ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು. ಹಾಗೂ ಸಿಂಧು ಅವರನ್ನು ಗ್ರೂಪ್-1 ಹುದ್ದೆಗೆ ನೇಮಕ ಮಾಡಲು ರಾಜ್ಯ ಸಾರ್ವಜನಿಕ ಸೇವಾ ಕಾಯ್ದೆಯನ್ನು ಜಾರಿ ಮಾಡಲಾಗಿತ್ತು.
ಇದಕ್ಕೆ ಪ್ರತಿಕ್ರಯಿಸಿದ್ದ ಸಿಂಧುರವರು, ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದರು ಹಾಗೂ ಬ್ಯಾಡ್ಮಿಂಟನ್ ಗೆ ತಮ್ಮ ಮೊದಲ ಆದ್ಯತೆ ಅಂತಾ ಹೇಳಿದ್ದರು. ಆಗ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುರವರು ಸಿಂಧುಗೆ ಶುಭ ಹಾರೈಸಿ, ದೇಶಕ್ಕೆ ಮತ್ತಷ್ಟು ಪದಕಗಳನ್ನು ಗೆದ್ದು ತರಲಿ ಅಂತಾ ಹೇಳಿದ್ರು.
ಹೀಗಾಗಿ ಭಾರತದ ಖ್ಯಾತ ಶಟಲ್ ಬ್ಯಾಡ್ಮಿಂಟನ್ ಆಟಗಾರ್ತಿ, ಒಲಿಂಪಿಕ್ ಪದಕ ವಿಜೇತೆ, ಪಿ ವಿ ಸಿಂಧು ಆಂಧ್ರ ಪ್ರದೇಶ ಸರಕಾರದಲ್ಲಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಸಿಂಧು ಅವರಿಗೆ ಕಳೆದ ಜು.27ರಂದೇ ಜಿಲ್ಲಾಧಿಕಾರಿಯಾಗಿ ಅಧಿಕೃತ ನೇಮಕಾತಿ ಪತ್ರವನ್ನು ನೀಡಲಾಗಿತ್ತು. ಆದರೆ ಅವರು ನಿನ್ನೆ ಬುಧವಾರ ಔಪಚಾರಿಕವಾಗಿ ತಮ್ಮ ಅಧಿಕಾರ ವಹಿಸಿಕೊಂಡರು.
ಪಿ ವಿ ಸಿಂಧುರವರ ಬಾಲ್ಯದ ಬಗ್ಗೆ ತಿಳಿಯೋಣ:-
ಪಿ.ವಿ ಸಿಂಧುರವರು, 5 ಜುಲೈ 1995ರಂದು ಹೈದರಾಬಾದ್ನoಲ್ಲಿ ಜನಿಸಿದರು. ತಂದೆ ಪಿ.ವಿ. ರಮಣ ಮತ್ತು ತಾಯಿ ಪಿ. ವಿಜಯ. ಸಿಂಧುವಿನ ತಂದೆ-ತಾಯಿ ಇಬ್ಬರೂ ಸಹ ಮಾಜಿ ವಾಲಿಬಾಲ್ ಆಟಗಾರರಾಗಿರುವುದೊಂದು ವಿಶೇಷ. ಭಾರತ ಸರ್ಕಾರವು ಕೊಡಮಾಡುವ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಪಿ.ರಮಣರು 2000 ನೆಯ ಇಸವಿಯಲ್ಲಿ ಭಾಜನರಾಗಿದ್ದಾರೆ. ತಂದೆ ವೃತ್ತಿಪರ ವಾಲಿಬಾಲ್ ಆಟಗಾರರಾಗಿದ್ದರೂ ಸಹ ಸಿಂಧು ಮಾತ್ರ ಬ್ಯಾಡ್ಮಿಂಟನ್ ನಡೆಗೆ ಆಕರ್ಷಿತರಾದರು.ಅದಕ್ಕೆ ಕಾರಣ, 2001 ರ ಆಲ್ ಇಂಗ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ಪುಲ್ಲೇಲ ಗೋಪಿಚಂದ್ರ ಯಶಸ್ಸು ಮತ್ತು ಅವರಿಂದ ಪಡೆದ ಸ್ಫೂರ್ತಿ. ತನ್ನ ಎಂಟನೆಯ ವಯಸ್ಸಿನಲ್ಲೇ ಸಿಂಧು ಬ್ಯಾಡ್ಮಿಂಟನ್ ಆಡಲು ಪ್ರಾರಂಭಿಸಿದ್ದರು, ಇದೂ ಸಹ ಅವರನ್ನು ಬ್ಯಾಡ್ಮಿಂಟನ್ ಕಡೆಗೆ ಸೆಳೆಯಲು ಕಾರಣವಾಯಿತು.
