ವಿಜ್ಞಾನ

ಆತಂಕ ಉಂಟು ಮಾಡಿದ ಚಂದ್ರಯಾನದ ಕೊನೆ 15 ನಿಮಿಷ,..!

40

ಬೆಂಗಳೂರು, ಮಹತ್ವಾಕಾಂಕ್ಷಿ ಚಂದ್ರಯಾನ-2 ನೌಕೆಯ ಸಂಪರ್ಕ ಕೊನೆ ಕ್ಷಣದಲ್ಲಿ ಕಡಿತಗೊಂಡಿದೆ. ಇದರಿಂದಾಗಿ ಭೂಮಿಯ ನೈಸರ್ಗಿಕ ಉಪಗ್ರಹ ಚಂದ್ರನ ಒಡಲಲ್ಲಿ ಅಡಗಿರುವ ಅನೂಹ್ಯ ರಹಸ್ಯಗಳನ್ನು ಭೇದಿಸುವ ಗುರಿ ಹೊಂದಿದ್ದ ಇಸ್ರೋಗೆ ಕೊಂಚ ಹಿನ್ನಡೆಯಾಗಿದೆ.

ಚಂದ್ರನ ಅಂಗಳದ ಮೇಲೆ ಲ್ಯಾಂಡರ್ ಅನ್ನು ಇಳಿಸುವ ಕೊನೆಯ 15ನಿಮಿಷ ಭಾರೀ ಕಷ್ಟದ ಕ್ಷಣಗಳು ಎಂದು ಇಸ್ರೋ ಈ ಮೊದಲೇ ಹೇಳಿತ್ತು. ಹೀಗಾಗಿ ಮೊದಲ ಕೆಲವು ಕ್ಷಣಗಳು ಸುಸೂತ್ರವಾಗಿ ನೆರವೇರಿದರೂ ಇನ್ನೇನು ಚಂದ್ರನ ಅಂಗಳ 2.1 ಕಿ.ಮೀ ದೂರ ಇರುವಂತೆ ಲ್ಯಾಂಡರ್ ನೌಕೆ ಸಂಪರ್ಕ ಕಡಿದುಕೊಂಡಿತು. ಈ ವೇಳೆ ಇಸ್ರೋ ಕೇಂದ್ರದಲ್ಲಿ ಆತಂಕದ ವಾತಾವರಣ ಉಂಟಾಗಿತ್ತು. ಸಿಗ್ನಲ್‌ಗಾಗಿ ಕೆಲ ಹೊತ್ತು ನಿರೀಕ್ಷಿಸಲಾಯಿತು. ಆದರೆ ಯಾವುದೇ ಧನಾತ್ಮಕ ಫಲ ಸಿಗಲಿಲ್ಲ. ಕೊನೆಗೆ ಇಸ್ರೋ ಅಧ್ಯಕ್ಷ ಶಿವನ್ ಅವರು ಲ್ಯಾಂಡರ್ 2.1 ಕಿ. ಮೀ.ವರೆಗೆ ಸುಸೂತ್ರವಾಗಿ ಕೆಲಸ ಮಾಡಿದೆ. ಆ ನಂತರ ಸಿಗ್ನಲ್ ಕಡಿತಗೊಂಡಿದೆ. ಇದರ ಡೇಟಾವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಘೋಷಿಸಿದರು.

