ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ ಔಷಧ ತಯಾರಿಸ ಬಹುದು.

ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.
ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.

ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.
ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.

ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.

ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.

ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಳೆದ 19 ವರ್ಷಗಳಲ್ಲಿ ಉಭಯ ತಂಡಗಳ ನಡುವೆ 128 ಏಕದಿನ ಪಂದ್ಯ ನಡೆದಿವೆ. ಆದರೆ, ಐಸಿಸಿ ಆಯೋಜನೆಯ ಏಕದಿನ ಟೂರ್ನಿಯೊಂದರ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ-ಪಾಕಿಸ್ತಾನ ತಂಡಗಳು ಫೈನಲ್ನಲ್ಲಿ ಭಾನುವಾರ ಎದುರಾಗುತ್ತಿವೆ.
ಮೂವರು ಅಪರಿಚಿತ ವ್ಯಕ್ತಿಗಳು ಸ್ಥಳೀಯ ಕ್ರಿಕೆಟಿಗನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಾಣಿಜ್ಯ ನಗರಿ ಮುಂಬೈನ ಭಂಡುಪ್ ಪ್ರದೇಶದಲ್ಲಿ ನಡೆದಿದೆ. ಗುರುವಾರ ತಡರಾತ್ರಿ ಸುಮಾರು 12 ಗಂಟೆಯಲ್ಲಿ ಈ ಘಟನೆ ನಡೆದಿದ್ದು, ಮೃತ ಕ್ರಿಕೆಟಿಗನನ್ನು ರಾಕೇಶ್ ಪನ್ವಾರ್ ಎಂದು ಗುರುತಿಸಲಾಗಿದೆ. ಮೂವರು ದುಷ್ಕರ್ಮಿಗಳು ಬೈಕಿನಲ್ಲಿ ಬಂದು ರಾಕೇಶ್ಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ತಕ್ಷಣ ಪೊಲೀಸರು ರಾಕೇಶ್ನನ್ನು ಸಮೀಪ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ…
ರಾಮನಗರ ಹೊರವಲಯದ ಮಧುರಾ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿ ಹೊಡೆದು 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯ, ಬಸ್ ಮಾಗಡಿ ರಸ್ತೆಯ ಅಕ್ಕೂರಿನಿಂದ ಬರುತ್ತಿತ್ತು. ಈ ವೇಳೆ ಚಾಲಕ ವೇಗವಾಗಿ ಬಸ್ ಚಲಾಯಿಸಿ ಏಕಾಏಕಿ ಬ್ರೇಕ್ ಹಾಕಿದ್ದಾನೆ ಇದಕ್ಕೆ ಪರಿಣಾಮ ಬಸ್ ಪಲ್ಟಿ ಹೊಡೆದಿದೆ. ಚಾಲಕನ ಅಜಾಗರೂಕತೆಯಿಂದ ಗಾರ್ಮೆಂಟ್ಸ್ ಗೆ ಸೇರಿದ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಹಿಳೆಯರಿಗೆ ಗಾಯವಾಗಿರುವ ಘಟನೆ ರಾಮನಗರ ತಾಲೂಕಿನ ಜಯಪುರ ಗ್ರಾಮದ ಬಳಿ ನಡೆದಿದೆ. ಈ ಘಟನೆಯಲ್ಲಿ ನಡೆದ ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಮಂಗಳೂರು: ರೈತನೊಬ್ಬ ಅಡಕೆ ಮರವನ್ನು ಯಂತ್ರವೊಂದರ ಸಹಾಯದಿಂದ ಹತ್ತುವ ವಿಡಿಯೋ ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಅಡಕೆ ಮರಕ್ಕೆ ಅತ್ಯಂತ ಸುಲಭವಾಗಿ ಹತ್ತಿ ಅಡಕೆ ಕೀಳುವ ಬೈಕ್ ಮಾದರಿಯ ಯಂತ್ರವೊಂದನ್ನು ಬಂಟ್ವಾಳದ ಪ್ರಗತಿಪರ ಕೃಷಿಕ ಗಣಪತಿ ಭಟ್ ಆವಿಷ್ಕರಿಸಿದ್ದು, ಇದಕ್ಕೀಗ ಮಹೀಂದ್ರಾ ಗ್ರೂಪ್ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರಿಂದಲೂ ಮೆಚ್ಚುಗೆಯಿಂದ ಟ್ವೀಟ್ ಮಾಡಿದೆ. ಸಜೀಪಮೂಡ ಗ್ರಾಮದ ಕೋಮಾಲಿ ನಿವಾಸಿ, ಗಣಪತಿ ಭಟ್ ಅವರ ಯಂತ್ರದ ಮೂಲಕ ಮಹಿಳೆಯರೂ ಮರ ಏರಲು ಸಾಧ್ಯವಾಗಿದೆ. ಯುವತಿಯೋರ್ವಳು ಮರ ಏರುತ್ತಿರುವ…
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…