inspirational, ಆರೋಗ್ಯ

ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಎಷ್ಟು ಉಪಯೋಗಕಾರಿ ಗೊತ್ತಾ..?ತಿಳಿಯಲು ಈ ಲೇಖನ ಓದಿ…

422

ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್‌ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.

ಗೆಣಸು ನಮ್ಮ ಶರೀರದ ಆಂತರಿಕ ಅಂಗಾಂಗಗಳಿಗೆ ಆಗುವ ಆಕ್ಸಿಡೇಟಿವ್ ಹಾನಿಯನ್ನು ಕಡಿಮೆ ಮಾಡುವ ಸ್ಪೋರಾಮಿನ್ ಪ್ರೋಟಿನ್‌ಗಳನ್ನು ಉತ್ಪಾದಿಸುವ ವಿಶಿಷ್ಟ ಸಾಮರ್ಥ್ಯವನ್ನು ಹೊಂದಿದೆ. ಗೆಣಸಿನ ಈ ಆರೋಗ್ಯಲಾಭಗಳು ಗೊತ್ತಾದರೆ ನೀವು ಖಂಡಿತ ನಿಮ್ಮ ಆಹಾರದಲ್ಲಿ ಅದನ್ನೂ ಸೇರಿಸಿಕೊಳ್ಳುತ್ತೀರಿ.

1.ಗೆಣಸು ಉತ್ತಮ ಉರಿಯೂತ ನಿವಾರಕ:-

ಗೆಣಸು ತನ್ನ ಪ್ರಬಲ ಉರಿಯೂತ ನಿವಾರಕ ಗುಣಕ್ಕಾಗಿ ಹೆಸರಾಗಿರುವ ಆ್ಯಂಥೊಸೈನಿನ್ ಅನ್ನು ಒಳಗೊಂಡಿದೆ. ಇದು ಅಂಗಾಂಗಗಳ ಉರಿಯೂತವನ್ನು ತಗ್ಗಿಸಿ ಅವುಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ. ಗೆಣಸಿನಲ್ಲಿರುವ ಫೈಬ್ರಿನೋಜೆನ್ ರಕ್ತ ಹೆಪ್ಪುಗಟ್ಟಲು ನೆರವಾಗುತ್ತದೆ.

2.ವಯಸ್ಸಾಗುವಿಕೆಯ ಪರಿಣಾಮಗಳ ವಿರುದ್ಧ ರಕ್ಷಣೆ:-

ಗೆಣಸಿನಲ್ಲಿ ಕ್ಯಾರೊಟೆನಾಯ್ಡಾ ಮತ್ತು ಬಿಟಾ-ಕ್ಯಾರೊಟಿನ್ ಅಧಿಕ ಪ್ರಮಾಣದಲ್ಲಿದ್ದು, ಅವು ಶರೀರದಲ್ಲಿ ವಿಟಾಮಿನ್ ಎ ತಯಾರಿಕೆಗೆ ನೆರವಾಗುವ ಮೂಲಕ ಕಣ್ಣುಗಳ ದೃಷ್ಟಿಯನ್ನು ಮತ್ತು ಶರೀರದ ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತವೆ. ಪ್ರಬಲ ಉತ್ಕರ್ಷಣ ನಿರೋಧಕಗಳಾಗಿಯೂ ಕೆಲಸ ಮಾಡುವ ಅವು ನಮ್ಮ ಶರೀರದಲ್ಲಿ ಫ್ರೀ ರ್ಯಾಡಿಕಲ್‌ಗಳ ಪರಿಣಾಮವನ್ನು ಕಡಿಮೆ ಮಾಡುತ್ತವೆ ಮತ್ತು ವಯಸ್ಸಾಗುತ್ತಿರುವುದರ ಲಕ್ಷಣಗಳನ್ನು ತಗ್ಗಿಸುತ್ತವೆ.

3.ರೋಗ ನಿರೋಧಕ ಶಕ್ತಿಯನ್ನು ಬೆಂಬಲಿಸುತ್ತದೆ:-

ನಮ್ಮ ಶರೀರಕ್ಕೆ ಅತ್ಯಗತ್ಯ ಖನಿಜವಾಗಿರುವ ಕಬ್ಬಿಣ ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿದೆ . ಹೀಗಾಗಿ ಅದು ನಮ್ಮ ಶರೀರದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸುವ ಕೋಶಗಳ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಮ್ಮ ನಿರೋಧಕ ಶಕ್ತಿಯ ಪ್ರಮುಖ ಭಾಗವಾಗಿರುವ ಬಿಳಿಯ ರಕ್ತಕಣಗಳ ಉತ್ಪಾದನೆಯಲ್ಲಿಯೂ ಅದು ನೆರವಾಗುತ್ತದೆ.

