govt, modi

ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

1133

ಇನ್ನು ಮುಂದೆ ಕಸಾಯಿಖಾನೆಗಳಿಗೆ ಗೋವುಗಳನ್ನು ಮಾರಾಟ ಮಾಡುವಂತಿಲ್ಲ

ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.

ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.

ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.

ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.

5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.

ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.

  • ಗೋವುಗಳನ್ನು ಅಕ್ರಮವಾಗಿ ಮಾರಾಟ ಮಾಡಿದರೆ 7 ವರ್ಷ ಶಿಕ್ಷೆ ಹಾಗೂ 3 ಲಕ್ಷ ರೂ. ದಂಡ ವಿಧಿಸಬಹುದಾಗಿದೆ.
  • ಗೋವು ಮಾಲೀಕ ಮಾರಾಟ ಮಾಡಿದ್ದು ಹಾಗೂ ಖರೀದಿದಾರ ರಸೀದಿ ಹೊಂದಿರಬೇಕು.
  • ಗೋವು ಮಾರಾಟಕ್ಕೆ ಯೋಗ್ಯವೇ ಎಂಬುದನ್ನು ಮೆಟರ್ನಿಟಿ ವೈದ್ಯರು ನಿರ್ಧರಿಸಬೇಕು. ಅವರ ಅನುಮತಿ ಇಲ್ಲದೇ ಮಾರುವಂತಿಲ್ಲ.
  • ಜಾನುವಾರು ಸಾಗಿಸಲು ಸೂಕ್ತ ದಾಖಲೆ ಹೊಂದಿರುವ ವಾಹನಗಳಲ್ಲೇ ಸಾಗಿಸಬೇಕು.
  • ಹಸು, ದನ ಅಥವಾ ಕರುಗಳ ಕೊಂಬುಗಳಿಗೆ, ಕಾಲುಗಳಿಗೆ ಅಥವಾ ದೇಹದ ಯಾವುದೇ ಭಾಗಗಳಿಗೆ ಯಾವುದೇ ರೀತಿಯ ಬಣ್ಣಗಳನ್ನು ಹಚ್ಚುವಂತಿಲ್ಲ.
  • ಅವುಗಳನ್ನು ಅನವಶ್ಯಕವಾಗಿ ಕೊರಳಿಗೆ ಹಗ್ಗ ಬಿಗಿದು ಕಟ್ಟುವಂತಿಲ್ಲ.
  • ಗೋವು ವಾಸಿಸುವ ಸ್ಥಳಗಳಲ್ಲಿ ಉತ್ತಮ ಗಾಳಿ, ಬೆಳಕಿನ ವ್ಯವಸ್ಥೆ, ಉತ್ತಮ ಆಹಾರ, ಶುದ್ಧ ನೀರು ಕೊಡತಕ್ಕದ್ದು.
  • ಪ್ರಾಣಿಗಳಿಗೆ ಯಾವುದೇ ರೀತಿಯ ಅಲಂಕಾರ ಮಾಡುವಂತಿಲ್ಲ. ಒಡವೆ, ಹಾರ ಮುಂತಾದ ಯಾವುದೇ ಅಲಂಕಾರಿಕ ವಸ್ತುಗಳನ್ನು ಹಾಕುವಂತಿಲ್ಲ.
  • ಹಸುವಿನ ಹಾಲು ಕುಡಿಯದಂತೆ ಕರುಗಳ ಬಾಯನ್ನು ಯಾವುದೇ ರೀತಿಯಲ್ಲಿ ಬಂದ್ ಮಾಡುವ ಹಾಗಿಲ್ಲ.
  • ಆ ನಿರ್ದಿಷ್ಟ ಪ್ರಾಣಿಯ ಉಸ್ತುವಾರಿ ಹೊತ್ತಿರುವ ಮನುಷ್ಯ, ಪ್ರಾಣಿಗೆ ಈ ಮೇಲ್ಕಂಡ ಯಾವುದೇ ತೊಂದರೆ ನೀಡಲಾಗಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಂಡಿರಬೇಕು. ಉತ್ತಮ ಆಹಾರ, ನೀರು, ಬೆಳಕು ಸಿಗುತ್ತಿರುವ ಬಗ್ಗೆ ಅರಿವು ಹೊಂದಿರಬೇಕು.
  • ಪ್ರಾಣಿಗಳು ಯಾವುದೇ ರೀತಿಯ ದುರವಸ್ಥೆಯಲ್ಲಿದ್ದರೆ, ಆ ಪ್ರಾಣಿಗಳ ಉಸ್ತುವಾರಿ ಹೊತ್ತಿರುವ ವ್ಯಕ್ತಿಗಳೇ ಆ ತಪ್ಪುಗಳಿಗೆ ಹೊಣೆಗಾರರಾಗುತ್ತಾರೆ.

ಕೇರಳದಲ್ಲಿ ಬಾರಿ ವಿರೋಧ 

ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶಿವೈಕ್ಯರಾದ ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ….

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…

  • ಆಧ್ಯಾತ್ಮ

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ತುಂಬಾ ಜನ 48 ದಿನ ಪೂಜೆ ಮಾಡಿ, 108 ಜಪ ಮಾಡಿ, ಅಖಂಡ ಪೂಜೆ ಮಾಡಿ ಅಂತಾರೆ.. ಆದರೆ 48 ಯಾಕೆ, 108 ಯಾಕೆ ಅಂತ ಕೇಳಿದ್ರೆ, ಹೇಳೋರು ತುಂಬಾ ಕಮ್ಮಿ… ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಹಾಗಾದ್ರೆ 48 ದಿನ ಪೂಜೆ ಮಾಡಿ,…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…