News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಜ್ಞಾನ

ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

43

ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್‌ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ:  ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್‌ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್‌ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.

ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್‌ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು

ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್‌ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಎಲೆಕ್ಷನ್ ಅಕ್ರಮ ಹಣ ಸಾಗಾಟಕ್ಕೆ ಬ್ರೆಕ್ ಹಾಕಲು ಐಪಿಎಸ್ ಅಧಿಕಾರಿ ರೂಪಾರವರ ಮಾಸ್ಟರ್ ಪ್ಲಾನ್ ಏನು ಗೊತ್ತಾ.?ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇನ್ನೇನು ಕರ್ನಾಟಕದಲ್ಲಿ ಚುನಾವಣಾ ದಿನಾಂಕ ಕೆಲವೇ ದಿನಗಳಲ್ಲಿ ಪ್ರಕಟವಾಗಲಿದೆ. ಎಲೆಕ್ಷನ್ ಅಂದ್ರೆ ನಿಮ್ಗೆ ಗೊತ್ತೇ ಇರುವ ಹಾಗೆ, ಹಣದ ಹೊಳೇನೇ ಹರಿಯುತ್ತದೆ. ದೊಡ್ಡ ದೊಡ್ಡ ವ್ಯಕ್ತಿಗಳು ಹಣವನ್ನು ಮತದಾರರಿಗೆ ತಲುಪುವಂತೆ ಮಾಡಲು ಹಲವಾರು ತಯಾರಿಗಳನ್ನೇ ಮಾಡಿರುತ್ತಾರೆ.ಇದು ಕಾನೂನು ಬಾಹಿರ ಅಂತ ಗೊತ್ತಿದ್ರು ವಿವಿಧ ರೀತಿಯಲ್ಲಿ ಹಣ ಸಾಗಾಟ ಮಾಡುತ್ತಾರೆ. ಆಂಬುಲೆನ್ಸ್ ಗಳಲ್ಲಿ ಹಣ ಸಾಗಾಟ… ಈ ಹಣದ ಸಾಗಾಟ ಮಾಡಲು ರೋಗಿಗಳನ್ನು ಕರೆದೋಯ್ಯುವ ಆಂಬುಲೆನ್ಸ್ ಗಳನ್ನೂ ಬಿಟ್ಟಿಲ್ಲ.ಇದಕ್ಕೆ ಪ್ರಮುಖ ಕಾರಣ ಸಾಮಾನ್ಯವಾಗಿ ಆಂಬುಲೆನ್ಸ್ ಗಳನ್ನು ಪೊಲೀಸರು…

  • ಸೌಂದರ್ಯ

    ಹಣ್ಣಿನ ಹಾಗು ತರಕಾರಿ ಸಿಪ್ಪೆಗಳನ್ನು ಬಿಸಾಡ್ತಿದ್ದೀರಾ!ನಿಲ್ಲಿ, ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ…..

    ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

    ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಸುದ್ದಿ

    ಲಾಲ್‌ಬಾಗ್ ಪುಷ್ಪ ಪ್ರದರ್ಶನದಲ್ಲಿ ಈ ಬಾರಿಯ ವಿಶೇಷತೆಯೇನು ಗೊತ್ತ?

    ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ಆಗಸ್ಟ್ 9ರಿಂದ ಆರಂಭವಾಗಲಿದೆ. ದೇಶ ಸ್ವಾತಂತ್ರ್ಯಗೊಂಡ ನಂತರ ರಾಜಸಂಸ್ಕೃತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ವಿಲೀನಗೊಳಿಸಿದ್ದ ಕೀರ್ತಿಗೆ ಪಾತ್ರರಾಗಿದ್ದ ಜಯಚಾಮರಾಜ ಒಡೆಯರ್ ಅವರ ಜೀವನ ಚರಿತ್ರೆಯನ್ನು ಫಲಪುಷ್ಪಗಳಿಂದ ಅನಾವರಣಗೊಳಿಸಲಾಗುತ್ತದೆ. ಅವರ ಶತಮಾನೋತ್ಸವ ಅಂಗವಾಗಿ ಅವರ ಬಾಲ್ಯ , ಶಿಕ್ಷಣ ಮತ್ತು ಆಡಳಿತದಲ್ಲಿ ರಾಜ್ಯಕ್ಕೆ ಸಲ್ಲಿಸಿದ ಸೇವೆ ಕುರಿತು ಸಾರ್ವಜನಿಕರಿಗೆ ತಿಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಮೈಸೂರು ಸಂಸ್ಥಾನದ ಕೊನೆಯ ದೊರೆಯಾಗಿದ್ದ ಜಯಚಾಮರಾಜೇಂದ್ರ ಒಡೆಯರ್ ಅವರ ಜೀವನ ಚರಿತ್ರೆ ಅವರು ರಾಜ್ಯಕ್ಕೆ…

  • ಸುದ್ದಿ

    ‘ನಿಯಮ ಉಲ್ಲಂಗಿಸಲಿಲ್ಲ’ ‘ಯಾವುದೆ ವಿದೇಶೀಯ ಫಂಡ್ಸ್ ಪಡೆದಿಲ್ಲ’ ; ಇನ್ಫೋಸಿಸ್

    ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…