇತಿ…