ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ: ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.
ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು
ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ತರಕಾರಿಗಳಂತೆ ಕಾಳುಗಳಲ್ಲಿಯೂ ಸಹ ವಿಶೇಷವಾಗ ಪೋಷಕಾಂಶಗಳು ಇವೆ ಎಂಬುದು ನಮ್ಮೆಲ್ಲರಿಗೂ ತಿಳಿದಿರುವ ವಿಷಯ. ಕಾಳುಗಳನ್ನ ಮೊಳಕೆ ಕಟ್ಟಿ ತಿಂದರೆ ಇನ್ನು ಉತ್ತಮ. ಬನ್ನಿ ಹಾಗಾದರೆ ಮೊಳಕೆ ಕಾಳುಗಳಿಂದ ಏನೆಲ್ಲಾ ಪ್ರಯೋಜನಗಳು ನಮಗೆ ಲಭ್ಯ ಎಂಬುದನ್ನ ತಿಳಿದು ಕೊಳ್ಳೋಣ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು.
ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…