ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಚಿಕ್ಕವಯಸ್ಸಿನಲ್ಲೇ ಮೈಸೂರು ಅರಮನೆಯ ಬ್ಯಾಂಡ್ಸೆಟ್ನಲ್ಲಿ ಸ್ಯಾಕ್ಸೋಫೋನ್ ನುಡಿಸಿ ಎಲ್ಲರ ಹುಬ್ಬೇರಿಸಿದ್ದರು. ಸ್ಯಾಕ್ಸೋಫೋನ್ ಧ್ವನಿಗೆ ಹೆಚ್ಚು ಆಕರ್ಷಿತರಾದ ಕದ್ರಿ ಅವರು ಅದರಲ್ಲೇ ಪದವಿ ಪಡೆಯಲು ನಿರ್ಧರಿಸಿದರು. ಪಾಶ್ಚಿಮಾತ್ಯ ಸಂಗೀತ ಸಾಧನಗಳ ಮೇಲೂ ಹಿಡಿತ ಸಾಧಿಸಲು ಕದ್ರಿ ಅವರು ಸುಮಾರು 20 ವರ್ಷ ಶ್ರಮಪಟ್ಟರು, ಕೊನೆಗೆ “ಸ್ಯಾಕ್ಸೋಫೋನ್ ಚಕ್ರವರ್ತಿ” ಕೀರ್ತಿಯನ್ನು ತಮ್ಮ ಮುಡಿಗೇರಿಸಿಕೊಂಡರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಾರಿಗೆ ತಂದ ಯೋಜನೆಯೊಂದರ ಲಾಭ ಪಡೆದು ಮಧುರೈ ಮಹಿಳೆಯೊಬ್ಬಳು ಕೋಟ್ಯಾಧಿಪತಿಯಾಗಿದ್ದಾರೆ. ಅರುಲ್ಮೋಜಿ ಸರ್ವ್ನಾನ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಮುದ್ರಾ ಯೋಜನೆ ಲಾಭ ಪಡೆದು ತನ್ನದೇ ಸ್ವಂತ ವ್ಯಾಪಾರ ಶುರು ಮಾಡಿದ್ದಾರೆ. ಅರುಲ್ಮೋಜಿ ಕೇವಲ 234 ರೂಪಾಯಿಗೆ ವ್ಯಾಪಾರ ಶುರು ಮಾಡಿದ್ದರು. ಈಗ ಕಂಪನಿ ಕೋಟ್ಯಾಂತರ ರೂಪಾಯಿ ವಹಿವಾಟು ನಡೆಸುತ್ತಿದೆ. ಪ್ರಧಾನ ಮಂತ್ರಿ ಕಚೇರಿಗೆ ಥರ್ಮೋಪ್ಲೆಕ್ಸ್ ಅವಶ್ಯಕತೆಯಿದೆ ಎಂಬುದು ಸರ್ಕಾರಿ ಇ-ಮಾರ್ಕೆಟ್ಪ್ಲೇಸ್ ನಿಂದ ಅರುಲ್ಮೋಜಿಗೆ ಗೊತ್ತಾಗಿದೆ. ತಕ್ಷಣ ಅರುಲ್ಮೋಜಿ ಈ ಬಗ್ಗೆ…
ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಬ್ರಿಟಿಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದೆ. ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್ನಿಂದ ಸನ್ಮಾನಿಸಲ್ಪಡುವ ಮೊದಲ ದಕ್ಷಿಣ ಭಾರತದ ನಟ ಎನ್ನುವ ಹೆಗ್ಗಳಿಕೆಗೆ ದರ್ಶನ್ ಪಾತ್ರರಾಗಿದ್ದಾರೆ.
ಬೆಂಗಳೂರು: ಅಗಷ್ಟ್ ತಿಂಗಳ 24ಕ್ಕೆ ಅಂತ್ಯಗೊಳ್ಳಲಿದ್ದ ಕೃಷಿ ಬೆಳೆ ಸಮೀಕ್ಷೆಯನ್ನು ಸೆಪ್ಟೆಂಬರ್ ತಿಂಗಳ 24 ತನಕ ವಿಸ್ತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಕೃಷಿ ಬೆಳೆ ಸಮೀಕ್ಷೆ ಕುರಿತಂತೆ ಸುದೀರ್ಘ ಚರ್ಚೆ ನಡೆದ ಬಳಿಕ ಒಂದು ತಿಂಗಳು ಅವಧಿ ವಿಸ್ತರಿಸುವ ತೀರ್ಮಾನ ಕೈಗೊಂಡಿದೆ. ಬೆಳೆ ಸಮೀಕ್ಷೆ ವ್ಯವಸ್ಥೆ ಬಗ್ಗೆ ಮುಖ್ಯಮಂತ್ರಿ ಹಾಗೂ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದು . .ಕಳೆದ ವರ್ಷ ಕೇವಲ 3,500 ಮಂದಿ ರೈತರು ಮಾತ್ರ ನೋಂದಣಿ ಮಾಡಿದ್ದರು, ಈ ವರ್ಷ ಅಲ್ಪ ಅವಧಿಯಲ್ಲೇ…
ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..
ಬಿಗ್ಬಾಸ್ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್ಬಾಸ್ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್ನಾಗ್ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್ನಾಗ್ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್ ನಟ ತನ್ನ ಮಾರ್ಕೆಟ್ ಬಿದ್ದಾಗ ವ್ಯಾನ್ ಒಳಗೆ ಕ್ಯಾಂಟೀನ್ ಇಟ್ಟುಕೊಂಡು ಓಡಾಡುತ್ತಿದ್ದರು….
ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು: ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….