ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ: ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.
ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು
ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾರ್ಮಿಕ ಕಾಯ್ದೆಯನ್ವಯ ಎಲ್ಲಾ ವಯಗಳಲ್ಲೂ ಕನಿಷ್ಠ ವೇತನ ನೀಡುವ ಹೊಸ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ಕಾನೂನು ಜಾರಿಗೊಂಡರೆ ನಾಲ್ಕು ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕಳೆದು ಹೋಗಿದ್ದ ಅಥವಾ ನಿಮಗೆ ಬರಬೇಕಾದ ಹಣವು ಬರುವ ಸೂಚನೆ ನಿಮಗೆ ತಲುಪುವುದು. ಇದರಿಂದ ನಿಮ್ಮ ಆರ್ಥಿಕ ಸಂಕಷ್ಟಕ್ಕೆ ತೆರೆಬೀಳಲಿದೆ. ಪ್ರತಿಭಾವಂತರಿಗೆ ಉತ್ತಮ ಅವಕಾಶಗಳು ಬರುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಲೂಸಿಯಾ, ಯೂ ಟರ್ನ್ ಮುಂತಾದ ಯಶಸ್ವೀ ಚಿತ್ರಗಳ ನಿರ್ದೇಶಕ ಪವನ್ ಕುಮಾರ್ ಹೊಸದೊಂದು ಚಿತ್ರವನ್ನು ನಿರ್ಮಿಸಿದ್ದಾರೆ. ಆ ಚಿತ್ರದ ಹೆಸರು ‘ಒಂದು ಮೊಟ್ಟೆಯ ಕಥೆ’. ಹಾಗಂತ ಇದು ಕೋಳಿ ಮೊಟ್ಟೆಯ ಕಥೆಯಲ್ಲ. ನಮ್ಮ ನಿಮ್ಮೆಲರ ನಡುವೆ ಓಡಾಡೋ ಹಲವಾರು ಮೊಟ್ಟೆ ತಲೆಗಳ ಕಥೆ. ಅಂದ್ರೆ ತಲೆಯ ಮೇಲೆ ಕೂದಲಿಲ್ಲದೇ ಎಲ್ಲರಿಂದ ‘ಮೊಟ್ಟೆ, ಬಾಲ್ಡಿ, ಚೊಂಬು, ಟಕ್ಲು’ ಎಂದೆಲ್ಲಾ ಕರೆಸಿಕೊಳ್ಳುವವರ ಕಥೆ.
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.
ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.