ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ: ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.
ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು
ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
ಪೈಲಟ್ ಇಲ್ಲದ ವಿಮಾನ ತಯಾರಿಸಲು ಬೋಯಿಂಗ್ ಕಂಪನಿ ಮುಂದೆ ಬಂದಿದೆ. ವಿಮಾನ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿರುವ ಬೋಯಿಂಗ್ ಕಂಪನಿ ಮುಂದಿನ ವರ್ಷದ ವೇಳೆಗೆ ಪೈಲಟ್ ಇಲ್ಲದ ವಿಮಾನ ನಿರ್ಮಾಣದ ಕನಸು ನನಸಾಗಿರುವ ಗುರಿ ಹೊಂದಿದೆ.
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಎಂಜಿನಿಯರಿಂಗ್ ಪದವಿ ಕೋರ್ಸ್ ಸೇರುವ ಸಂದರ್ಭದಲ್ಲಿ ಪ್ರಾಂಶುಪಾಲರು ನನಗೆ ಮೂರು ಷರತ್ತುಗಳನ್ನು ವಿಧಿಸಿದ್ದರು ಎಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಡಾ.ಸುಧಾಮೂರ್ತಿ ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡಿದ್ದಾರೆ. ಇದೇ ವೇಳೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ವಿಧಿಸುವ ಷರತ್ತುಗಳ ಕುರಿತು ವಿವರಿಸಿದ್ದಾರೆ. ಸುಧಾಮೂರ್ತಿಯವರು ಹಾವೇರಿ ಜಿಲ್ಲೆಯ ಶಿಗ್ಗಾಂವ್ ಮೂಲದವರಾಗಿದ್ದು, ತಮ್ಮ ಎಂಜಿನಿಯರಿಂಗ್ ಪದವಿಯನ್ನು ಹಾವೇರಿಯ ಬಿವಿಬಿ (ಈಗಿನ ಕೆಎಲ್ಇ) ಕಾಲೇಜಿನಲ್ಲಿ ಓದಿದ್ದಾರೆ. ಈ ಕುರಿತು ಹಿಂದಿಯ ಖಾಸಗಿ ವಾಹಿನಿಯಲ್ಲಿ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ…
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಅನಾಥಶ್ರಮಗಳಲ್ಲಿ ಆಗುತ್ತಿರುವ ಅನಾಚಾರವನ್ನು ಬಯಲಿಗೆಳೆದ ಹಾಗೂ ಭಾರಿ ಹೋರಾಟದ ಬಳಿಕ ಡೌನ್ ಸಿಂಡ್ರೋಮ್ ಇರುವ ಬಾಲಕನನ್ನು ದತ್ತು ಪಡೆದ ಯುವಕನ ಕಥೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಹೌದು, ಹ್ಯೂಮನ್ಸ್ ಆಫ್ ಮುಂಬೈ 26 ವರ್ಷದ ಆದಿತ್ಯ ತಿವಾರಿ ಅವರ ಬಗ್ಗೆ ಪೋಸ್ಟ್ ಮಾಡಿದೆ. 2016ರಲ್ಲಿ ತಿವಾರಿ 26ನೇ ವಯಸ್ಸಿಗೆ ಮಗುವನ್ನು ದತ್ತು ಪಡೆಯುವ ಮೂಲಕ ಅತಿ ಚಿಕ್ಕ ವಯಸ್ಸಿನಲ್ಲಿ ಭಾರತದಲ್ಲಿ ದತ್ತು ಪಡೆದ ವ್ಯಕ್ತಿಯಾಗಿ ದಾಖಲೆ ನಿರ್ಮಿಸಿದರು. ಅಷ್ಟಕ್ಕೂ ಆದಿತ್ಯ ದತ್ತು ಪಡೆದ ಬಾಲಕ…