ಮೋದಿ ವೀಕ್ಷಣೆ:  ಇಸ್ರೋದ ಕೌತುಕ ಕ್ಷಣವನ್ನು ವೀಕ್ಷಿಸಲು ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದರು. ವಿಜ್ಞಾನಿಗಳ ಜತೆ ಕೂತು ವೀಕ್ಷಿಸಿದರು. ಸಿಗ್ನಲ್ ಕಡಿತಗೊಂಡ ಬಳಿಕ ವಿಜ್ಞಾನಿಗಳು ಪ್ರಧಾನಿಯವರಿಗೆ ಮಾಹಿತಿ ನೀಡಿದರು. ನಮ್ಮ ವಿಜ್ಞಾನಿಗಳು ದೇಶದ ಹೆಮ್ಮೆ. ನಿಮ್ಮೊಂದಿಗೆ ನಾವಿದ್ದೇವೆ. ಮುಂದೆ ಹೆಜ್ಜೆ ಹಾಕೋಣ ಎಂದು ಹೇಳಿದರು. ಬಳಿಕ ಚಂದ್ರಯಾನ ವೀಕ್ಷಿಸಲು ಆಗಮಿಸಿದ್ದ ಮಕ್ಕಳ ಜತೆ ಸಂವಾದ ನಡೆಸಿದರು.ಲ್ಯಾಂಡರ್ ಮತ್ತು ರೋವರ್ ಅನ್ನು ಚಂದ್ರನ ಮೇಲೆ ಸಾಫ್ಟ್‌ಲ್ಯಾಂಡಿಂಗ್ ಮಾಡುವುದು ರೋಚಕ ಮತ್ತು ಭಯಾನಕ ಕ್ಷಣವಾಗಿದ್ದು, ಇದೊಂದು ರೀತಿ ಮಗುವನ್ನು ತೊಟ್ಟಿಲಿನಲ್ಲಿ ಹಾಕುವ ರೀತಿಯ ಪ್ರಕ್ರಿಯೆಯಾಗಿದೆ ಎಂದು ಹಿರಿಯ ವಿಜ್ಞಾನಿಯೊಬ್ಬರು ಹೇಳಿದ್ದರು. ಹೀಗಾಗಿ ವಿಜ್ಞಾನಿಗಳಲ್ಲಿ ವಿಶ್ವಾಸವಿದ್ದರೂ ಎಲ್ಲೋ ಒಂದು ಕಡೆ ಆತಂಕವೂ ಇತ್ತು.

ಏನಾಯ್ತು? :ಚಂದ್ರನ ಮೇಲ್ಮೈನಿಂದ 30 ಕಿ.ಮೀ. ಎತ್ತರದಲ್ಲಿ ಹಾರಾಡುತ್ತಿದ್ದ ಲ್ಯಾಂಡರ್ ಅನ್ನು ತಡರಾತ್ರಿ 1.35ಕ್ಕೆ ಇಳಿಸುವ ರಫ್ ಬ್ರೇಕಿಂಗ್ ಹಂತವನ್ನು ನೆರವೇರಿಸಲಾಯಿತು. ನಂತರ 10 ನಿಮಿಷಗಳ ನಂತರ 7 ಕಿ.ಮೀ. ಎತ್ತರಕ್ಕೆ ಇಳಿಸುವ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಡೆಯಿತು. ನಂತರ ಲೋಕಲ್ ನೇವಿಗೇಶನ್ ಆರಂಭವಾಗಿ, ಲ್ಯಾಂಡರ್ ಪೋಟೋವನ್ನು ಇಸ್ರೋಗೆ ಕಳುಹಿಸುವ ಪ್ರಕ್ರಿಯೆ ನಡೆಯಬೇಕಿತ್ತು. ಬಳಿಕ ಲ್ಯಾಂಡರ್ ಚಂದ್ರನ ಮೇಲೆ ನಿಧಾನವಾಗಿ ಇಳಿಯಬೇಕಿತ್ತು. ಆದರೆ ಫೈನ್ ಬ್ರೇಕಿಂಗ್ ಪ್ರಕ್ರಿಯೆ ನಂತರ ಲ್ಯಾಂಡರ್ ಸಂಪರ್ಕ ಕಡಿದುಹೋಯಿತು. ಇಸ್ರೋ ಟಿವಿ ಮಾನಿಟರ್‌ಗಳಲ್ಲಿ ಲ್ಯಾಂಡರ್ ನಿರ್ದಿಷ್ಟ ಪಥ ಬಿಟ್ಟು ಬೇರೆಡೆ ಚಲಿಸಿದ ಬಗ್ಗೆ ಕಾಣಿಸುತ್ತಿತ್ತು. ಈ ವೇಳೆ ಎಲ್ಲರಲ್ಲಿ ಆತಂಕ ಮನೆ ಮಾಡಿತ್ತು. ಕೆಲ ಹೊತ್ತು ಕಾದರೂ ಸಂಪರ್ಕ ಸಿಗಲಿಲ್ಲ. ಆಗ ಇಸ್ರೋ ಅಧ್ಯಕ್ಷ ಶಿವನ್ ಅವರು ಸಿಗ್ನಲ್ ಕಡಿತಗೊಂಡಿದೆ. ಡೇಟಾ ವಿಶ್ಲೇಷಿಸುತ್ತೇವೆ ಎಂದು ಹೇಳಿದರು.

