ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಗೂಗಲ್ ಕಂಪನಿಯ ಸ್ಥಾಪಕ ಲ್ಯಾರಿ ಪೇಜ್ ಅವರು ಸುಂದರ್ ಪಿಚೈ ಅವರನ್ನು ನೂತನ ಸಿಇಒ ಆಗಿ ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದ್ದಾರೆ. ಹೊಸ ಸಿಇಒ ನೇಮಕ ಮಾಡುವ ಜೊತೆಗೆ ಕಂಪನಿಯು ಇಂದು ಹೊಸ ಸಹ ಸಂಸ್ಥೆಯಾದ ‘ಆಲ್ಫಬೆಟ್’ ಕಂಪನಿಯನ್ನು ಆರಂಭಿಸಿದೆ.
ಸುಂದರ್ ಪಿಚೈ ಅವರ ಬಗ್ಗೆ ಕೆಲ ಮಾಹಿತಿ ಇಲ್ಲಿದೆ:-
* ಸುಂದರ್ ಪಿಚೈ ಅವರು ಭಾರತದ ತಮಿಳುನಾಡಿನ ಚೆನ್ನೈನಲ್ಲಿ 1972ರಲ್ಲಿ ಜನಿಸಿದರು. ಇಂದಿಗೂ ಭಾರತೀಯ ಪೌರತ್ವ ಉಳಿಸಿಕೊಂಡಿದ್ದಾರೆ.
* ಸುಂದರ್ ಪಿಚೈ ಅವರ ಪೂರ್ತಿ ಹೆಸರು ಪಿಚೈ ಸುಂದರಾಜನ್, ಜನಪ್ರಿಯ ಹೆಸರು ಸುಂದರ್ ಪಿಚೈ.
* 2004ರಲ್ಲಿ ಗೂಗಲ್ ಸೇರಿದ ಸುಂದರ್ ಅವರು ಮೊದಲಿಗೆ ಪ್ರಾಡೆಕ್ಟ್ ಹಾಗೂ ಇನ್ನೋವೇಷನ್ ಅಧಿಕಾರಿಯಾಗಿದ್ದರು.
* ಪೆನ್ನಿಸಿಲ್ವೆನಿಯಾದ ವಿಶ್ವವಿದ್ಯಾಲಯದಿಂದ ಸೈಬಲ್ ಸ್ಕಾಲರ್ ಎನಿಸಿಕೊಂಡಿದ್ದಾರೆ.
* ಖರಗ್ ಪುರದ ಐಐಟಿಯಿಂದ ಮೆಟರ್ಲರ್ಜಿ ವಿಷಯದಲ್ಲಿ ಪದವಿ ಪಡೆದುಕೊಂಡ ಪಿಚೈ ಅವರು ಆ ಬ್ಯಾಚಿನ ಬೆಳ್ಳಿ ಪದಕ ವಿಜೇತರಾಗಿದ್ದಾರೆ.
* ಅಮೆರಿಕದ ವಾರ್ಟನ್ ವಿಶ್ವವಿದ್ಯಾಲಯ ಹಾಗೂ ಸ್ಟಾನ್ ಫರ್ಡ್ ವಿಶ್ವವಿದ್ಯಾಲಯಿಂದ ಕ್ರಮವಾಗಿ ಎಂಬಿಎ ಹಾಗೂ ಎಂಎಸ್ ಪಡೆದುಕೊಂಡಿದ್ದಾರೆ.
* ಸದ್ಯ ಗೂಗಲ್ ನ ಆಪ್ಸ್, ಕ್ರೋಮ್ ಹಾಗೂ ಆಂಡ್ರಾಯ್ಡ್ ವಿಭಾಗದ ಉಪಾಧ್ಯಕ್ಷರಾಗಿದ್ದರು.
* ಗೂಗಲ್ ಡ್ರೈವ್, ಜೀಮೇಲ್ ಅಪ್ಲಿಕೇಷನ್, ಗೂಗಲ್ ವಿಡಿಯೋ ಕೊಡೆಕ್ ಎಲ್ಲದರ ಸೃಷ್ಟಿಗೆ ಬಹುತೇಕ ಸುಂದರ್ ಪಿಚೈ ಅವರೇ ಕಾರಣ.
* ಆದರೆ, ಪಿಚೈ ಅವರನ್ನು ಗೂಗಲ್ ನ ಕ್ರೋಮ್ ಆಪರೇಟಿಂಗ್ ಸಿಸ್ಟಮ್ ಹಾಗೂ ಆಂಡ್ರಾಯ್ಡ್ ಅಪ್ಲಿಕೇಷನ್ ನಿರ್ಮಾತೃವಾಗೇ ಗುರುತಿಸಲಾಗಿದೆ.
