News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಜ್ಞಾನ

ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

40

ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್‌ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ:  ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್‌ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್‌ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.

ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್‌ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು

ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್‌ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ವಿಜ್ಞಾನಿಗಳಿಂದ ಕಡೆಗೊ ಬಯಲಾಯ್ತು ಉತ್ತರ; ಕೋಳಿ ಮೊದಲೋ..? ಮೊಟ್ಟೆ ಮೊದಲೋ..? ತಿಳಿಯಲು ಈ ಲೇಖನ ಓದಿ …

    ಈ ಜಗತ್ತಿನಲ್ಲಿ ಉತ್ತರ ಸಿಗದಂತಹ ಪ್ರಶ್ನೆಗಳು ಹಲವಾರಿವೆ ಅವುಗಳಲ್ಲೊಂದು ಕೋಳಿ ಮೊಟ್ಟ ಮೊದಲು ಬಂದಿದ್ದು? ಅಥವಾ ಮೊಟ್ಟೆ ಮೊಟ್ಟ ಮೊದಲು ಬಂದಿದ್ದು ? ಕೊನೆಗೂ ಇದಕ್ಕೆ ವಿಜ್ಞಾನಿಗಳಿಂದ ಉತ್ತರ ಲಭ್ಯವಾಗಿದೆ.

  • ಸಿನಿಮಾ

    ಬಿಚ್ಚಮ್ಮ ಸನ್ನಿ ಲಿಯೋನ್ ಮೇಲೆ ಎಫ್‍ಐಆರ್!ಅಸಲಿ ಕಾರಣ ಏನು ಗೊತ್ತಾ?

    ಇತ್ತೀಚೆಗಷ್ಟೇ ಜೂನಿಯರ್ ಇಂಜಿನಿಯರ್ ಲಿಸ್ಟ್ ನಲ್ಲಿ ಟಾಪರ್ ಆಗಿ ಆಯ್ಕೆ ಆಗಿದ್ದ ಸನ್ನಿ ಲಿಯೋನ್ ವಿರುದ್ಧ ಈಗ ಎಫ್‍ಐಆರ್ ದಾಖಲಾಗಿದೆ. ಆದರೆ ಈ ಬಗ್ಗೆ ಸನ್ನಿ ಲಿಯೋನ್ ಅಭಿಮಾನಿಗಳು ಬೇಸರಗೊಳ್ಳುವ ಅಗತ್ಯವಿಲ್ಲ. ಏಕೆಂದರೆ ಕೇಸ್ ದಾಖಲಾಗಿರುವುದು “ಸನ್ನಿ ಲಿಯೋನ್” ಹೆಸರಿನಲ್ಲಿ ನಕಲಿ ದಾಖಲೆ ಸಲ್ಲಿಸಿ ಆಯ್ಕೆ ಆಗಿರುವ ಅಭ್ಯರ್ಥಿ ಮೇಲೆ. ಬಿಹಾರದ ಪಬ್ಲಿಕ್ ಹೆಲ್ತ್ ಇಂಜಿನಿಯರಿಂಗ್ ಡಿಪಾರ್ಟ್‍ಮೆಂಟ್ (ಪಿಎಚ್‍ಇಡಿ)ನ ಜೂನಿಯರ್ ಇಂಜಿನಿಯರ್ ಮೆರಿಟ್ ಲಿಸ್ಟ್ ನಲ್ಲಿ ಸನ್ನಿ ಲಿಯೋನ್ ಹೆಸರು ಟಾಪರ್ ಸ್ಥಾನದಲ್ಲಿತ್ತು. ಆಕೆ ಶೇ. 98.50…

  • ಸುದ್ದಿ

    ಎಚ್ಚರಿಕೆ ಕಾವೇರಿ ನೀರು ಬಿಟ್ಟರೆ ಜನ ದಂಗೆ ಏಳ್ತಾರೆ: ಮಾದೇಗೌಡ ……!

    ತಮಿಳುನಾಡಿಗೆ ನೀರು ಬಿಡುವಂತೆ ಕೇಂದ್ರ ಜಲ ಆಯೋಗ ಆದೇಶಿಸಿರುವ ಬೆನ್ನಲ್ಲೇ, ಮಂಡ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಈ ಆದೇಶ ಹೊರಬೀಳುತ್ತಿದ್ದಂತೆಯೇ ಜಿಲ್ಲೆಯ ವಿವಿಧೆಡೆ ರೈತರು ರಸ್ತೆಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ಮಂಡ್ಯ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿಲ್ಲದೆ ಜನರು ಪರದಾಡುತ್ತಿದ್ದಾರೆ. ನಾಲೆಗಳಿಗೆ ನೀರು ಬಿಡದೆ ಬೆಳೆದ ಬೆಳೆಗಳು ಒಣಗುತ್ತಿವೆ. ಬೆಂಗಳೂರಿಗೆ ಕುಡಿಯುವ ನೀರು ಹರಿಸಲು ಸಹ ಇರುವ ಸಂಗ್ರಹದಲ್ಲಿರುವ ನೀರು ಸಾಲುವುದಿಲ್ಲ. ಪರಿಸ್ಥಿತಿ…

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • Health

    ಪಪ್ಪಾಯಿ ಹಣ್ಣು ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಗೊತ್ತಾ…?

    ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…