ವಿಜ್ಞಾನ

ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

40

ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್‌ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ:  ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್‌ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್‌ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.

ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್‌ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು

ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್‌ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational, ಸುದ್ದಿ

    ಕೇವಲ ಒಂದು ಸೇಬಿಗಾಗಿ ಬಿಗ್ ಮನೆಯಲ್ಲಿ ಸ್ಪರ್ಧಿಗಳ ರಂಪಾಟ..!

    ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….

  • ಸ್ಪೂರ್ತಿ

    ಹೆಣ್ಣಿಗಿರುವ ಛಲ ಬೇರೆ ಯಾರಿಗೂ ಇಲ್ಲ, ಛಲವಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಈ ಹುಡುಗಿ ಉದಾಹರಣೆ..!ತಿಳಿಯಲು ಇದನ್ನು ಓದಿ..

    ಹೆಣ್ಣು ಮನಸ್ಸು ಮಾಡಿದರೆ ಎಂತಹ ಕಷ್ವವನ್ನೂ ಮೀರಿ ನಿಂತು ಛಲದಂಕಮಲ್ಲಿಯಾಗುತ್ತಾಳೆ. ಅಂಗವೈಕಲ್ಯವನ್ನೂ ಮೀರಿ ನಿಲ್ಲುವ ಸಾಮರ್ಥ ಅವಳಿಗಿದೆ. ಸಾಧನೆ ಮಾಡುವ ಮನಸ್ಸಿದ್ದರೆ ಛಲವಿದ್ದರೆ ಯಾವುದೂ ಕಷ್ಟಸಾಧ್ಯವಲ್ಲ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ ನಿಕಿತಾ ಶುಕ್ಲಾ ಎನ್ನುವ ಈ ಹುಡುಗಿ.

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • ದೇಶ-ವಿದೇಶ

    ಈ ಮಹಿಳೆ ಪ್ರಧಾನಿ ಮೋದಿಯನ್ನೇ ಮದುವೆಯಾಗ್ಬೇಕಂತೆ..!ಎಷ್ಟು ತಿಂಗಳಿಂದ ಧರಣಿ ಕುಳಿತ್ತಿದ್ದಾರೆ ಗೊತ್ತಾ..?

    ಪ್ರಧಾನಿ ನರೇಂದ್ರ ಮೋದಿಅವರನ್ನು ಮದುವೆಯಾಗಬೇಕು ಅಂತ 40 ವರ್ಷದ ಮಹಿಳೆಯೊಬ್ಬರು,ಸೆಪ್ಟೆಂಬರ್ 8ರಿಂದ ದೆಹಲಿಯ ಜಂತರ್ ಮಂತರ್ ಬಳಿ ಧರಣಿ ಕುಳಿತಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…