ಜು.22ರಂದು ಆಂಧ್ರದ ಶ್ರೀಹರಿಕೋಟ ನೆಲೆಯಿಂದ ಜಿಎಸ್ ಎಲ್‌ವಿ ರಾಕೆಟ್ ಮೂಲಕ ಚಂದ್ರಯಾನ-2 ನೌಕೆ ಉಡಾವಣೆಯಾಗಿತ್ತು. ಈ ನೌಕೆಯಲ್ಲಿ ಆರ್ಬಿಟರ್, ರೋವರ್ ಅನ್ನು ಒಡಲಲ್ಲಿಟ್ಟುಕೊಂಡ ಲ್ಯಾಂಡರ್ ಇದ್ದವು. ಸೆ.2ರಂದು ಗಣೇಶ ಹಬ್ಬದ ದಿನದಂದು ಆರ್ಬಿಟರ್ ಹಾಗೂ ಲ್ಯಾಂಡರ್ ಪ್ರತ್ಯೇಕಗೊಂಡಿದ್ದವು

ಸಾಫ್ಟ್ ಲ್ಯಾಂಡಿಂಗ್ ಆಗ ಹುಟ್ಟಿದ ಮಗುವಿದ್ದಂತೆ: ಸಾಫ್ಟ್‌ಲ್ಯಾಂಡಿಂಗ್ ನಮಗೆ ಹೊಸದಾದ ಹಾಗೂ ಸಂಕೀರ್ಣತೆಯ ಪ್ರಕ್ರಿಯೆ. 15 ನಿಮಿಷವು ನಮಗೆ ಭಯಾನಕ. ಇದೊಂದು ರೀತಿ ಯಾರೋ ಒಬ್ಬರು ಆಗಷ್ಟೇ ಹುಟ್ಟಿದ ಮಗುವನ್ನು ಅನಿರೀಕ್ಷಿತವಾಗಿ ನಿಮ್ಮ ಕೈಗೆ ಇಟ್ಟಂತೆ. ಅಗತ್ಯದ ಸಹಾಯವಿಲ್ಲದೆ ಮಗುವನ್ನು ಎತ್ತಿಕೊಳ್ಳಲು ನಿಮ್ಮಿಂದ ಸಾಧ್ಯವೇ? ಸಹಾಯವಿಲ್ಲದೆ ಮಗುವನ್ನು ಎತ್ತಿಕೊಂಡರೆ, ಆ ಕಡೆಯಿಂದ ಈ ಕಡೆಗೆ ಮಗು ಅಲ್ಲಾಡುತ್ತದೆ. ಅದಕ್ಕಾಗಿ ಮಗುವನ್ನು ನಾವು ಹಿಡಿದಿಟ್ಟುಕೊಳ್ಳಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಉಗ್ರ ಸಂಘಟನೆಯ ಮುಕಂಡನನ್ನು ಅಟ್ಟಾಡಿಸಿ ಕೊಂದ ನಮ್ಮ ಹೆಮ್ಮೆಯ ಭಾರತೀಯ ಸೇನೆ

    ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್‍ ಮುಜಾಹಿದ್ದೀನ್ ಮುಖಂಡ ಸಬ್ಜಾರ್‍ ಅಹ್ಮದ್‍ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್‍ ವಾನಿ ನಂತರ ಸಬ್ಜಾರ್ ಅಹ್ಮದ್‍ ಹಿಜ್ಬುಲ್‍ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.

  • ಆಧ್ಯಾತ್ಮ

    ‘ಬಟಾಣಿ’ಯಲ್ಲಿರುವ 09 ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಬಟಾಣಿ ತಿಂದ್ರೆ ವಾಯು ಬರತ್ತೆ ಅನ್ನೋರೆಲ್ಲಾ ಇಲ್ಕೇಳಿ. ಬಟಾಣಿ ಗಿಡ ನಮ್ ದೇಶದಲ್ಲಿ ಹುಟ್ಟಿದಲ್ಲ. ಇದು ವಿಚಿತ್ರವಾಗಿರೋ ಗಿಡಗಳ ಸಾಲ್ನಲ್ಲಿ ಸೇರತ್ತೆ. ಆದ್ರೂ ಕೂಡಾ ಇದ್ರ ಉಪಯೋಗ ಇದ್ಯಲ್ಲಾ ಅದು ಒಂದೆರಡಲ್ಲ. ಇದ್ರಲ್ಲಿರೋ ಪಿಷ್ಟ ಇದ್ನ ಸಿಹಿಯಾಗಿರೋವಾಗೆ ಮಾಡ್ಸತ್ತೆ. ಇದ್ರಲ್ಲಿರೋ ಫೈಟೋ ನ್ಯುಟ್ರಿಯಂಟ್ಸ್ ಹೊಟ್ಟೆಗೆ ಸಂಬಂಧಿಸಿದ ಕ್ಯಾನ್ಸರನ್ನ ಗುಣಪಡ್ಸತ್ತೆ.

