ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ. ಆ ಮಟ್ಟಿಗೆ ನಮ್ಮ ಗಂಟಲು ತನ್ನ ಶಕ್ತಿ ಸಾಮರ್ಥ್ಯಗಳನ್ನು ಕಳೆದುಕೊಂಡು ಬಿಡುತ್ತದೆ. ಯೋಚನೆ ಮಾಡ ಬೇಡಿ ಮನೆಯಲ್ಲೆ ಸುಲಭ ರೀತಿಯಲ್ಲಿ ಸರಿಯಾದ ಔಷಧ ತಯಾರಿಸ ಬಹುದು.
ಗಂಟಲು ನೋವಿಗೆ ರಾಮಬಾಣ ಎನಿಸಿಕೊಂಡಿರುವ ಪರಿಹಾರ ಉಪ್ಪು ನೀರು. ಹೌದು ನೀರಿಗೆ ಸ್ವಲ್ಪ ಉಪ್ಪನ್ನು ಬೆರೆಸಿಕೊಂಡು ಅದನ್ನು ಮುಕ್ಕಳಿಸುವ ಮೂಲಕ ನಿಮ್ಮ ಗಂಟಲ ನೋವನ್ನು ನಿವಾರಿಸಿಕೊಳ್ಳಬಹುದು. ಹೇಳಿ ಕೇಳಿ ಉಪ್ಪು ಆಂಟಿಸೆಪ್ಟಿಕ್ ಗುಣಗಳನ್ನು ಹೊಂದಿರುವ ಉತ್ಪನ್ನವಾಗಿದ್ದು, ಅದು ನಿಮ್ಮ ಗಂಟಲಿನಲ್ಲಿರುವ ಸಿಂಬಳದ ಪೊರೆಯು ನಿವಾರಣೆಯಾಗಲು ಸಹಾಯ ಮಾಡುತ್ತದೆ. ಜೊತೆಗೆ ಇದು ನಿಮ್ಮ ಗಂಟಲಿನಲ್ಲಿರುವ ಕಫವು ಸಹ ನಿವಾರಣೆಯಾಗುವಂತೆ ಮಾಡುತ್ತದೆ ಮತ್ತು ಉರಿಬಾವು ನಿಮ್ಮನ್ನು ಕಾಡದಂತೆ ತಡೆಯು ತ್ತದೆ.
ಇಷ್ಟೆ ಅಲ್ಲದೆ ಇದು ನಿಮ್ಮ ಗಂಟಲ ನೋವಿಗೆ ತಕ್ಷಣದ ಪರಿಹಾರವನ್ನು ನೀಡುತ್ತದೆ. ಒಂದು ವೇಳೆ ನಿಮಗೆ ಉಪ್ಪು ಅಷ್ಟಾಗಿ ರುಚಿಸದಿದ್ದಲ್ಲಿ, ಈ ನೀರಿಗೆ ಸ್ವಲ್ಪ ಪ್ರಮಾಣದ ಜೇನು ತುಪ್ಪವನ್ನು ಬೆರೆಸಿಕೊಳ್ಳಿ. ಈ ಮಿಶ್ರಣವನ್ನು ಮುಕ್ಕಳಿಸಿ, ಆದರೆ ನುಂಗಬೇಡಿ. ಮುಕ್ಕಳಿಸಿದ ನೀರನ್ನು ಹೊರಗೆ ಉಗಿಯಿರಿ. ದಿನಕ್ಕೆ ನಾಲ್ಕೈದು ಬಾರಿ ಇದನ್ನು ಮಾಡಿದರೆ ನಿಮ್ಮ ಗಂಟಲು ನೋವು ನಿವಾರಣೆಯಾಗುತ್ತದೆ.