ಪಿ.ವಿ ಸಿಂಧುರವರ ಬ್ಯಾಡ್ಮಿಂಟನ್ ಸಾಧನೆ:-
ಪಿ.ವಿ ಸಿಂಧುರವರು ಅಂತರರಾಷ್ಟ್ರೀಯ ಖ್ಯಾತಿಯ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ. ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ತರಬೇತಿ ಪಡೆಯುವ ಇವರು, ಭಾರತೀಯ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುತ್ತಿರುವ ಸ್ವಸಹಾಯ ಸಂಸ್ಥೆಯಾದ ಒಲಿಂಪಿಕ್ ಗೋಲ್ಡ್ ಕ್ವೆಸ್ಟ್ ನ ಭಾಗವಾಗಿದ್ದಾರೆ. 10 ಆಗಸ್ಟ್ 2012 ರಂದು ಇವರು ಚೀನಾ ದಲ್ಲಿ ಜರುಗಿದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ (ಪ್ರಕಾಶ್ ಪಡುಕೋಣೆ 1983 ರಲ್ಲಿ ಕಂಚು ಗೆದ್ದಿದ್ದಾರೆ. ಅನಂತರ ಭಾರತದ ಮೊದಲ ಸಿಂಗಲ್ಸ್ ಪದಕ) ನ ಸಿಂಗಲ್ಸ್ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯಾಗಿದ್ದಾರೆ. ಸೆಪ್ಟೆಂಬರ್ 21,2012 ರಂದು ಬಿಡುಗಡೆ ಮಾಡಲಾದ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಶ್ರೇಯಾಂಕಗಳಲ್ಲಿ ಮೊದಲ 20ರೊಳಗಿನ ಶ್ರೇಣಿಯಲ್ಲಿದ್ದರು. ಬಿಡಬ್ಲ್ಯೂಎಫ್ ಜೂನಿಯರ್ ಶ್ರೇಯಾಂಕಗಳಲ್ಲಿ 3 ನೇ ಸ್ಥಾನದಲ್ಲಿದ್ದಾರೆ.
ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕಾರ:-
ಭೂ ಆಡಳಿತೆಯ ಮುಖ್ಯ ಆಯುಕ್ತರಾಗಿರುವ ಅನಿಲ್ ಚಂದ್ರ ಪುನೇತ ಅವರಿಗೆ ಪಿ ವಿ ಸಿಂಧು ತಮ್ಮ ನೇಮಕಾತಿ ಪತ್ರವನ್ನು ಸಲ್ಲಿಸಿ ಗ್ರೂಪ್ 1 ಸರಕಾರಿ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡು ಸರಕಾರಿ ಆಡಳಿತೆಯಲ್ಲಿನ ತಮ್ಮ ಜೀವನದ ಹೊಸ ಪಾತ್ರವನ್ನು ಆರಂಭಿಸಿದರು.
ಸಿಂಧು ಅವರ ತನ್ನ ಹೆತ್ತವರೊಡಗೂಡಿ ಸರಕಾರದ ಭೂ ಆಡಳಿತೆಯ ಮುಖ್ಯ ಆಯುಕ್ತರ ಕಚೇರಿಗೆ ತೆರಳಿ ಗೊಲ್ಲಪುಡಿಯಲ್ಲಿನ ಸರಕಾರಿ ಸಚಿವಾಲಯದಲ್ಲಿ ಅಧಿಕಾರ ಗ್ರಹಣ ಮಾಡಿದರು.
ಸಿಂಧು ಎರಡು ಬಾರಿಯ ಕಂಚಿನ ಪದಕ ವಿಜೇತೆಯಾಗಿದ್ದಾರೆ.