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸೀಬೆಹಣ್ಣಿನಲ್ಲಿರುವ ಆರೋಗ್ಯದ ಗುಟ್ಟು ತಿಳಿದರೆ ನೀವು ಅಚ್ಚರಿ ಪಡುತ್ತೀರಿ! ಈ ಅರೋಗ್ಯ ಮಾಹಿತಿ ನೋಡಿ.

    ಸೀಬೆ ಹಣ್ಣು “ಬಡವರ ಸೇಬು” ಎಂದರೆ ಅತಿಶಯೋಕ್ತಿಯೇನಲ್ಲ. ಇದರಲ್ಲಿರುವ ಪೌಷ್ಟಿಕಾಂಶ ಗಳನ್ನು ಅವಲೋಕಿಸಿದಾಗ, ಸೇಬಿನ ಗುಣಗಳನ್ನು ಹೊಂದಿದ್ದು ಅತ್ಯಂತ ಕಡಿಮೆ ಬೆಲೆಯಲ್ಲಿ ದೊರೆಯುವ ಹಣ್ಣಾಗಿದೆ. ಸೀಬೆ ಹಣ್ಣಿನ ತವರು ಅಮೆರಿಕ ಆದರೆ ಇದರ ಪ್ರಸ್ತುತ ಎಲ್ಲಾ ಕಡೆಗಳಲ್ಲೂ ಬೆಳೆಯಲಾಗುತ್ತದೆ. ಸೀಬೆ ಹಣ್ಣಿನ – ಬೇರು, ಎಲೆ, ಹೂವು, ಕಾಯಿ, ಹಣ್ಣು ಇವುಗಳೆಲ್ಲವೂ ಉಪಯುಕ್ತ ಭಾಗಗಳಾಗಿವೆ. ಪೋಷಕಾಂಶಗಳು(100 ಗ್ರಾಂ ಸೀಬೆಹಣ್ಣಿನಲ್ಲಿ ದೊರೆಯುವ ಪೌಷ್ಟಿಕಾಂಶಗಳು ಹೀಗಿವೆ) ತೇವಾಂಶ-85.3ಸಸಾರಜನಕ- 0.1 ಗ್ರಾಂಮೇದಸ್ಸು – 0.2 ಗ್ರಾಂಖನಿಜಾಂಶ – – 0.6 ಗ್ರಾಂಕಾರ್ಬೋಹೈಡ್ರೇಟ್ಸ್…

  • ಸುದ್ದಿ

    ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ 7 ಟೀಚರ್ ಗಳು ಏಕಕಾಲದಲ್ಲಿ ಗರ್ಭಿಣಿಯರು.!

    ಅಮೆರಿಕದ ಗೊಡಾರ್ಡ್ ನಗರದ ಪ್ರಾಥಮಿಕ ಶಾಲೆಯ ಏಳು ಶಿಕ್ಷಕಿಯರು ಏಕಕಾಲದಲ್ಲಿ ಗರ್ಭಿಣಿಯರಾಗಿದ್ದಾರೆ. ಏಳು ಶಿಕ್ಷಕಿಯರು 15 ರಿಂದ 1 ತಿಂಗಳ ಆಸುಪಾಸಿನಲ್ಲಿ ಏಕಕಾಲದಲ್ಲಿ ಹೆರಿಗೆ ರಜೆಗೆ ಅರ್ಜಿ ಸಲ್ಲಿಸಿದ್ದಾರೆ. ಎಲ್ಲಾ ಮಹಿಳಾ ಸಹದ್ಯೋಗಿಗಳು ಏಕಕಾಲದಲ್ಲಿ ತಾಯಿ ಆಗುತ್ತಿದ್ದೇವೆ. ಏಳು ಶಿಕ್ಷಕಿಯರು ಒಂದೇ ಬಾರಿ ಗರ್ಭಿಣಿ ಆಗಬೇಕೆಂಬುವುದು ದೇವರ ಇಚ್ಛೆ. ಶಿಕ್ಷಕಿ ಟಿಫನಿ ಎಂಬವರು ಮೂರನೇ ಬಾರಿ ಗರ್ಭಿಣಿಯಾಗಿದ್ದು, ಅವರಿಗೆ 9 ಮತ್ತು 7 ವರ್ಷದ ಮಕ್ಕಳಿವೆ ಎಂದು ಶಿಕ್ಷಕಿ ಕೈಟಿ ಸಂತಸ ವ್ಯಕ್ತಪಡಿಸುತ್ತಾರೆ. ನನ್ನ 20 ವರ್ಷದ…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…