 

4.ಹೃದಯದ ಆರೋಗ್ಯಕ್ಕೆ ಒಳ್ಳೆಯದು:-

ಗೆಣಸಿನಲ್ಲಿ ಅಧಿಕ ಪ್ರಮಾಣದಲ್ಲಿರುವ ಪೊಟ್ಯಾಷಿಯಂ ಹೃದಯ ಬಡಿತವನ್ನು ಕ್ರಮಬದ್ಧಗೊಳಿಸಲು ನೆರವಾಗುತ್ತದೆ. ನಮ್ಮ ಶರೀರದಲ್ಲಿನ ಸ್ನಾಯುಗಳು ಮತ್ತು ನರಗಳ ಕಾರ್ಯ ನಿರ್ವಹಣೆಯನ್ನು ಉತ್ತಮಗೊಳಿಸುವ ಜೊತೆಗೆ ಗಾಯದಿಂದ ಹಾನಿಗೊಳಗಾದ ಸ್ನಾಯುಗಳು ಬೇಗನೇ ಚೇತರಿಸಿಕೊಳ್ಳುವಂತೆ ಮಾಡುತ್ತದೆ. ಗೆಣಸಿನಲ್ಲಿರುವ ಮ್ಯಾಗ್ನೀಷಿಯಂ ಆರೋಗ್ಯಕರ ರಕ್ತನಾಳಗಳು ಮತ್ತು ಹೃದಯದ ಸ್ನಾಯುಗಳಿಗೆ ಅಗತ್ಯವಾಗಿದೆ.

5.ಮೂಳೆಗಳನ್ನು ಆರೋಗ್ಯಯುತವಾಗಿಸುತ್ತದೆ:-

ವಿಟಾಮಿನ್ ಡಿ ಸಮೃದ್ಧವಾಗಿರುವ ಗೆಣಸು ಮೂಳೆಗಳನ್ನು ಸದೃಢಗೊಳಿಸುವಲ್ಲಿ ನೆರವಾಗುತ್ತದೆ. ಆಹಾರದ ಮೂಲಕ ದೊರೆಯುವ ಕ್ಯಾಲ್ಶಿಯಂ ಅನ್ನು ಸಂಸ್ಕರಿಸಲು ನಮ್ಮ ಶರೀರಕ್ಕೆ ವಿಟಾಮಿನ್ ಡಿ ಅಗತ್ಯವಾಗಿದೆ ಮತ್ತು ಅದು ಗೆಣಸಿನಲ್ಲಿದೆ.

6.ಚರ್ಮ ಮತ್ತು ತಲೆಗೂದಲಿನ ಆರೋಗ್ಯಕ್ಕೆ ಸಹಕಾರಿ:-

ಗೆಣಸಿನಲ್ಲಿಯ ಕೆಲವು ಸಂಯುಕ್ತಗಳು ಚರ್ಮದ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸುವ ಮೂಲಕ ವಯಸ್ಸಾಗುತ್ತಿರುವ ಲಕ್ಷಣಗಳನ್ನು ದೂರಮಾಡುತ್ತವೆ. ಚರ್ಮದಲ್ಲಿಯ ಕಪ್ಪುಕಲೆಗಳನ್ನೂ ಅವು ನಿವಾರಿಸುತ್ತವೆ. ದಪ್ಪ ತಲೆಗೂದಲಿಗಾಗಿ ಮತ್ತು ತಲೆಗೂದಲಿನ ಬೆಳವಣಿಗೆಗಾಗಿ ಶತಮಾನಗಳಿಂದಲೂ ಗೆಣಸು ಬಳಕೆಯಾಗುತ್ತಿದೆ.

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಅನುಶ್ರೀಗೆ ಮರೆಯಲಾರದ ಗಿಫ್ಟ್ ಕೊಟ್ಟ ಹನುಮಂತಪ್ಪ..ಸಾರಿ ಕೇಳಿದ ಅನುಶ್ರೀ!

    ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…

  • ದೇಶ-ವಿದೇಶ

    ಅಮೇರಿಕಾವನ್ನು ಧ್ವಂಸ ಮಾಡುವುದಾಗಿ, ಬಹಿರಂಗವಾಗಿ ಸವಾಲು ಹಾಕಿದ ಈ ಸರ್ವಾಧಿಕಾರಿ!

    ಉತ್ತರ ಕೊರಿಯಾ ಎರಡನೇ ಬಾರಿಗೆ ಅಂತರ ಖಂಡಾತರ ಕ್ಷಿಪಣಿ ICBM (ಇಂಟರ್ ಕಾಂಟಿನೆಂಟಲ್ ಬ್ಯಾಲಿಸ್ಟಿಕ್ ಮಿಸೈಲ್-ಐಸಿಬಿಎಂ) ಪ್ರಯೋಗ ಮಾಡಿದ್ದು, ಇದೆ ಸಮಯದಲ್ಲಿ ಉತ್ತರ ಕೊರಿಯಾದ ಅಧ್ಯಕ್ಷ ಕಿಮ್ ಜಾಂಗ್ ಉನ್ ಸದ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • ಆರೋಗ್ಯ

    ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತೀರಾ! ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ.