ಸ್ನೇಹಿತರೆ ನಮ್ಮ ಪ್ರಕಾರ ಯಾವುದೇ ಕ್ರೀಡೆಯಲ್ಲಿ ಯಾರೇ ಆಗಲಿ, ನಮ್ಮ ದೇಶಕ್ಕೆ ಪದಕ ತಂದು ಕೊಡುವಲ್ಲಿ ಸಫಲ ರಾಗಿದ್ದಲ್ಲಿ, ಅಂತಹ ಕ್ರೀಡಾ ಪಟುಗಳಿಗೆ ಅದೇ ಕ್ರೀಡೆಯಲ್ಲಿ ಮುಂದುವರಿಯಲು, ಅವರಿಗೆ ಆರ್ಥಿಕವಾಗಲಿ, ಅಥವಾ ಬೇರೆ ಯಾವುದೇ ರೀತಿಯಿಂದಾಗಲಿ, ಸರಕಾರಗಳು ಪ್ರೋತ್ಸಾಹ ಕೊಡಬೇಕು ಮತ್ತು ಅವರನ್ನು ಬೆಳೆಸಬೇಕು.
ಅದು ಬಿಟ್ಟು ಸರಕಾರಗಳು ತಮ್ಮ ತೋರಿಕೆಗಾಗಿ ಅಧಿಕಾರದ ಗದ್ದುಗೆಯನ್ನು ಕೊಟ್ಟರೆ, ಈ ಅಧಿಕಾರದ ಮಾಯೆ ಕ್ರೀಡೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಡುತ್ತದಯೇ? ಹಾಗೂ ಇನ್ನಷ್ಟು ಮತ್ತಷ್ಟು ಪದಕಗಳು ನಮ್ಮ ದೇಶಕ್ಕೆ ಬರಲು ಸಾಧ್ಯವೇ? ನಾವು ನಮ್ಮ ದೇಶದ ಹೆಸರನ್ನು ಸಾಗರದಾಚೆ ಕೊಂಡಯ್ಯುವಂತ, ಉತ್ತಮ ಕ್ರೀಡಾಪಟುವನ್ನು ಕಳೆದುಕೊಂಡಂತೆ ಆಗುವುದಿಲ್ಲವೇ? ಇದಕ್ಕೆ ನಿಮ್ಮ ಅಭಿಪ್ರಾಯವನ್ನು ನಿಮ್ಮ ಕಾಮೆಂಟ್ ಮೂಲಕ ತಿಳಿಸಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಬಹಳಷ್ಟು ಮಂದಿ ನಿತ್ಯ ದೇವಸ್ಥಾನಕ್ಕೆ ಹೋಗುತ್ತಿರುತ್ತಾರೆ.ದೇವಸ್ಥಾನಕ್ಕೆ ಹೋದಾಗ ದೇವರಿಗೆ ಮಂಗಳಾರತಿ ಮಾಡುವ ಸಮಯದಲ್ಲಿ ಸಾಮಾನ್ಯವಾಗಿ ಎಲ್ಲರೂ ಘಂಟೆ ಬಾರಿಸುತ್ತಾರೆ.ಅದರಲ್ಲೂ ಚಿಕ್ಕಮಕ್ಕಳಿಗಂತೂ ಘಂಟೆ ಬಾರಿಸುವುದರಲ್ಲಿ ಎತ್ತಿದ ಕೈ.ಅದರಲ್ಲಿ ಅವರು ಒಂದು ಕೈ ಮುಂದೆನೇ ಇರ್ತಾರೆ. ಆದರೆ ಗುಡಿಯಲ್ಲಿ ಘಂಟೆ ಯಾಕೆ ಹೊಡೀತಾರೆ ಗೊತ್ತಾ..? ಗುಡಿಗೆ ಹೋದವರು ಕಡ್ಡಾಯವಾಗಿ ಘಂಟೆ ಭಾರಿಸುತ್ತಾರೆ. ಮನೆಯಲ್ಲೂ ಅಷ್ಟೇ ಪೂಜೆ ಮಾಡುತ್ತಿದ್ದಾಗ, ಆರತಿ ಬೆಳಗುತ್ತಿದ್ದಾಗ ಘಂಟೆ ಹೊಡೆಯುತ್ತಾರೆ… ದೇವಾಲಯಕ್ಕೆ ಹೋದಾಗ ಗಂಟೆ ಹೊಡೆದರೆ ಮನಸ್ಸಿಗೆ ಆಧ್ಯಾತ್ಮಿಕ ಆನಂದ ಸಿಗುವುದಷ್ಟೇ ಅಲ್ಲದೆ ಸಕಲ ಶುಭಗಳು ಸಿದ್ಧಿಸುತ್ತವೆ. ಘಂಟೆಯಲ್ಲಿ…
ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.