News

govt, modi

ಗೋ ಮಾತೆ ರಕ್ಷಿಸಿವ ಪ್ರಯತ್ನ ಮಾಡಿದ ಭಾರತದ ಮೊದಲ ಧೈರ್ಯವಂತ ಪ್ರಧಾನಿ – ನಮೋ- ನಮೋ

1271

ಇನ್ನು ಮುಂದೆ ಕಸಾಯಿಖಾನೆಗಳಿಗೆ ಗೋವುಗಳನ್ನು ಮಾರಾಟ ಮಾಡುವಂತಿಲ್ಲ

ದೇಶಾದ್ಯಂತ ಗೋ ಹತ್ಯೆ ನಿಷೇಧ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ, ಬಲಿಕೊಡಲು ಅಥವಾ ಕೊಲ್ಲಲು ಕೊಡುವಂತಿಲ್ಲ, ಕೇವಲ ರೈತರಿಗಷ್ಟೇ ಮಾರಾಟ ಮಾಡಬಹುದು ಯಾರಿಗೆ ಮಾರಾಟ ಮಾಡಿದೆ ಅನ್ನೋ ದಾಖಲೆ ಹೊಂದಿರಬೇಕು, ಮಾರಾಟ ಮಾಡಿದ ಮತ್ತು ಖರೀದಿ ಮಾಡಿದ ವ್ಯಕ್ತಿಗಳು ರಸೀದಿ ಹೊಂದಿರಬೇಕು.

ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು ಜಾರಿಗೆ ತರಲು ನಿರ್ಧರಿಸಿದ್ದು ಈ ವಾರವೇ ಅಧಿಸೂಚನೆ ಜಾರಿಯಗುವ ಸಾಧ್ಯತೆಯಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.

ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.

ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.

ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.

5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.

ಸಂಕ್ಷಿಪ್ತ ವಾಗಿ ಏನಿದು ಇಲ್ಲಿ ನೋಡಿ.

  • ಗೋವುಗಳನ್ನು ಅಕ್ರಮವಾಗಿ ಮಾರಾಟ ಮಾಡಿದರೆ 7 ವರ್ಷ ಶಿಕ್ಷೆ ಹಾಗೂ 3 ಲಕ್ಷ ರೂ. ದಂಡ ವಿಧಿಸಬಹುದಾಗಿದೆ.
  • ಗೋವು ಮಾಲೀಕ ಮಾರಾಟ ಮಾಡಿದ್ದು ಹಾಗೂ ಖರೀದಿದಾರ ರಸೀದಿ ಹೊಂದಿರಬೇಕು.
  • ಗೋವು ಮಾರಾಟಕ್ಕೆ ಯೋಗ್ಯವೇ ಎಂಬುದನ್ನು ಮೆಟರ್ನಿಟಿ ವೈದ್ಯರು ನಿರ್ಧರಿಸಬೇಕು. ಅವರ ಅನುಮತಿ ಇಲ್ಲದೇ ಮಾರುವಂತಿಲ್ಲ.
  • ಜಾನುವಾರು ಸಾಗಿಸಲು ಸೂಕ್ತ ದಾಖಲೆ ಹೊಂದಿರುವ ವಾಹನಗಳಲ್ಲೇ ಸಾಗಿಸಬೇಕು.
  • ಹಸು, ದನ ಅಥವಾ ಕರುಗಳ ಕೊಂಬುಗಳಿಗೆ, ಕಾಲುಗಳಿಗೆ ಅಥವಾ ದೇಹದ ಯಾವುದೇ ಭಾಗಗಳಿಗೆ ಯಾವುದೇ ರೀತಿಯ ಬಣ್ಣಗಳನ್ನು ಹಚ್ಚುವಂತಿಲ್ಲ.
  • ಅವುಗಳನ್ನು ಅನವಶ್ಯಕವಾಗಿ ಕೊರಳಿಗೆ ಹಗ್ಗ ಬಿಗಿದು ಕಟ್ಟುವಂತಿಲ್ಲ.
  • ಗೋವು ವಾಸಿಸುವ ಸ್ಥಳಗಳಲ್ಲಿ ಉತ್ತಮ ಗಾಳಿ, ಬೆಳಕಿನ ವ್ಯವಸ್ಥೆ, ಉತ್ತಮ ಆಹಾರ, ಶುದ್ಧ ನೀರು ಕೊಡತಕ್ಕದ್ದು.
  • ಪ್ರಾಣಿಗಳಿಗೆ ಯಾವುದೇ ರೀತಿಯ ಅಲಂಕಾರ ಮಾಡುವಂತಿಲ್ಲ. ಒಡವೆ, ಹಾರ ಮುಂತಾದ ಯಾವುದೇ ಅಲಂಕಾರಿಕ ವಸ್ತುಗಳನ್ನು ಹಾಕುವಂತಿಲ್ಲ.
  • ಹಸುವಿನ ಹಾಲು ಕುಡಿಯದಂತೆ ಕರುಗಳ ಬಾಯನ್ನು ಯಾವುದೇ ರೀತಿಯಲ್ಲಿ ಬಂದ್ ಮಾಡುವ ಹಾಗಿಲ್ಲ.
  • ಆ ನಿರ್ದಿಷ್ಟ ಪ್ರಾಣಿಯ ಉಸ್ತುವಾರಿ ಹೊತ್ತಿರುವ ಮನುಷ್ಯ, ಪ್ರಾಣಿಗೆ ಈ ಮೇಲ್ಕಂಡ ಯಾವುದೇ ತೊಂದರೆ ನೀಡಲಾಗಿಲ್ಲ ಎಂಬುದನ್ನು ಖಾತ್ರಿ ಪಡಿಸಿಕೊಂಡಿರಬೇಕು. ಉತ್ತಮ ಆಹಾರ, ನೀರು, ಬೆಳಕು ಸಿಗುತ್ತಿರುವ ಬಗ್ಗೆ ಅರಿವು ಹೊಂದಿರಬೇಕು.
  • ಪ್ರಾಣಿಗಳು ಯಾವುದೇ ರೀತಿಯ ದುರವಸ್ಥೆಯಲ್ಲಿದ್ದರೆ, ಆ ಪ್ರಾಣಿಗಳ ಉಸ್ತುವಾರಿ ಹೊತ್ತಿರುವ ವ್ಯಕ್ತಿಗಳೇ ಆ ತಪ್ಪುಗಳಿಗೆ ಹೊಣೆಗಾರರಾಗುತ್ತಾರೆ.