ಬೆಳ್ಳುಳ್ಳಿಯು ಒಂದು ಆಂಟಿ ಬ್ಯಾಕ್ಟೀರಿಯಾ ಅಂಶಗಳು ಇರುವ ಪದಾರ್ಥವಾಗಿದೆ. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣ ಗಳು ಮತ್ತು ಔ?ಂಯ ಗುಣಗಳು ಗಂಟಲು ನೋವಿಗೆ ಒಳ್ಳೆಯ ಆರಾಮವನ್ನು ನೀಡುತ್ತವೆ. ಅಲ್ಲದೆ ಇದು ಈ ನೋವನ್ನು ಬೇಗ ನಿವಾರಿಸುವ ಮನೆ ಮದ್ದು ಸಹ ಆಗಿದೆ. ಕಚ್ಛಾ ಬೆಳ್ಳುಳ್ಳಿಯನ್ನು ಪ್ರತಿದಿನ ಸೇವಿಸುವುದರಿಂದ ಅಲ್ಲಿಸಿನ್ ಎಂಬ ರಾಸಾಯನಿಕವು ಬಿಡುಗಡೆಯಾಗುತ್ತದೆ. ಇದು ಗಂಟಲಿನಲ್ಲಿ ಬೆಳೆಯುವ ಬ್ಯಾಕ್ಟೀರಿಯಾವನ್ನು ನಿವಾರಿಸಲು ಸಹಾಯ ಮಾಡಿ, ಗಂಟಲು ನೋವು ಬರದಂತೆ ತಡೆಯುತ್ತದೆ.
ಬದಲಿಯಾಗಿ, ನೀವು ಬೆಳ್ಳುಳ್ಳಿ ಎಣ್ಣೆಯನ್ನು ಸಹ ಬಳಸಬಹುದು. ಒಂದು ಲೋಟ ನೀರಿಗೆ ನಾಲ್ಕನೇ ಒಂದು ಭಾಗ ಬೆಳ್ಳುಳ್ಳಿ ರಸವನ್ನು ಬೆರೆಸಿಕೊಳ್ಳಿ. ಇದನ್ನು ದಿನಕ್ಕೊಮ್ಮೆ ಬಾಯಿ ಮುಕ್ಕಳಿಸಲು ಬಳಸಿ. ಅಲ್ಲದೆ ಇದರ ಜೊತೆಗೆ ಆಹಾರದಲ್ಲಿ ದೊರೆಯುವ ಬೆಳ್ಳುಳ್ಳಿಯನ್ನು ಸಹ ಸೇವಿಸಿ. ಒಂದು ವೇಳೆ ನಿಮಗೆ ಇದರ ರುಚಿ ಹಿಡಿಸಲಿಲ್ಲವಾದಲ್ಲಿ, ಬೆಳ್ಳುಳ್ಳಿಯ ಮಾತ್ರೆಗಳನ್ನು ಸೇವಿಸಿ.
ಚಕ್ಕೆಯನ್ನು ಸಹ ಗಂಟಲು ನೋವು ನಿವಾರಿಸಿಕೊಳ್ಳಲು ಬಳಸಬಹುದು. ಒಂದು ಟೀ ಸ್ಪೂನ್ ಚಕ್ಕೆಯ ಪುಡಿಗೆ, ಕರಿ ಮೆಣಸಿನ ಪುಡಿಯನ್ನು ಸೇರಿಸಿ, ಒಂದು ಲೋಟ ಬಿಸಿ ನೀರಿನಲ್ಲಿ ಬೆರೆಸಿಕೊಳ್ಳಿ. ಇದಕ್ಕೆ ನಿಮಗೆ ಅಗತ್ಯವಾದಲ್ಲಿ ಏಲಕ್ಕಿಯನ್ನು ಸಹ ಬೆರೆಸಿಕೊಳ್ಳಿ. ಈ ಎಲ್ಲಾ ಮಿಶ್ರಣವನ್ನು ಚೆನ್ನಾಗಿ ಬೆರೆಸಿ, ನಂತರ ಶೋಧಿಸಿಕೊಳ್ಳಿ. ಈ ಮಿಶ್ರಣವನ್ನು ದಿನಕ್ಕೆ ಎರಡು ಮೂರು ಬಾರಿ ಬಾಯಿ ಮುಕ್ಕಳಿಸಲು ಬಳಸಿ. ಮತ್ತೊಂದು ಆಯ್ಕೆ ಎಂದರೆ ಕೆಲವೊಂದು ಹನಿ ಚಕ್ಕೆ ಎಣ್ಣೆಯನ್ನು ಮತ್ತು ಒಂದು ಟೀ ಸ್ಪೂನ್ ಜೇನುತುಪ್ಪವನ್ನು ಬೆರೆಸಿಕೊಳ್ಳಿ ಇದನ್ನು ದಿನಕ್ಕೆ ಎರಡು ಬಾರಿ ಸೇವಿಸಿ, ಗಂಟಲು ನೋವು ಮತ್ತು ಉರಿಬಾವುನಿಂದ ವಿಮುಕ್ತಿಯನ್ನು ಪಡೆಯಿರಿ.
