News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಜ್ಞಾನ

ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

40

ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್‌ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ:  ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್‌ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್‌ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.

ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್‌ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು

ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್‌ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಮೆ
    Animals, India, tourism

    ಮನುಷ್ಯನಿಲ್ಲದ ಭಾರತದಲ್ಲಿ ರಸ್ತೆಗಳನ್ನು ಪ್ರಾಣಿಗಳು ಅವರಿಸುತ್ತಿವೆ.

    ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…

  • ಸುದ್ದಿ

    ಈ ದ್ವೀಪದ ಪ್ರತಿ ಹೆಜ್ಜೆಯಲ್ಲೂ ಸಾವೇ ಹಿಂಬಾಲಿಸುತ್ತದೆ! ಚರ್ಮ ಮತ್ತು ಮಾಂಸವನ್ನು ಕರಗಿಸಿಬಿಡುವಷ್ಟು ಶಕ್ತಿ ಈ ದ್ವೀಪದಲ್ಲಿದೆ…ಏನೆಂದು ತಿಳಿಯಿರಿ?

    ಬಹುಶಃ ಮಾನವನಿಗೆ ಕಾಲಿಡೋಕೆ ಸಾಧ್ಯವಾಗದೇ ಇರುವ ಕೆಲವು ವಿಸ್ಮಯ ಪ್ರದೇಶಗಳು ನಮ್ಮ ಪ್ರಪಂಚದಲ್ಲಿದ್ದು, ನಾನಾ ನಿಗೂಢತೆಗಳನ್ನು ತನ್ನ ಮಡಿಲಿನಲ್ಲಿ ಬಚ್ಚಿಟ್ಟುಕೊಂಡಿದೆ!! ಹೀಗಿರಬೇಕಾದರೆ ಮುಖ್ಯ ಭೂಭಾಗದೊಂದಿಗೆ ಸಂಪರ್ಕವನ್ನು ಕಡಿದುಕೊಂಡು, ಪ್ರತ್ಯೇಕ ದ್ವೀಪವಾಗಿದ್ದರೂ ಕೂಡ ಅದು ಮಾನವನಿಂದ ಇನ್ನೂ ಮುಟ್ಟಲು ಅಸಾದ್ಯ!! ದ್ವೀಪದೊಳಗೆ ಒಂದು ಬಾರಿ ಕಾಲಿಟ್ಟರೆ ಹಿಂತಿರುಗುವ ಯಾವ ಗ್ಯಾರೆಂಟಿಯೂ ಇಲ್ಲ. ಯಾಕೆಂದರೆ ಪ್ರತಿ ಹೆಜ್ಜೆಯಲ್ಲೂ ಕೂಡ ಸಾವೇ ಹಿಂಬಾಲಿಸುತ್ತದೆ!! ಜಗತ್ತಿನಲ್ಲಿ ತಿಳಿಯದಿರದ ಅದೆಷ್ಟೋ ವಿಷಯಗಳು ಇರುತ್ತವೆ. ಅದರಲ್ಲೂ ವಿಚಿತ್ರವೆನಿಸುವ ಸಂಗತಿಗಳು ಸಾಕಷ್ಟಿದ್ದು, ಕುತೂಹಲಕ್ಕೂ ಕಾರಣವಾಗುತ್ತಲೇ ಇದೆ!! ಈ…

  • ಸುದ್ದಿ, ಸ್ಪೂರ್ತಿ

    3 ಕೋಟಿ ರೂಪಾಯಿ ಬೆಲೆ ಬಾಳುವ ಕಾರನ್ನ ಸಮಾಧಿ ಮಾಡಿದ, ಕಾರಣ ಮಾತ್ರ ಶಾಕಿಂಗ್.

    ಭೂಮಿಯ ಮೇಲೆ ಇರುವ ಅತ್ಯಮೂಲ್ಯ ಜೀವ ಅಂದರೆ ಅದೂ ಮಾನವ, ಇನ್ನು ಮನುಷ್ಯ ಸತ್ತು ಹೋದಾಗ ಆತನನ್ನ ಮಣ್ಣಿನಲ್ಲಿ ಸಮಾಧಿ ಮಾಡುತ್ತಾರೆ ಅಥವಾ ಆತನನ್ನ ಸುಟ್ಟು ಹಾಕುತ್ತಾರೆ. ಸ್ನೇಹಿತರೆ ಇಲ್ಲೊಬ್ಬ ದೊಡ್ಡ ಬಿಸಿನೆಸ್ ಮ್ಯಾನ್ ತನ್ನ ಮೂರೂ ಕೋಟಿ ಬೆಲೆ ಬಾಳುವ ಐಷಾರಾಮಿ ಕರಣ ಮಣ್ಣಿನಲ್ಲೂ ಹೂತು ಮುಂದಾಗಿದ್ದಾನೆ, ಹಾಗಾದರೆ ಆ ಕಾರನ್ನ ಹೂತು ಹಾಕಲು ನಿರ್ಧರಿಸಲು ಕಾರಣ ಏನು ಮತ್ತು ಅದನ್ನ ನೋಡಿದ ಅಲ್ಲಿನ ಜನರು ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ವಿಪರೀತ ಧನಲಾಭವಾಗಲಿದ್ದು ಇದರಲ್ಲಿ ನಿಮ್ಮ ರಾಶಿ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಫೆಬ್ರವರಿ, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…