ಕೇರಳದಲ್ಲಿ ಬಾರಿ ವಿರೋಧ 

ಹಸುವಿನ ವಧೆ ನಿಷೇಧದ ಬಗ್ಗೆ ಕೇರಳ ಸರ್ಕಾರ ಕೋಪ ವ್ಯಕ್ತಪಡಿಸಿದೆ. ಸುದ್ದಿಗೆ ಪ್ರತಿಕ್ರಿಯಿಸಿದ ಕೇರಳದ ಎಡಪಕ್ಷ ಸರ್ಕಾರವು ಅದು ಫ್ಯಾಸಿಸ್ಟ್ ಚಳುವಳಿ ಎಂದು ಹೇಳಿದೆ.
ವಾಸ್ತವವಾಗಿ, ಕೇರಳದ ಮುಖ್ಯಮಂತ್ರಿ ಪಿನಾರೈ ವಿಜಯನ್ ಅವರು ಟ್ವೀಟ್ ಮಾಡಿದರು: “ಆರ್ಎಸ್ಎಸ್ ಮತ್ತು ಇತರ ಅಂಚುಗಳ ಫ್ಯಾಸಿಸ್ಟ್ ನೀತಿಗಳನ್ನು ಜಾರಿಗೆ ತರಲು ನಾವು (ಕೇಂದ್ರ) ಸರ್ಕಾರವನ್ನು ಅನುಮತಿಸುವುದಿಲ್ಲ. ಇಂತಹ ಹಲವು ಅಧಿಸೂಚನೆಗಳನ್ನು ನಾವು ಬಿಡುಗಡೆ ಮಾಡೋಣ, ನಾವು ಅವರನ್ನು ಅನುಸರಿಸುವುದಿಲ್ಲ “ಎಂದು ಕೇರಳ ಕೃಷಿ ಸಚಿವ ವಿ.ಎಸ್.ಸುನಿಲ್ ಕುಮಾರ್ ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಪ್ರೇಮ, ಸಂಬಂಧ, ಸ್ಪೂರ್ತಿ

    ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.

    ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟ ಸಂಖ್ಯೆಯನ್ನು ತಿಳಿಯಿರಿ…!

    ಶ್ರೀ ಕಟೀಲು ದುರ್ಗಾಪರಮೇಶ್ವರಿ ತಾಯಿಯ ಆಶೀರ್ವಾದದೊಂದಿಗೆ ಈ ರಾಶಿಗಳಿಗೆ ಶುಭಯೋಗ.! ನಿಮ್ಮ ರಾಶಿಯೂ ಇದೆಯಾ ನೋಡಿ.. ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ : (21 ಅಕ್ಟೋಬರ್, 2019)ಅನಂತ ಚೈತನ್ಯ ಮತ್ತು ಉತ್ಸಾಹ ನಿಮ್ಮನ್ನು ಆವರಿಸುತ್ತದೆ ಮತ್ತು ನೀವು ಯಾವುದೇ ಅವಕಾಶವನ್ನು ನಿಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತೀರಿ. ಆರ್ಥಿಕ ನಿರ್ಬಂಧಗಳನ್ನು…

  • ಉಪಯುಕ್ತ ಮಾಹಿತಿ

    ‘ನೋಕಿಯಾ ಸ್ಮಾರ್ಟ್‌ಫೋನ್’ ಈಗ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ..! ತಿಳಿಯಲು ಈ ಲೇಖನ ಓದಿ ..

    ನೋಕಿಯಾ ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್‌ಲೈನ್‌ ಶಾಪಿಂಗ್ ತಾಣ ಸೇರಿದಂದೆ ಆಫ್‌ಲೈನ್‌ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್‌ಫೋನ್ ಲಭ್ಯವಿದೆ.

  • ಉಪಯುಕ್ತ ಮಾಹಿತಿ

    ನಮ್ಮ ದೇಹದ ವಿಚಿತ್ರ ಸತ್ಯಗಳು!!

    ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…