ಗಂಟಲು ನೋವಿನಿಂದ ಗುಣಮುಖರಾಗಲು ಲಿಂಬೆ ಹಣ್ಣನ್ನು ಬಳಸಬಹುದು. ಇದು ನಿಮ್ಮ ಗಂಟಲಿನಲ್ಲಿರುವ ಸಿಂಬಳವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಲಿಂಬೆರಸ ವನ್ನು ಬಿಸಿ ನೀರಿಗೆ ಬೆರೆಸಿ, ಅದಕ್ಕೆ ಸ್ವಲ್ಪ ಜೇನು ತುಪ್ಪವನ್ನು ಸೇರಿಸಿ ಸೇವಿಸಿ. ಒಂದು ಕಪ್ ಬಿಸಿ ನೀರಿಗೆ ಒಂದು ಟೀ ಸ್ಪೂನ್ ಜೇನು ತುಪ್ಪ ಮತ್ತು ಅದಕ್ಕೆ ಅರ್ಧ ಹೋಳು ಲಿಂಬೆ ಹಣ್ಣಿನ ರಸದ ಅನುಪಾತದಲ್ಲಿ ಇದನ್ನು ತಯಾರಿಸಿಕೊಳ್ಳಿ.
ಚಳಿಗಾಲ ಹತ್ತಿರವಾಗುತ್ತಿದ್ದು, ವಾತಾವರಣದಲ್ಲಿ ಆಗುತ್ತಿರುವ ಬದಲಾವಣೆ ಗಳಿಂದಾಗಿ ನಮ್ಮ ದೇಹದಲ್ಲಿ ಆರೋಗ್ಯವು ಸಹ ಬದಲಾಗು ತ್ತದೆ. ಅದರಲ್ಲಿ ಶೀತ, ಗಂಟಲು ನೋವು, ಕೆಮ್ಮು ಮತ್ತು ಒಮ್ಮೊಮ್ಮೆ ಜ್ವರವು ಸಹ ನಮ್ಮನ್ನು ಭಾದಿಸಬಹುದು ಎಚ್ಚರ ವಹಿಸಿ ಮನೆ ಮದ್ದು ತಯಾರಿಸಿ ತಡೆಗಟ್ಟಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ ಪ್ರಾಜೆಕ್ಟ್ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್ ಸೈನ್ಸ್, ಇಲೆಕ್ಟ್ರಾನಿಕ್ಸ್ ಕಂಮ್ಯೂನಿಕೇಷನ್ , ಇಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಂಮ್ಯೂನಿಕೇಷನ್ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್ ಶುಲ್ಕವನ್ನು ಆನ್ಲೈನ್ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…
ಕೋನೆಗೂ ಕಪ್ಪು ಗೆದ್ದ ಬೆಂಗಳೂರು ಹೌದು VIVO Pro Kabaddi Season 6 ರಲ್ಲಿ ಕೋನೆಗೂ ಕಪ್ಪು ನಮ್ದೇ, ಇಂದು ನಡೆದ prokabaddi ಗುಜರಾತ್ ವಿರುದ್ಧ 5 ಅಂಕ 38-33 ರಲ್ಲಿ ಗೆದ್ದಿದೆ. ಪವನ್ ಕುಮಾರ್ ರವರಿಂದ ವಿರೋಚಿತ ಆಟ Man of the match ಅವರಿಗೆ ಸಿಕ್ಕಿದೆ. ಮ್ಯಾನ್ of the series 24match 282pts, 11.8 avarege ನಲ್ಲಿ 15 ಲಕ್ಷ ರೂ ಗೆದ್ದರು. ಕಪ್ಪು ಗೆದ್ದ ಬೆಂಗಳೂರು bulls ಇಂದ ಎಲ್ಲ ಜನ…
