News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಜ್ಞಾನ

ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

43

ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್‌ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ:  ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್‌ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್‌ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.

ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್‌ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು

ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್‌ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • corona

    ಕೋಲಾರ ಜಿಲ್ಲೆ ಯಲ್ಲಿ ವಾರದೊಳಗೆ 78ಸಾವಿರ ಮಕ್ಕಳಿಗೆ ಉಚಿತ ಲಸಿಕೆ

    ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…

    Loading

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.

  • ಗ್ಯಾಜೆಟ್

    ಜಿಯೋ ಫ್ರೀ 4G ಫೋನ್ ಬುಕಿಂಗ್ ಶುರು!ಇವತ್ತೇ ಬುಕ್ ಮಾಡಿ.ಬುಕ್ ಮಾಡೋದು ಹೇಗೆ ಗೊತ್ತಾ?ಈ ಲೇಖನಿ ಓದಿ…

    ಕೆಲವು ದಿನಗಳ ಹಿಂದಷ್ಟೇ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಜಿಯೋ ಕಂಪನಿ ಕಡಿಮೆ ಬೆಲೆ ಜಿಯೋ ಫ್ಯೂಚರ್ ಫೋನ್ ಬಿಡುಗಡೆ ಮಾಡಿದ್ದರು. ಈ ಜಿಯೋ ಫೋನ್ ಬೆಲೆ ಕೇವಲ 1500ರೂ ಗಳು ಇರಲಿದ್ದು, ಈ 1500ರೂ ಗಳನ್ನು ಡೆಪಾಸಿಟ್ ಮಾಡಿದ್ರೆ, ಮೂರೂ ವರ್ಷದ ನಂತರ ಈ ಹಣವನ್ನು ಹಿಂದಿಗಿಸುವುದಾಗಿ ಹೇಳಿಕೊಂಡಿತ್ತು.

  • ಸುದ್ದಿ

    ಅಧಿಕಾರಿಗಳಿಗೆ ತಲೆನೋವು ತಂದ ಯಡಿಯೂರಪ್ಪನ ಆದೇಶ, ಇಷ್ಟಕ್ಕೂ ಆ ಆದೇಶವಾದರೂ ಏನು? ತಿಳಿಯಿರಿ,.!

    ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತಕ್ಕೆ ಸಿಎಂ ಯಡಿಯೂರಪ್ಪ ಗರಂ ಆಗಿದ್ದಾರೆ. ಐಟಿ ಕಾರಿಡಾರ್‌ನಲ್ಲಿ ಮೊದಲು ಮೆಟ್ರೋ ಮುಗಿಸುವಂತೆ ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಸಿಎಂ ಮುಂದೆ ತಲೆಯಾಡಿಸಿ ಬಂದಿರೋ ಅಧಿಕಾರಿಗಳು, ಈಗ ತಲೆಮೇಲೆ ಕೈ ಹೊತ್ತು ಕುಳಿತಿದ್ದಾರೆ. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡಿರೋ ಸಿಎಂ ಯಡಿಯೂರಪ್ಪ, ನಗರಕ್ಕೆ ಸಂಬಂಧಿಸಿದ ಒಂದೊಂದೇ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸ್ತಿದ್ದಾರೆ. ಇದೇ ರೀತಿ BMRCL ಸಭೆ ನಡೆಸಿದಾಗ ಮೆಟ್ರೋ ಎರಡನೇ ಹಂತದ ಪ್ರಗತಿಗೆ ಸಿಎಂ ತೀವ್ರ ಅಸಮಾದಾನ ವ್ಯಕ್ತಪಡಿಸಿದ್ದಾರೆ….

  • ಸುದ್ದಿ

    ಮೈಸೂರು ದಸರಾ ವೇದಿಕೆಯಲ್ಲೇ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಹಾಗು ನಿವೇದಿತಾ….!

    ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….