* ಟ್ವಿಟ್ಟರ್ ಸಂಸ್ಥೆ 2011ರಲ್ಲಿ ಪಿಚೈ ಅವರನ್ನು ತಮ್ಮ ಸಂಸ್ಥೆಗೆ ಸೇರಿಸಿಕೊಳ್ಳಲು ಯತ್ನಿಸಿತ್ತು. ಅದರೆ, ಗೂಗಲ್ ಅವರಿಗೆ 50 ಮಿಲಿಯನ್ ಡಾಲರ್ ಹೆಚ್ಚಿಗೆ ಮೊತ್ತ ನೀಡಿ ಗೂಗಲ್ ನಲ್ಲೇ ಉಳಿಸಿಕೊಂಡಿತ್ತು. ( ಒನ್ ಇಂಡಿಯಾ ಸುದ್ದಿ)
ಖಾಲಿ ಜೇಬಿನಲ್ಲಿ ಹುಟ್ಟಿದ ಗೂಗಲ್ ಸಿಇಒ ಸುಂದರ್ ಪಿಚೈ ಪ್ರೇಮ ಕಥೆ:-
ಅವರಿಬ್ಬರ ಪ್ರೀತಿ ಹುಟ್ಟಿಕೊಂಡಿದ್ದು ಕಾಲೇಜು ದಿನಗಳಲ್ಲಿ. ಆಕೆ ಹೆಸರು ಅಂಜಲಿ; ಆತನ ಹೆಸರು ಸುಂದರ್ ಪಿಚೈ; ಸದ್ಯ ಗೂಗಲ್ ಸಂಸ್ಥೆಯ ಸಿಇಒ. ಅವರ ಪ್ರತಿ ದಿನದ ಸಂಬಳವೇ 3.5 ಕೋಟಿ.
ಆದರೆ ಅಂಜಲಿ ಪ್ರೇಮದ ಬಲೆಯಲ್ಲಿ ಬಿದ್ದಾಗ ಪಿಚೈ ಜೇಬಿನಲ್ಲಿ ಏನೂ ಇರಲಿಲ್ಲ; ಖಾಲಿ ಜೇಬು. ಅವತ್ತಿಗೆ ಚೆನ್ನೈ ಅಪಾರ್ಟ್ಮೆಂಟ್ ಒಂದರಲ್ಲಿ ಪಿಚೈ ವಾಸವಾಗಿದ್ದರು. ಕಾರಿರಲಿಲ್ಲ, ಮನೆಯಲ್ಲೊಂದು ಟಿವಿಯೂ ಇರಲಿಲ್ಲ.
ಅಲ್ಲಿಂದ ಐಐಟಿ ಖರಗ್ ಪುರದಲ್ಲಿ ಎಂಜಿನಿಯರಿಂಗ್ ಅಭ್ಯಾಸ ಮಾಡಲು ಇಬ್ಬರೂ ತೆರಳಿದರು. ಅಲ್ಲಿ ಡೇಟಿಂಗ್ ಆರಂಭಿಸಿದರು. ಜೇಬಿನಲ್ಲಿ ಕಾಸಿಲ್ಲದಿದ್ದರೇನಂತೆ ಹೃದಯ ಶ್ರೀಮಂತವಾಗಿತ್ತು. ಪಿಚೈ ಅಂಜಲಿ ಮುಂದೆ ಮದುವೆ ಪ್ರಸ್ತಾಪ ಇಟ್ಟರು. ಅಂಜಲಿಯೂ ಅಷ್ಟೆ ಅತ್ತಿತ್ತ ನೋಡದೆ ಮದುವೆಗೆ ಒಪ್ಪಿಗೆ ನೀಡಿಯೇ ಬಟ್ಟರು. ಅಂಜಲಿಗೆ ಪಿಚೈ ಬಡತನದ ಬಗ್ಗೆ ಗೊತ್ತಿರಲಿಲ್ಲವೆಂದಲ್ಲ. ಸುಂದರ್ ಮನೆಯ ಎಲ್ಲಾ ಪರಿಸ್ಥಿತಿಯೂ ಅಂಜಲಿಗೆ ಗೊತ್ತಿತ್ತು. ಹೀಗಿದ್ದೂ ಮದುವೆಗೆ ಒಪ್ಪಿಕೊಂಡರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ಬೆಳೆ ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸರ್ಕಾರದಿಂದ ಬಿಗ್ ಶಾಕ್ ನೀಡಿದ್ದು, ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಬ್ರೇಕ್ ಹಾಕಲಾಗಿದೆ. ಸಂಪನ್ಮೂಲ ಕೊರತೆ ಕಾರಣದಿಂದ ರೈತರ ಸಾಲ ಮನ್ನಾ ಯೋಜನೆ ಅನುಷ್ಠಾನಕ್ಕೆ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿದೆ ಎನ್ನಲಾಗಿದ್ದು, ಇದರಿಂದಾಗಿ ಸಹಕಾರಿ ಬ್ಯಾಂಕುಗಳಿಗೆ ಸಂಕಷ್ಟ ಎದುರಾಗಿದೆ. ಪರಿಣಾಮ ರೈತರು ಹೊಸದಾಗಿ ಬೆಳೆ ಸಾಲ ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ. ಸರ್ಕಾರದ ಸೂಚನೆ ಮೇರೆಗೆ ರೈತರ ಸಾಲ ಮನ್ನಾ ಯೋಜನೆಯಡಿ ಮರುಪಾವತಿ ಮೊತ್ತ ಬಿಡುಗಡೆಯನ್ನು ಹಣಕಾಸು ಇಲಾಖೆ ತಡೆಹಿಡಿದಿದೆ. ಸಹಕಾರ…