    ಸಾಮಾನ್ಯವಾಗಿ ಪಪ್ಪಾಯಿ ಹಣ್ಣು ತಿಂದು ಅದರ ಬೀಜಗಳನ್ನು ಎಸೆಯುತ್ತಾರೆ. ಆದರೆ ಸಂಶೋಧನೆಯೊಂದು ಕೇವಲ ಪಪ್ಪಾಯಿ ಹಣ್ಣು ಮಾತ್ರವಲ್ಲ ಅದರ ಬೀಜಗಳು ಕೂಡ ಆರೋಗ್ಯಕರ ಅಂಶವನ್ನು ಹೊಂದಿದೆ. ಅದನ್ನು ಸೇವಿಸಿದರೆ ಆರೋಗ್ಯಕ್ಕೆ ಒಳ್ಳೆದು ಎನ್ನುವುದನ್ನು ತಿಳಿಸಿದೆ. ಪಪ್ಪಾಯಿ ಬೀಜಗಳ ಉಪಯೋಗವೇನು? 1. ಕ್ಯಾನ್ಸರ್ಪಪ್ಪಾಯಿ ಬೀಜಗಳು ಆ್ಯಂಟಿ ಕ್ಯಾನ್ಸರ್ ಅಂಶಗಳನ್ನು ತನ್ನಲ್ಲಿ ಅಡಗಿಸಿಟ್ಟುಕೊಂಡಿದೆ. ಹೀಗಾಗಿ ಪಪ್ಪಾಯಿ ಬೀಜಗಳು ಕ್ಯಾನ್ಸರ್ ಕೋಶಗಳು ಮತ್ತು ಗೆಡ್ಡೆಗಳ ಬೆಳವಣಿಗೆಯನ್ನು ತಡೆಯುವ ಅಂಶವನ್ನು ಹೊಂದಿದೆ. 2. ಹೊಟ್ಟೆನೋವು ಕಡಿಮೆ ಮಾಡುತ್ತದೆಹೊಟ್ಟೆನೋವಿನಿಂದ ಬಳಲುತ್ತಿರುವವರು ದಿನಕ್ಕೆ 3 ಬಾರಿ…

  • ಆಧ್ಯಾತ್ಮ

    ಮಹಿಳೆಯರು ತೆಂಗಿನ ಕಾಯಿ ಒಡೆಯಬಾರದು ಏಕೆ ಗೊತ್ತಾ?ಇಲ್ಲಿದೆ ನೋಡಿ ಕಾರಣ…

    ಹಿಂದೂ ಸಂಸ್ಕೃತಿಯಲ್ಲಿ ಕೆಲವೊಂದು ಕೆಲಸಗಳನ್ನು ಮಹಿಳೆಯರು ಮಾಡುವಂತಿಲ್ಲ. ಇದಕ್ಕೆ ಸಾಕಷ್ಟು ಬಾರಿ ವಿರೋಧವೂ ವ್ಯಕ್ತವಾಗುತ್ತದೆ. ತಲೆ-ಬುಡವಿಲ್ಲದೆ ಶಾಸ್ತ್ರಗಳನ್ನು ಮಾಡ್ತಾರೆಂದು ಕೆಲವರು ಆರೋಪ ಮಾಡ್ತಾರೆ. ಆದ್ರೆ ಹಿಂದೂ ಸಂಸ್ಕೃತಿಯಲ್ಲಿ ಅದಕ್ಕೆ ಸೂಕ್ತ ಕಾರಣಗಳನ್ನೂ ಹೇಳಲಾಗಿದೆ. ಮಹಿಳೆಯರು ಮಾಡಬಾರದ ಕೆಲಸಗಳಲ್ಲಿ ತೆಂಗಿನಕಾಯಿ ಒಡೆಯುವುದು ಒಂದು. ಹೌದು, ಹಿಂದೂ ಸಂಸ್ಕೃತಿ ಪ್ರಕಾರ ತೆಂಗಿನ ಕಾಯಿಯನ್ನು ಮಹಿಳೆಯರು ಒಡೆಯಬಾರದು. ಹಿಂದೂ ಧರ್ಮದ ಪ್ರಕಾರ ತೆಂಗಿನ ಕಾಯಿ ಪವಿತ್ರವೆಂದು ಪರಿಗಣಿಸಲಾಗಿದೆ. ಶುಭ ಸಮಾರಂಭಗಳಲ್ಲಿ ತೆಂಗಿನ ಕಾಯಿಯನ್ನು ಬಳಸಲಾಗುತ್ತದೆ. ಯಾವುದೇ ಹೊಸ ಕೆಲಸ ಆರಂಭಿಸುವಾಗ ತೆಂಗಿನ…

  • ಜ್ಯೋತಿಷ್ಯ

    ಹೊಸ ವರ್ಷ ಆ ಮಹಾದೇವನ ಕೃಪೆ ನಿಮ್ಮ ಮೇಲೆ ಆಗಬೇಕೆಂದ್ರೆ ತಪ್ಪದೇ ಹೀಗೆ ಮಾಡಿ…

    ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…