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಅಕ್ಟೋಬರ್ ನಲ್ಲಿ ಹಬ್ಬದ ಕಾರಣ ರಜೆ ಇರುವುದರಿಂದ ಬ್ಯಾಂಕ್ ವಹಿವಾಟುಗಳಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಗಳಿಗೆ ಬರೋಬ್ಬರಿ 11 ದಿನ ರಜೆ ಇದೆ. ದಸರಾ ನಂತರ ದೀಪಾವಳಿ ಇರುವುದರಿಂದ ಬ್ಯಾಂಕ್ 11 ದಿನ ಕೆಲಸ ಮಾಡುವುದಿಲ್ಲ. ಆರ್.ಬಿ.ಐ. ವತಿಯಿಂದ ಬ್ಯಾಂಕ್ ರಜಾ ದಿನದ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2 ರಂದು ಗಾಂಧಿ ಜಯಂತಿ. ಅಕ್ಟೋಬರ್ 6 ಭಾನುವಾರ. ಅಕ್ಟೋಬರ್ 7 ನವಮಿ. ಅಕ್ಟೋಬರ್ 8 ರಂದು ದಶಮಿ. ಹಾಗಾಗಿ 3 ದಿನ…
ಮೌಢ್ಯಾಚರಣೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕೆಂಬ ಸರ್ಕಾರದ ಪ್ರಯತ್ನ ವಿಫಲವಾಯಿತು. ಆದರೆ ಕೋಟೆನಾಡಿನಲ್ಲಿರುವ ಐತಿಹಾಸಿಕ ಹಿನ್ನೆಲೆಯ ಮುರುಘಾ ಮಠ ಮಾತ್ರ ಮೌಢ್ಯ ನಿಷೇಧದ ವಿಚಾರದಲ್ಲಿ ತನ್ನ ಗುರಿಯನ್ನು ಮೊಟಕುಗೊಳಿಸದೇ ಆಷಾಢದಲ್ಲೂ ಸಾಮೂಹಿಕ ವಿವಾಹ ನೆರವೇರಿಸುವ ಮೂಲಕ ಮೌಢ್ಯಾಚರಣೆ ವಿರುದ್ಧ ಸಮರ ಸಾರಿದೆ. ಮುರುಘಾ ಮಠದ ಆಶ್ರಯದಲ್ಲಿ ಅಲ್ಲಮಪ್ರಭು ಭವನದಲ್ಲಿ ಆಯೋಜಿಸಿದ್ದ 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿದೆ. ಆಷಾಢ ಶುಕ್ರವಾರವಾದರೂ ಸಹ ಮುರುಘಾಮಠ ನುಡಿದಂತೆ ನಡೆಯುತ್ತಿದೆ. ಮೌಢ್ಯಾಚರಣೆ ನಿಷೇಧಕ್ಕಾಗಿ ಟೊಂಕಕಟ್ಟಿ ನಿಂತಿರುವ ಡಾ. ಶಿವಮೂರ್ತಿ ಮುರುಘಾ ಶರಣರು…