ನಿರುದ್ಯೋಗ ಸಮಸ್ಯೆ ನಿವಾರಿಸುವ ಸಲುವಾಗಿ ಮೈ ಜಾಬ್ ಆ್ಯಪ್ ಬಿಡುಗಡೆಗೊಳಿಸಲಾಯಿತು. ಉದ್ಯೋಗಕ್ಕಾಗಿ ಯುವಜನರು -ಕರ್ನಾಟಕ ವತಿಯಿಂದ ಬಿಡುಗಡೆಗೊಳಿಸಲಾಗಿರುವ ಈ ಆ್ಯಪ್ನಲ್ಲಿ ಉದ್ಯೋಗ ಕುರಿತು ಮಾಹಿತಿ ನೆರವು ಅರಿವು ನೀಡಲಾಗುತ್ತದೆ.
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…
ಲೋಕಸಭಾ ಚುನಾವಣೆಯವರೆಗೆ ತಣ್ಣಗಿದ್ದ ಆಪರೇಷನ್ ಕಮಲ ವಿಚಾರ ಮತದಾನ ಮುಗಿದ ಬಳಿಕ ತರೆಮರೆಯಲ್ಲಿ ಆರಂಭವಾಗಿದೆ ಎನ್ನಲಾಗಿದ್ದು, ಈಗ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ಮಾತಿನ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಅವರಿಗೆ ಆತಂಕ ಶುರುವಾಗಿದೆ ಎನ್ನಲಾಗಿದ್ದು ಹೀಗಾಗಿ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಭಾನುವಾರ ಸಂಜೆ ಖಾಸಗಿ ಹೋಟೆಲ್ನಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ನಡೆಯಲಿರುವ ಮೊದಲ ಜೆಡಿಎಸ್ ಶಾಸಕಾಂಗ ಸಭೆ ಇದಾಗಿದೆ….
ಸದ್ಯ ರಾಜ್ಯ ರಾಜಕೀಯದ ಹಾಟ್ ಸ್ಪಾಟ್ ಆಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಯ ರಾಜಕೀಯ ಚಟುವಟಿಕೆಗಳು ಬಿರುಸುಗೊಳ್ಳತೊಡಗಿವೆ. ಸುಮಲತಾ ಅಂಬರೀಷ್ ಮಂಡ್ಯ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಈಗಾಗಲೇ ತಿಳಿಸಿದ್ದು, ಬಿರುಸಿನ ಓಡಾಟ ನಡೆಸಿದ್ದಾರೆ. ಪುತ್ರ ನಿಖಿಲ್ ಕುಮಾರ್ ಅವರನ್ನು ಮಂಡ್ಯದಿಂದ ಕಣಕ್ಕಿಳಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮುಂದಾಗಿದ್ದು ಪೂರ್ವ ತಯಾರಿ ನಡೆಸಿದ್ದಾರೆ. ಈ ಚುನಾವಣೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ಅವರ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. ಚುನಾವಣೆ ಘೋಷಣೆಗೂ ಮೊದಲೇ ಮಂಡ್ಯದಲ್ಲಿ ರಾಜಕೀಯ…